Homeಮುಖಪುಟ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ...’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

- Advertisement -
- Advertisement -

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಭಾರತೀಯ ರೈತರ ಹೋರಾಟದ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಟ್ವೀಟ್ ಮಾಡಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಏಕಾಏಕಿಯಾಗಿ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ಇದರಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಕೇಂದ್ರ ಸರ್ಕಾರ ಅದನ್ನು ಸರಿ ಪಡಿಸಲು, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ಈ ಹ್ಯಾಶ್‌ಟ್ಯಾಗ್‌‌ ಅನ್ನು ಬಳಸಿಕೊಂಡು, ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿದ್ದರು. ಜೊತೆಗೆ ಪ್ರೊಪಗಾಂಡ(ಅಪಪ್ರಚಾರ)ದ ವಿರುದ್ದ ಭಾರತ ಎಂದು ಟ್ವೀಟ್ ಮಾಡಿದ್ದರು.

ಈ ಹಿನ್ನಲೆಯಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ದ ಪ್ರತಿಬಾರಿ ಬಗ್ಗೆ ಧ್ವನಿ ಎತ್ತಿಕೊಂಡೆ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು, “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ. ಅದರ ಬದಲು ಉಳಿದವರಿಗೆ ಪ್ರೊಪಗಂಡಾ ಕಲಿಸುವ ಟೀಚರ್‌ ಆಗಬೇಡಿ” ಎಂದು ಮೇಲಿನ ಸೆಲೆಬ್ರಿಟಿಗಳಿಗೆ ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಪ್ರಸ್ತುತ ಟ್ವೀಟ್ ವೈರಲ್ ಆಗಿದ್ದು ಹಲವರು ತಾಪ್ಸಿ ಪನ್ನುಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ವಿಧಾನ ಸಭಾ ಅಧಿವೇಶನದ ಫೇಸ್‌ಹಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...