Homeಮುಖಪುಟಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

'ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು ಎಂಬ ಮಾತುಗಳಿಗೆ ಕೊನೆಹಾಡಿ'

- Advertisement -
- Advertisement -

ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ ಎಂದು ನಟೆ, ಮಾಜಿ ಸಂಸದೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದ ಬೆನ್ನಲ್ಲೇ “ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದರು.

ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟಿ ರಮ್ಯಾ ಕೂಡ ಮಹಿಳೆಯರದ್ದೇ ತಪ್ಪು ಎನ್ನುವವರ ವಿರುದ್ಧ, ಮಹಿಳೆಯರ ಮೇಲೆ ನಡೆಯುವ ಅಪರಾಧಗಳ ಬಗ್ಗೆ ಕುರುಡಾಗದಿರಿ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರ ಇನ್​ಸ್ಟಾಗ್ರಾಮ್ ಪೋಸ್ಟ್ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

 

 

View this post on Instagram

 

A post shared by Ramya/Divya Spandana (@divyaspandana)

” ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ” ಎಂದಿದ್ದಾರೆ.

“ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು  ತುಂಬ ಬಿಗಿ ಆದಂತಹ, ತುಂಬ ಸಡಿಲ ಆಗಿರುವಂತಹ ಬಟ್ಟೆ ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌, ನೀವು ಕಣ್ಣು ಮಿಟುಕಿಸಬಾರದಿತ್ತು..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು… ಏಕೆ..? ಏಕೆಂದರೆ ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು- ಇಲ್ಲ. ಇಲ್ಲ… ಇಂಥ ಅಸಂಬದ್ಧವೆಲ್ಲ ಕೊನೆಯಾಗಬೇಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ಒಪ್ಪಿಕೊಳ್ಳುವ ತಪ್ಪನ್ನು ನಾನೂ ಮಾಡಿದ್ದೇನೆ. ಸ್ನೇಹಿತರಿಗೂ ಹೇಳಿದ್ದೇನೆ. ಆದರೆ ಇನ್ಮುಂದೆ ಸಾಧ್ಯವಿಲ್ಲ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ನೋಡಿಕೊಂಡು ಸುಮ್ಮನಿರಬೇಡಿ, ಕುರುಡಾಗದಿರಿ. ಧ್ವನಿ ಎತ್ತಿ’ ಇದು ಇಂದಿಗೆ ಕೊನೆಯಾಗಲಿ” ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....