Homeಮುಖಪುಟ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ...’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

- Advertisement -
- Advertisement -

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಭಾರತೀಯ ರೈತರ ಹೋರಾಟದ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಟ್ವೀಟ್ ಮಾಡಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಏಕಾಏಕಿಯಾಗಿ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ಇದರಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಕೇಂದ್ರ ಸರ್ಕಾರ ಅದನ್ನು ಸರಿ ಪಡಿಸಲು, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ಈ ಹ್ಯಾಶ್‌ಟ್ಯಾಗ್‌‌ ಅನ್ನು ಬಳಸಿಕೊಂಡು, ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿದ್ದರು. ಜೊತೆಗೆ ಪ್ರೊಪಗಾಂಡ(ಅಪಪ್ರಚಾರ)ದ ವಿರುದ್ದ ಭಾರತ ಎಂದು ಟ್ವೀಟ್ ಮಾಡಿದ್ದರು.

ಈ ಹಿನ್ನಲೆಯಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ದ ಪ್ರತಿಬಾರಿ ಬಗ್ಗೆ ಧ್ವನಿ ಎತ್ತಿಕೊಂಡೆ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು, “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ. ಅದರ ಬದಲು ಉಳಿದವರಿಗೆ ಪ್ರೊಪಗಂಡಾ ಕಲಿಸುವ ಟೀಚರ್‌ ಆಗಬೇಡಿ” ಎಂದು ಮೇಲಿನ ಸೆಲೆಬ್ರಿಟಿಗಳಿಗೆ ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಪ್ರಸ್ತುತ ಟ್ವೀಟ್ ವೈರಲ್ ಆಗಿದ್ದು ಹಲವರು ತಾಪ್ಸಿ ಪನ್ನುಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ವಿಧಾನ ಸಭಾ ಅಧಿವೇಶನದ ಫೇಸ್‌ಹಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...