Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಮನುಷ್ಯ ರೂಪದ ಪ್ರಾಣಿಯು ಜನರನ್ನು ಕೊಲ್ಲುತ್ತಿದ್ದು, ಜನರು ಎಚ್ಚರ ವಹಿಸಬೇಕೆಂದು ವಾಟ್ಸ್‌ಆಪ್‌ನಲ್ಲಿ ವಿಡಿಯೊಗಳನ್ನು ಹರಿಬಿಡಲಾಗಿದೆ.

- Advertisement -
- Advertisement -

“ನೋಡಿ ಫ್ರೆಂಡ್ಸ್, ಆದಷ್ಟು ರಾತ್ರಿ ಹೊತ್ತು ಓಡಾಡುವುದನ್ನು ಕಡಿಮೆ ಮಾಡಿ. ಯಾಕೆಂದ್ರೆ ಸೇಮ್ ಮನುಷ್ಯ ಆಕಾರದಲ್ಲಿ ಒಂದು ಪ್ರಾಣಿ ಬಂದಿದೆ. ಹುಷಾರು ಫ್ರೆಂಡ್ಸ್, ನೆನ್ನೆ ಹೊಸಕೆರೆ ಪಕ್ಕ ಇರುವ ಹೇಳದಾಸರಹಳ್ಳಿಯಲ್ಲಿ ಒಬ್ಬ ಮನುಷ್ಯನನ್ನು ಕೊಂದಿದೆ ಮತ್ತು ನೊಣವಿನಕೆರೆ ಹತ್ತಿರ ಕೂಡ ಬಂದು ಅಲ್ಲಿಯೂ ಇಬ್ಬರು ವ್ಯಕ್ತಿಯನ್ನು ಕೊಂದಿದೆ. ಈ ಪ್ರಾಣಿ ಮರದ ಮೇಲೆ ಇರುತ್ತೆ… Be Care Full”

“ಸ್ನೇಹಿತರೆ, ತುಮಕೂರು ಜಿಲ್ಲೆಯಲ್ಲಿ ಮನುಷ್ಯನ ರೂಪದಲ್ಲಿ ಇರುವಂತಹ ಒಂದು ವಿಷಜಂತು ಪ್ರಾಣಿ, ಮನುಷ್ಯರನ್ನು ಸಾಯಿಸುತ್ತಾ ಬರುತ್ತಿದೆ. ಹೊಸಕೆರೆ ಪಕ್ಕ ಇರುವಂತಹ ಹೇಳದಾಸರಹಳ್ಳಿಯಲ್ಲಿ ಮನುಷ್ಯನನ್ನು ಕೊಂದು, ನೊಣವಿನಕೆರೆ ಹತ್ತಿರ ಇರುವಂತಹ ಹಳ್ಳಿಗಳಲ್ಲಿ ಮನುಷ್ಯರನ್ನು ಕೊಂದಿದೆ. ಮನುಷ್ಯರೂಪದಲ್ಲೇ ಇರುವಂತಹ ಈ ಪ್ರಾಣಿ ಹೆಚ್ಚಾಗಿ ಮರದ ಮೇಲೆ ಇರುತ್ತದೆ. ಸುತ್ತಮುತ್ತಲಿನ ಊರುಗಳಲ್ಲಿ ಇರುವಂತಹ ಜನರು ಹುಷಾರಾಗಿ ಎಚ್ಚರದಿಂದ ಇರಬೇಕಾಗಿ ವಿನಂತಿ…..”
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

-ಈ ರೀತಿಯ ವಿವರಣೆಗಳೊಂದಿಗೆ ವಿಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ. ಭೀಕರವಾಗಿ ಗಾಯಗೊಂಡು ಸಾವನ್ನಪ್ಪಿದವರ ಚಿತ್ರಗಳು, ಸತ್ತವರ ಸುತ್ತ ರೋಧಿಸುತ್ತಿರುವವರ ದೃಶ್ಯಗಳು ವಾಟ್ಸ್‌ಅಪ್‌ನಲ್ಲಿ ಹರಿದಾಡಿವೆ. ಜೊತೆಗೆ ಮನುಷ್ಯನ ಆಕಾರ ಹೋಲುವ ಪ್ರಾಣಿಯೊಂದರ ಎರಡು ವಿಡಿಯೊ ತುಣುಕುಗಳೂ ಇದರಲ್ಲಿ ಸೇರಿವೆ.

