Homeಮುಖಪುಟಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

'ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು ಎಂಬ ಮಾತುಗಳಿಗೆ ಕೊನೆಹಾಡಿ'

- Advertisement -
- Advertisement -

ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ ಎಂದು ನಟೆ, ಮಾಜಿ ಸಂಸದೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದ ಬೆನ್ನಲ್ಲೇ “ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದರು.

ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟಿ ರಮ್ಯಾ ಕೂಡ ಮಹಿಳೆಯರದ್ದೇ ತಪ್ಪು ಎನ್ನುವವರ ವಿರುದ್ಧ, ಮಹಿಳೆಯರ ಮೇಲೆ ನಡೆಯುವ ಅಪರಾಧಗಳ ಬಗ್ಗೆ ಕುರುಡಾಗದಿರಿ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರ ಇನ್​ಸ್ಟಾಗ್ರಾಮ್ ಪೋಸ್ಟ್ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

 

 

View this post on Instagram

 

A post shared by Ramya/Divya Spandana (@divyaspandana)

” ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ” ಎಂದಿದ್ದಾರೆ.

“ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು  ತುಂಬ ಬಿಗಿ ಆದಂತಹ, ತುಂಬ ಸಡಿಲ ಆಗಿರುವಂತಹ ಬಟ್ಟೆ ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌, ನೀವು ಕಣ್ಣು ಮಿಟುಕಿಸಬಾರದಿತ್ತು..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು… ಏಕೆ..? ಏಕೆಂದರೆ ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು- ಇಲ್ಲ. ಇಲ್ಲ… ಇಂಥ ಅಸಂಬದ್ಧವೆಲ್ಲ ಕೊನೆಯಾಗಬೇಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ಒಪ್ಪಿಕೊಳ್ಳುವ ತಪ್ಪನ್ನು ನಾನೂ ಮಾಡಿದ್ದೇನೆ. ಸ್ನೇಹಿತರಿಗೂ ಹೇಳಿದ್ದೇನೆ. ಆದರೆ ಇನ್ಮುಂದೆ ಸಾಧ್ಯವಿಲ್ಲ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ನೋಡಿಕೊಂಡು ಸುಮ್ಮನಿರಬೇಡಿ, ಕುರುಡಾಗದಿರಿ. ಧ್ವನಿ ಎತ್ತಿ’ ಇದು ಇಂದಿಗೆ ಕೊನೆಯಾಗಲಿ” ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...