Homeಕರ್ನಾಟಕ'ಡಿಕೆಶಿ, ಶಾಮನೂರರಿಗೆ ಹೆದರಬೇಡಿ, ಧೈರ್ಯವಾಗಿರಿ': ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್

‘ಡಿಕೆಶಿ, ಶಾಮನೂರರಿಗೆ ಹೆದರಬೇಡಿ, ಧೈರ್ಯವಾಗಿರಿ’: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್

- Advertisement -
- Advertisement -

ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿಕೆ ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದಾರೆ. ನೀವು ಯಾವ ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪನವರಿಗೂ ಹೆದರಬೇಡಿ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿದ ಅವರು, ”ಕಾಂಗ್ರೆಸ್‌ನವರೇ ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಕುತಂತ್ರ ಮಾಡುತ್ತಿದ್ದಾರೆ. ಆಡಳಿತ ಮಾಡಲು ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್‌ನವರೇ ಬಿಡುತ್ತಿಲ್ಲ. ಒಬ್ಬೊಬ್ಬರಾಗಿ ಶಾಸಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

”ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿಕೆ ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದಾರೆ. ಹೀಗಾಗಿ, ತಮ್ಮದೇ ಹಾದಿಯಲ್ಲಿ ಸಿಎಂ ಸಿದ್ದರಾಮಯ್ಯ ಹೋಗುತ್ತಿದ್ದಾರೆ. ಕರ್ನಾಟಕದ ಜನರು ಸಿದ್ದರಾಮಯ್ಯ ಅವರ ಮೇಲಿನ ವಿಶೇಷವಾದ ಪ್ರೀತಿಯಿಂದಲೇ ಮತ ಹಾಕಿ 135 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ತೆಗೆದುಕೊಳ್ಳಬೇಕು” ಎಂದು ಸಿಎಂ ಪರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಬ್ಯಾಟಿಂಗ್ ಮಾಡಿದ್ದಾರೆ.

ಲಿಂಗಾಯತರನ್ನು ಸಿಎಂ ಮಾಡುತ್ತೇವೆಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದಾರೆ. ”ಸಿದ್ದರಾಮಯ್ಯನವರೇ, ನೀವು ಯಾವ ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪನವರಿಗೂ ಹೆದರಬೇಡಿ. ಜಾತಿ – ಜನಾಂಗದ ಮೇಲೆ ಯಾರೂ ಸಿಎಂ ಆಗಲ್ಲ. ಯಾರ ಸಮರ್ಥ ಆಡಳಿತ ಕೊಡುತ್ತಾರೋ ಅವರು ಸಿಎಂ ಆಗಬೇಕು” ಎಂದು ಹೇಳಿದ್ದಾರೆ.

”ಸಿದ್ದರಾಮಯ್ಯ ಅವರು ತೂಕದ ವ್ಯಕ್ತಿತ್ವ, ಉಳಿದವರಂತೆ ಜೈಲಿಗೆ ಹೋಗಿಬಂದವರಲ್ಲ, ಗೂಂಡಾಗಿರಿ ಮಾಡಿದವರಲ್ಲ” ಎಂದು ಸಿಎಂ ಪರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ವರದಿ ಸಲ್ಲಿಕೆಗೆ ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ; ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...