ಮೇಲಿನ ಪ್ರತಿಪಾದನೆಯೊಂದಿಗೆ ಈ ವಿಡಿಯೊಗಳನ್ನು ವ್ಯಾಪಕವಾಗಿ ವಾಟ್ಸ್‌ಅಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ನಾನುಗೌರಿ.ಕಾಂ ಓದುಗರು ಈ ವಿಡಿಯೊಗಳನ್ನು ನಮ್ಮೊಂದಿಗೆ ಹಂಚಿಕೊಂಡು ಸತ್ಯಪರಿಶೀಲನೆ ಮಾಡಲು ಕೋರಿದ್ದಾರೆ.

ಸತ್ಯಾಂಶ

ಮನುಷ್ಯನನ್ನು ಹೋಲುವ ತೋಳವೊಂದರ ವಿಡಿಯೊಗಳ ಸ್ಕ್ರೀನ್‌ ಶಾಟ್‌ ತೆಗೆದು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಈ ವಿಡಿಯೊವನ್ನು ಹೋಲುವ ಹಲವು ಕ್ಲಿಪ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದವು. “Werewolf founded in Brazil… do you believe?” ಎಂಬ ಟೈಟಲ್‌ನೊಂದಿಗೆ anilmal good stories ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿರುವ ವಿಡಿಯೊವನ್ನು ಪರಿಶೀಲಿಸಿದೆವು. ಈ ವಿಡಿಯೊವನ್ನು ಜೂನ್‌ 20, 2021ರಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

https://www.youtube.com/watch?v=W0hvvgSyQQQ

ಈ ವಿಡಿಯೊದ ಆಧಾರದೊಂದಿಗೆ ಮತ್ತಷ್ಟು ಪರಿಶೀಲನೆ ಮಾಡಿದಾಗ ಮನುಷ್ಯನನ್ನು ಹೋಲುವ ತೋಳದ ವಿಡಿಯೊವನ್ನು ಅನೇಕರು ತರಹೇವಾರಿ ಪ್ರತಿಪಾದನೆಯೊಂದಿಗೆ ಹಂಚಿಕೊಂಡಿರುವುದು ತಿಳಿದುಬಂದಿದೆ. ಈ ತೋಳದ ಕಲಾಕೃತಿಯ ಕುರಿತು ಪ್ರಖ್ಯಾತ ಫ್ಯಾಕ್ಟ್‌ಚೆಕ್‌ ಸಂಸ್ಥೆಯಾದ Factlyಯು ಜುಲೈ 4, 2021ರಂದು ಸತ್ಯಶೋಧನೆ ವರದಿಯೊಂದನ್ನು ಮಾಡಿದೆ.

“ಸಿಯಾಲ್‌ಕೋಟ್‌ ಗಡಿಯಲ್ಲಿ ಪಾಕ್‌ ಸೇನೆಯು ವೇರ್‌ವೂಲ್ಫ್‌ ಪ್ರಾಣಿಯನ್ನು ಹೊಡೆದು ಸಾಯಿಸಲಾಗಿದೆ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊ ವೈರಲ್ ಆಗಿದ್ದಾಗ, ಫ್ಯಾಕ್ಟ್‌ಲಿ ಸಂಸ್ಥೆ ಫ್ಯಾಕ್ಟ್‌ಚೆಕ್‌ ಮಾಡಿರುವುದನ್ನು ಕಾಣಬಹುದು.

https://www.youtube.com/watch?v=PJrS7L34KeE

“ಈ ವಿಡಿಯೊವನ್ನು ರಿವರ್ಸ್ ಸರ್ಚ್ ಮಾಡಿದಾಗ 2020ರ ನವೆಂಬರ್‌‌ 27ರಂದು ಇನ್ಸ್‌ಟಾಗ್ರಾಮ್‌ ಖಾತೆಯಲ್ಲಿ ರೊಬ್ಕೋಬಸ್ಕಿ ಎಂಬವರು ಇದೇ ರೀತಿಯ ವಿಡಿಯೊಗಳನ್ನು ಹಂಚಿಕೊಂಡಿರುವುದು ಕಂಡು ಬಂತು. ಜೋಸೆಫ್‌ ರೊಬ್ಕೋಬಸ್ಕಿ ಅವರು ಹವ್ಯಾಸಿ ಶಿಲ್ಪಾಕಲಾ ಕಲಾವಿದರಾಗಿದ್ದಾರೆ. ವೇರ್‌ವೂಲ್ಫ್‌ (ಮನುಷ್ಯರೂಪದ ತೋಳ) ಹೋಲುವ ಹಲವು ಪೋಸ್ಟ್‌ಗಳನ್ನು ರಾಬ್ಕೋಬಸ್ಕಿ ಅವರ ಖಾತೆಯಲ್ಲಿ ಕಾಣಬಹುದು.

