Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಮನುಷ್ಯ ರೂಪದ ಪ್ರಾಣಿಯು ಜನರನ್ನು ಕೊಲ್ಲುತ್ತಿದ್ದು, ಜನರು ಎಚ್ಚರ ವಹಿಸಬೇಕೆಂದು ವಾಟ್ಸ್‌ಆಪ್‌ನಲ್ಲಿ ವಿಡಿಯೊಗಳನ್ನು ಹರಿಬಿಡಲಾಗಿದೆ.

- Advertisement -
- Advertisement -

“ನೋಡಿ ಫ್ರೆಂಡ್ಸ್, ಆದಷ್ಟು ರಾತ್ರಿ ಹೊತ್ತು ಓಡಾಡುವುದನ್ನು ಕಡಿಮೆ ಮಾಡಿ. ಯಾಕೆಂದ್ರೆ ಸೇಮ್ ಮನುಷ್ಯ ಆಕಾರದಲ್ಲಿ ಒಂದು ಪ್ರಾಣಿ ಬಂದಿದೆ. ಹುಷಾರು ಫ್ರೆಂಡ್ಸ್, ನೆನ್ನೆ ಹೊಸಕೆರೆ ಪಕ್ಕ ಇರುವ ಹೇಳದಾಸರಹಳ್ಳಿಯಲ್ಲಿ ಒಬ್ಬ ಮನುಷ್ಯನನ್ನು ಕೊಂದಿದೆ ಮತ್ತು ನೊಣವಿನಕೆರೆ ಹತ್ತಿರ ಕೂಡ ಬಂದು ಅಲ್ಲಿಯೂ ಇಬ್ಬರು ವ್ಯಕ್ತಿಯನ್ನು ಕೊಂದಿದೆ. ಈ ಪ್ರಾಣಿ ಮರದ ಮೇಲೆ ಇರುತ್ತೆ… Be Care Full”

“ಸ್ನೇಹಿತರೆ, ತುಮಕೂರು ಜಿಲ್ಲೆಯಲ್ಲಿ ಮನುಷ್ಯನ ರೂಪದಲ್ಲಿ ಇರುವಂತಹ ಒಂದು ವಿಷಜಂತು ಪ್ರಾಣಿ, ಮನುಷ್ಯರನ್ನು ಸಾಯಿಸುತ್ತಾ ಬರುತ್ತಿದೆ. ಹೊಸಕೆರೆ ಪಕ್ಕ ಇರುವಂತಹ ಹೇಳದಾಸರಹಳ್ಳಿಯಲ್ಲಿ ಮನುಷ್ಯನನ್ನು ಕೊಂದು, ನೊಣವಿನಕೆರೆ ಹತ್ತಿರ ಇರುವಂತಹ ಹಳ್ಳಿಗಳಲ್ಲಿ ಮನುಷ್ಯರನ್ನು ಕೊಂದಿದೆ. ಮನುಷ್ಯರೂಪದಲ್ಲೇ ಇರುವಂತಹ ಈ ಪ್ರಾಣಿ ಹೆಚ್ಚಾಗಿ ಮರದ ಮೇಲೆ ಇರುತ್ತದೆ. ಸುತ್ತಮುತ್ತಲಿನ ಊರುಗಳಲ್ಲಿ ಇರುವಂತಹ ಜನರು ಹುಷಾರಾಗಿ ಎಚ್ಚರದಿಂದ ಇರಬೇಕಾಗಿ ವಿನಂತಿ…..”
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

-ಈ ರೀತಿಯ ವಿವರಣೆಗಳೊಂದಿಗೆ ವಿಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ. ಭೀಕರವಾಗಿ ಗಾಯಗೊಂಡು ಸಾವನ್ನಪ್ಪಿದವರ ಚಿತ್ರಗಳು, ಸತ್ತವರ ಸುತ್ತ ರೋಧಿಸುತ್ತಿರುವವರ ದೃಶ್ಯಗಳು ವಾಟ್ಸ್‌ಅಪ್‌ನಲ್ಲಿ ಹರಿದಾಡಿವೆ. ಜೊತೆಗೆ ಮನುಷ್ಯನ ಆಕಾರ ಹೋಲುವ ಪ್ರಾಣಿಯೊಂದರ ಎರಡು ವಿಡಿಯೊ ತುಣುಕುಗಳೂ ಇದರಲ್ಲಿ ಸೇರಿವೆ.

