Homeಮುಖಪುಟಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

'ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು ಎಂಬ ಮಾತುಗಳಿಗೆ ಕೊನೆಹಾಡಿ'

- Advertisement -
- Advertisement -

ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ ಎಂದು ನಟೆ, ಮಾಜಿ ಸಂಸದೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದ ಬೆನ್ನಲ್ಲೇ “ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದರು.

ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟಿ ರಮ್ಯಾ ಕೂಡ ಮಹಿಳೆಯರದ್ದೇ ತಪ್ಪು ಎನ್ನುವವರ ವಿರುದ್ಧ, ಮಹಿಳೆಯರ ಮೇಲೆ ನಡೆಯುವ ಅಪರಾಧಗಳ ಬಗ್ಗೆ ಕುರುಡಾಗದಿರಿ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರ ಇನ್​ಸ್ಟಾಗ್ರಾಮ್ ಪೋಸ್ಟ್ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

 

 

View this post on Instagram

 

A post shared by Ramya/Divya Spandana (@divyaspandana)

” ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ” ಎಂದಿದ್ದಾರೆ.

“ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು  ತುಂಬ ಬಿಗಿ ಆದಂತಹ, ತುಂಬ ಸಡಿಲ ಆಗಿರುವಂತಹ ಬಟ್ಟೆ ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌, ನೀವು ಕಣ್ಣು ಮಿಟುಕಿಸಬಾರದಿತ್ತು..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು… ಏಕೆ..? ಏಕೆಂದರೆ ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು- ಇಲ್ಲ. ಇಲ್ಲ… ಇಂಥ ಅಸಂಬದ್ಧವೆಲ್ಲ ಕೊನೆಯಾಗಬೇಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ಒಪ್ಪಿಕೊಳ್ಳುವ ತಪ್ಪನ್ನು ನಾನೂ ಮಾಡಿದ್ದೇನೆ. ಸ್ನೇಹಿತರಿಗೂ ಹೇಳಿದ್ದೇನೆ. ಆದರೆ ಇನ್ಮುಂದೆ ಸಾಧ್ಯವಿಲ್ಲ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ನೋಡಿಕೊಂಡು ಸುಮ್ಮನಿರಬೇಡಿ, ಕುರುಡಾಗದಿರಿ. ಧ್ವನಿ ಎತ್ತಿ’ ಇದು ಇಂದಿಗೆ ಕೊನೆಯಾಗಲಿ” ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...