Homeಮುಖಪುಟ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ...’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

- Advertisement -
- Advertisement -

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಭಾರತೀಯ ರೈತರ ಹೋರಾಟದ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಟ್ವೀಟ್ ಮಾಡಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಏಕಾಏಕಿಯಾಗಿ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ಇದರಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಕೇಂದ್ರ ಸರ್ಕಾರ ಅದನ್ನು ಸರಿ ಪಡಿಸಲು, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ಈ ಹ್ಯಾಶ್‌ಟ್ಯಾಗ್‌‌ ಅನ್ನು ಬಳಸಿಕೊಂಡು, ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿದ್ದರು. ಜೊತೆಗೆ ಪ್ರೊಪಗಾಂಡ(ಅಪಪ್ರಚಾರ)ದ ವಿರುದ್ದ ಭಾರತ ಎಂದು ಟ್ವೀಟ್ ಮಾಡಿದ್ದರು.

ಈ ಹಿನ್ನಲೆಯಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ದ ಪ್ರತಿಬಾರಿ ಬಗ್ಗೆ ಧ್ವನಿ ಎತ್ತಿಕೊಂಡೆ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು, “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ. ಅದರ ಬದಲು ಉಳಿದವರಿಗೆ ಪ್ರೊಪಗಂಡಾ ಕಲಿಸುವ ಟೀಚರ್‌ ಆಗಬೇಡಿ” ಎಂದು ಮೇಲಿನ ಸೆಲೆಬ್ರಿಟಿಗಳಿಗೆ ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಪ್ರಸ್ತುತ ಟ್ವೀಟ್ ವೈರಲ್ ಆಗಿದ್ದು ಹಲವರು ತಾಪ್ಸಿ ಪನ್ನುಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ವಿಧಾನ ಸಭಾ ಅಧಿವೇಶನದ ಫೇಸ್‌ಹಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...