ಮೇಲಿನ ಪ್ರತಿಪಾದನೆಯೊಂದಿಗೆ ಈ ವಿಡಿಯೊಗಳನ್ನು ವ್ಯಾಪಕವಾಗಿ ವಾಟ್ಸ್‌ಅಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ನಾನುಗೌರಿ.ಕಾಂ ಓದುಗರು ಈ ವಿಡಿಯೊಗಳನ್ನು ನಮ್ಮೊಂದಿಗೆ ಹಂಚಿಕೊಂಡು ಸತ್ಯಪರಿಶೀಲನೆ ಮಾಡಲು ಕೋರಿದ್ದಾರೆ.

ಸತ್ಯಾಂಶ

ಮನುಷ್ಯನನ್ನು ಹೋಲುವ ತೋಳವೊಂದರ ವಿಡಿಯೊಗಳ ಸ್ಕ್ರೀನ್‌ ಶಾಟ್‌ ತೆಗೆದು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಈ ವಿಡಿಯೊವನ್ನು ಹೋಲುವ ಹಲವು ಕ್ಲಿಪ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದವು. “Werewolf founded in Brazil… do you believe?” ಎಂಬ ಟೈಟಲ್‌ನೊಂದಿಗೆ anilmal good stories ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿರುವ ವಿಡಿಯೊವನ್ನು ಪರಿಶೀಲಿಸಿದೆವು. ಈ ವಿಡಿಯೊವನ್ನು ಜೂನ್‌ 20, 2021ರಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

https://www.youtube.com/watch?v=W0hvvgSyQQQ

ಈ ವಿಡಿಯೊದ ಆಧಾರದೊಂದಿಗೆ ಮತ್ತಷ್ಟು ಪರಿಶೀಲನೆ ಮಾಡಿದಾಗ ಮನುಷ್ಯನನ್ನು ಹೋಲುವ ತೋಳದ ವಿಡಿಯೊವನ್ನು ಅನೇಕರು ತರಹೇವಾರಿ ಪ್ರತಿಪಾದನೆಯೊಂದಿಗೆ ಹಂಚಿಕೊಂಡಿರುವುದು ತಿಳಿದುಬಂದಿದೆ. ಈ ತೋಳದ ಕಲಾಕೃತಿಯ ಕುರಿತು ಪ್ರಖ್ಯಾತ ಫ್ಯಾಕ್ಟ್‌ಚೆಕ್‌ ಸಂಸ್ಥೆಯಾದ Factlyಯು ಜುಲೈ 4, 2021ರಂದು ಸತ್ಯಶೋಧನೆ ವರದಿಯೊಂದನ್ನು ಮಾಡಿದೆ.

“ಸಿಯಾಲ್‌ಕೋಟ್‌ ಗಡಿಯಲ್ಲಿ ಪಾಕ್‌ ಸೇನೆಯು ವೇರ್‌ವೂಲ್ಫ್‌ ಪ್ರಾಣಿಯನ್ನು ಹೊಡೆದು ಸಾಯಿಸಲಾಗಿದೆ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊ ವೈರಲ್ ಆಗಿದ್ದಾಗ, ಫ್ಯಾಕ್ಟ್‌ಲಿ ಸಂಸ್ಥೆ ಫ್ಯಾಕ್ಟ್‌ಚೆಕ್‌ ಮಾಡಿರುವುದನ್ನು ಕಾಣಬಹುದು.

https://www.youtube.com/watch?v=PJrS7L34KeE

“ಈ ವಿಡಿಯೊವನ್ನು ರಿವರ್ಸ್ ಸರ್ಚ್ ಮಾಡಿದಾಗ 2020ರ ನವೆಂಬರ್‌‌ 27ರಂದು ಇನ್ಸ್‌ಟಾಗ್ರಾಮ್‌ ಖಾತೆಯಲ್ಲಿ ರೊಬ್ಕೋಬಸ್ಕಿ ಎಂಬವರು ಇದೇ ರೀತಿಯ ವಿಡಿಯೊಗಳನ್ನು ಹಂಚಿಕೊಂಡಿರುವುದು ಕಂಡು ಬಂತು. ಜೋಸೆಫ್‌ ರೊಬ್ಕೋಬಸ್ಕಿ ಅವರು ಹವ್ಯಾಸಿ ಶಿಲ್ಪಾಕಲಾ ಕಲಾವಿದರಾಗಿದ್ದಾರೆ. ವೇರ್‌ವೂಲ್ಫ್‌ (ಮನುಷ್ಯರೂಪದ ತೋಳ) ಹೋಲುವ ಹಲವು ಪೋಸ್ಟ್‌ಗಳನ್ನು ರಾಬ್ಕೋಬಸ್ಕಿ ಅವರ ಖಾತೆಯಲ್ಲಿ ಕಾಣಬಹುದು.