ಪಾಟಿ ಕ್ಯಾಟರ್‌ ಎಂಬವವರು ಅಪ್‌ಲೋಡ್‌ ಮಾಡಿರುವ ವಿಡಿಯೊವೊಂದು ರಾಬ್ಕೋಬಸ್ಕಿ ಅವರ ಕುರಿತು ಬೆಳಕು ಚೆಲ್ಲುತ್ತದೆ.

https://www.youtube.com/watch?v=kATCYMqqovQ

ದೈತ್ಯಾಕಾರದ ಶಿಲ್ಪಗಳು ಮತ್ತು ಸ್ಪೆಷಲ್‌ ಎಫೆಕ್ಟ್‌ಗಳನ್ನು ರಚಿಸುವ ಜಟಿಲತೆಗಳ ಬಗ್ಗೆ ರಾಬ್ಕೊಬಸ್ಕಿ ಮಾತನಾಡುತ್ತಾರೆ. ರೊಬ್ಕೊಬಸ್ಕಿ ಅವರು ಅರಿಕ್ಸೋನಾದ ಫೀನಿಕ್ಸ್‌ನವರು ಎಂದು ವಿಡಿಯೊ ವಿವರಣೆ ಹೇಳುತ್ತದೆ. ರೊಬ್ಕೋಬಸ್ಕಿಯವರು ಹವ್ಯಾಸಿ SFX ಶಿಲ್ಪ ಕಲಾವಿದ ಮತ್ತು ಕಲಾ ನಿರ್ದೇಶಕ ಎಂದು ತಿಳಿಯುತ್ತದೆ. ಲಾಸ್ ಏಂಜಲೀಸ್ – ಆಧಾರಿತ ದೂರದರ್ಶನ ಮತ್ತು ಚಲನಚಿತ್ರ ನಿರ್ಮಾಣ ಸ್ಟುಡಿಯೋ ಟ್ರೆಮುಲಸ್ ಮೋಷನ್ ಪಿಕ್ಚರ್ಸ್ ಟ್ವೀಟ್ ಮಾಡಿ, “ರೋಬ್ಕೊಬಸ್ಕಿ ಅವರು`Unsanctified’ ಎಂಬ ಶೀರ್ಷಿಕೆಯ ಚಲನಚಿತ್ರಕ್ಕಾಗಿ ಮನುಷ್ಯರೂಪದ ತೋಳವನ್ನು ರಚಿಸಿದ್ದಾರೆ” ಎಂದು ತಿಳಿಸಿದೆ. ಟ್ವೀಟ್ ಪ್ರಕಾರ, “ಅರ್ಜೆಂಟೀನಾ ಮತ್ತು ಬ್ರೆಜಿಲ್‌ನಲ್ಲಿ ಜನರು ಇದನ್ನು ನಿಜವಾದ ತೋಳವೆಂದು ನಂಬಿದ್ದಾರೆ” ಫ್ಯಾಕ್ಟ್‌ಲಿ ವರದಿ ಮಾಡಿದೆ.

https://twitter.com/motiontremulous/status/1405897387214884871?lang=en

ಸಿಯೋಲ್‌ ಕೋಟ್‌ ಗಡಿಯಲ್ಲಿ ಪಾಕ್‌ ಸೇನೆಯಿಂದ ಹತ್ಯೆಯಾದ ಪ್ರಾಣಿಯೆಂದು ವೈರಲ್ ಆದ ಈ ಕಲಾಕೃತಿ ಈಗ, ತುಮಕೂರು ಜಿಲ್ಲೆಗೆ ವಿಚಿತ್ರ ಪ್ರಾಣಿಯೊಂದು ಬಂದಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಆಗಿದೆ. ಇದು ಸಿನಿಮಾಕ್ಕಾಗಿ ಮಾಡಿದ ಕಲಾಕೃತಿಯೇ ಹೊರತು ನಿಜವಾದ ಪ್ರಾಣಿಯ ದೃಶ್ಯವಲ್ಲ.