ಪಾಟಿ ಕ್ಯಾಟರ್‌ ಎಂಬವವರು ಅಪ್‌ಲೋಡ್‌ ಮಾಡಿರುವ ವಿಡಿಯೊವೊಂದು ರಾಬ್ಕೋಬಸ್ಕಿ ಅವರ ಕುರಿತು ಬೆಳಕು ಚೆಲ್ಲುತ್ತದೆ.

https://www.youtube.com/watch?v=kATCYMqqovQ

ದೈತ್ಯಾಕಾರದ ಶಿಲ್ಪಗಳು ಮತ್ತು ಸ್ಪೆಷಲ್‌ ಎಫೆಕ್ಟ್‌ಗಳನ್ನು ರಚಿಸುವ ಜಟಿಲತೆಗಳ ಬಗ್ಗೆ ರಾಬ್ಕೊಬಸ್ಕಿ ಮಾತನಾಡುತ್ತಾರೆ. ರೊಬ್ಕೊಬಸ್ಕಿ ಅವರು ಅರಿಕ್ಸೋನಾದ ಫೀನಿಕ್ಸ್‌ನವರು ಎಂದು ವಿಡಿಯೊ ವಿವರಣೆ ಹೇಳುತ್ತದೆ. ರೊಬ್ಕೋಬಸ್ಕಿಯವರು ಹವ್ಯಾಸಿ SFX ಶಿಲ್ಪ ಕಲಾವಿದ ಮತ್ತು ಕಲಾ ನಿರ್ದೇಶಕ ಎಂದು ತಿಳಿಯುತ್ತದೆ. ಲಾಸ್ ಏಂಜಲೀಸ್ – ಆಧಾರಿತ ದೂರದರ್ಶನ ಮತ್ತು ಚಲನಚಿತ್ರ ನಿರ್ಮಾಣ ಸ್ಟುಡಿಯೋ ಟ್ರೆಮುಲಸ್ ಮೋಷನ್ ಪಿಕ್ಚರ್ಸ್ ಟ್ವೀಟ್ ಮಾಡಿ, “ರೋಬ್ಕೊಬಸ್ಕಿ ಅವರು`Unsanctified’ ಎಂಬ ಶೀರ್ಷಿಕೆಯ ಚಲನಚಿತ್ರಕ್ಕಾಗಿ ಮನುಷ್ಯರೂಪದ ತೋಳವನ್ನು ರಚಿಸಿದ್ದಾರೆ” ಎಂದು ತಿಳಿಸಿದೆ. ಟ್ವೀಟ್ ಪ್ರಕಾರ, “ಅರ್ಜೆಂಟೀನಾ ಮತ್ತು ಬ್ರೆಜಿಲ್‌ನಲ್ಲಿ ಜನರು ಇದನ್ನು ನಿಜವಾದ ತೋಳವೆಂದು ನಂಬಿದ್ದಾರೆ” ಫ್ಯಾಕ್ಟ್‌ಲಿ ವರದಿ ಮಾಡಿದೆ.

https://twitter.com/motiontremulous/status/1405897387214884871?lang=en

ಸಿಯೋಲ್‌ ಕೋಟ್‌ ಗಡಿಯಲ್ಲಿ ಪಾಕ್‌ ಸೇನೆಯಿಂದ ಹತ್ಯೆಯಾದ ಪ್ರಾಣಿಯೆಂದು ವೈರಲ್ ಆದ ಈ ಕಲಾಕೃತಿ ಈಗ, ತುಮಕೂರು ಜಿಲ್ಲೆಗೆ ವಿಚಿತ್ರ ಪ್ರಾಣಿಯೊಂದು ಬಂದಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಆಗಿದೆ. ಇದು ಸಿನಿಮಾಕ್ಕಾಗಿ ಮಾಡಿದ ಕಲಾಕೃತಿಯೇ ಹೊರತು ನಿಜವಾದ ಪ್ರಾಣಿಯ ದೃಶ್ಯವಲ್ಲ.

ಸಾವಿನ ದೃಶ್ಯಗಳ ಸತ್ಯಾಸತ್ಯತೆ

ಕಲಾಕೃತಿಯೊಂದಿಗೆ ಗಾಯಗೊಂಡು ಸಾವಿಗೀಡಾದವರ ದೃಶ್ಯಗಳನ್ನೂ ಹಂಚಿಕೊಳ್ಳಲಾಗುತ್ತಿದೆ. ಮಗುವೊಂದು ಗಾಯಗೊಂಡಿರುವ ವಿಡಿಯೊವೂ ಇದರಲ್ಲಿದೆ. ಇದನ್ನು ಪರಿಶೀಲಿಸಿದಾಗ, ಇದೇ ದೃಶ್ಯವನ್ನು ಹೋಲುವ ಸುದ್ದಿಯೊಂದು ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ಮಾಲ್‌ಬಜಾರ್‌ನ ಮೆಟ್ಲಿ ಬ್ಲಾಕ್‌ನಲ್ಲಿ ಕಾಡು ಪ್ರಾಣಿಗಳು ದಾಳಿ ಮಾಡಿರುವ ಸುದ್ದಿ ಇದಾಗಿದೆ. ಮಗು ಹಾಗೂ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ಅರಣ್ಯಾಧಿಕಾರಿಗಳು ಈ ಕಾಡುಪ್ರಾಣಿಯನ್ನು ಸೆರೆ ಹಿಡಿದಿದ್ದು, ಕಳೆದ ನವೆಂಬರ್‌ನಲ್ಲಿ ಕಾಡು ಕರಡಿಗಳ ದಾಳಿ ಕುರಿತು ಹಲವು ಸುದ್ದಿವಾಹಿನಿಗಳು ಈ ಕುರಿತು ವರದಿ ಮಾಡಿರುವುದನ್ನು ಕಾಣಬಹುದು.

ವಾಟ್ಸ್‌ಆಪ್‌ನಲ್ಲಿ ಮತ್ತೊಂದು ವಿಡಿಯೊ ಹರಿದಾಡಿದೆ. ವಿಚಿತ್ರ ಪ್ರಾಣಿಯು ಒಬ್ಬ ಪುರುಷ ಹಾಗೂ ಮಹಿಳೆಯನ್ನು ಕೊಂದಿರುವುದಾಗಿ ಬಿಂಬಿಸಲಾಗಿದೆ. ಆದರೆ ಇದು ಕೂಡ ಸುಳ್ಳಾಗಿದೆ. ಈ ವಿಡಿಯೊ ಯಾವುದೋ ಅಪರಾಧ ಪ್ರಕರಣವೆಂದು ಶಂಕಿಸಬಹುದೇ ಹೊರತು, ಸ್ಥಳೀಯ ಪ್ರಕರಣವಾಗಿಲ್ಲ. ಈ ವಿಡಿಯೊ ಎಲ್ಲಿಯದ್ದು ಎಂಬುದು ಪತ್ತೆಯಾಗಿಲ್ಲ.

ಯಾವುದಾದರೂ ಕೊಲೆ ಪ್ರಕರಣ ನೊಣವಿನಕೆರೆ ಹಾಗೂ ಹೊಸಕೆರೆ ವ್ಯಾಪ್ತಿಯಲ್ಲಿ ಘಟಿಸಿದೆಯೇ ಎಂದು ತಿಳಿಯಲು ಪೊಲೀಸ್ ಠಾಣೆಗಳಿಗೆ ಕರೆ ಮಾಡಲಾಯಿತು. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಹೊಸಕೆರೆ ಬರಲಿದೆ. “ನಮ್ಮ ವ್ಯಾಪ್ತಿಯಲ್ಲಿ ಇಂತಹ ಯಾವುದೇ ಪ್ರಕರಣಗಳು ನಡೆದಿಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ತಿಪಟೂರು ತಾಲ್ಲೂಕಿನ ನೊಣವಿನಕೆರೆ ಪೊಲೀಸರಿಗೆ ಕರೆ ಮಾಡಿದಾಗ, “ಈ ಸುದ್ದಿಯ ಕುರಿತು ಸ್ಪಷ್ಟನೆ ಕೇಳಿ ಅನೇಕರು ಕರೆ ಮಾಡುತ್ತಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, ನಮ್ಮ ವ್ಯಾಪ್ತಿಯಲ್ಲಿ ಯಾವುದೇ ಕೊಲೆಯಾಗಿಲ್ಲ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...