ಸಾವಿನ ದೃಶ್ಯಗಳ ಸತ್ಯಾಸತ್ಯತೆ

ಕಲಾಕೃತಿಯೊಂದಿಗೆ ಗಾಯಗೊಂಡು ಸಾವಿಗೀಡಾದವರ ದೃಶ್ಯಗಳನ್ನೂ ಹಂಚಿಕೊಳ್ಳಲಾಗುತ್ತಿದೆ. ಮಗುವೊಂದು ಗಾಯಗೊಂಡಿರುವ ವಿಡಿಯೊವೂ ಇದರಲ್ಲಿದೆ. ಇದನ್ನು ಪರಿಶೀಲಿಸಿದಾಗ, ಇದೇ ದೃಶ್ಯವನ್ನು ಹೋಲುವ ಸುದ್ದಿಯೊಂದು ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ಮಾಲ್‌ಬಜಾರ್‌ನ ಮೆಟ್ಲಿ ಬ್ಲಾಕ್‌ನಲ್ಲಿ ಕಾಡು ಪ್ರಾಣಿಗಳು ದಾಳಿ ಮಾಡಿರುವ ಸುದ್ದಿ ಇದಾಗಿದೆ. ಮಗು ಹಾಗೂ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ಅರಣ್ಯಾಧಿಕಾರಿಗಳು ಈ ಕಾಡುಪ್ರಾಣಿಯನ್ನು ಸೆರೆ ಹಿಡಿದಿದ್ದು, ಕಳೆದ ನವೆಂಬರ್‌ನಲ್ಲಿ ಕಾಡು ಕರಡಿಗಳ ದಾಳಿ ಕುರಿತು ಹಲವು ಸುದ್ದಿವಾಹಿನಿಗಳು ಈ ಕುರಿತು ವರದಿ ಮಾಡಿರುವುದನ್ನು ಕಾಣಬಹುದು.

ವಾಟ್ಸ್‌ಆಪ್‌ನಲ್ಲಿ ಮತ್ತೊಂದು ವಿಡಿಯೊ ಹರಿದಾಡಿದೆ. ವಿಚಿತ್ರ ಪ್ರಾಣಿಯು ಒಬ್ಬ ಪುರುಷ ಹಾಗೂ ಮಹಿಳೆಯನ್ನು ಕೊಂದಿರುವುದಾಗಿ ಬಿಂಬಿಸಲಾಗಿದೆ. ಆದರೆ ಇದು ಕೂಡ ಸುಳ್ಳಾಗಿದೆ. ಈ ವಿಡಿಯೊ ಯಾವುದೋ ಅಪರಾಧ ಪ್ರಕರಣವೆಂದು ಶಂಕಿಸಬಹುದೇ ಹೊರತು, ಸ್ಥಳೀಯ ಪ್ರಕರಣವಾಗಿಲ್ಲ. ಈ ವಿಡಿಯೊ ಎಲ್ಲಿಯದ್ದು ಎಂಬುದು ಪತ್ತೆಯಾಗಿಲ್ಲ.

ಯಾವುದಾದರೂ ಕೊಲೆ ಪ್ರಕರಣ ನೊಣವಿನಕೆರೆ ಹಾಗೂ ಹೊಸಕೆರೆ ವ್ಯಾಪ್ತಿಯಲ್ಲಿ ಘಟಿಸಿದೆಯೇ ಎಂದು ತಿಳಿಯಲು ಪೊಲೀಸ್ ಠಾಣೆಗಳಿಗೆ ಕರೆ ಮಾಡಲಾಯಿತು. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಹೊಸಕೆರೆ ಬರಲಿದೆ. “ನಮ್ಮ ವ್ಯಾಪ್ತಿಯಲ್ಲಿ ಇಂತಹ ಯಾವುದೇ ಪ್ರಕರಣಗಳು ನಡೆದಿಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ತಿಪಟೂರು ತಾಲ್ಲೂಕಿನ ನೊಣವಿನಕೆರೆ ಪೊಲೀಸರಿಗೆ ಕರೆ ಮಾಡಿದಾಗ, “ಈ ಸುದ್ದಿಯ ಕುರಿತು ಸ್ಪಷ್ಟನೆ ಕೇಳಿ ಅನೇಕರು ಕರೆ ಮಾಡುತ್ತಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, ನಮ್ಮ ವ್ಯಾಪ್ತಿಯಲ್ಲಿ ಯಾವುದೇ ಕೊಲೆಯಾಗಿಲ್ಲ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...