Homeಸಿನಿಮಾಕ್ರೀಡೆ'ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್' ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

‘ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್’ ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

- Advertisement -
- Advertisement -

ಜಾವೆಲಿನ್‌ನಲ್ಲಿ ವಿಶ್ವ ಚಾಂಪಿಯನ್‌ಷಿಪ್ ಗೆದ್ದ ನಂತರ ನೀರಜ್‌ ಚೋಪ್ರಾ ಅವರನ್ನು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂದು ಕರೆಯಲಾಗುತ್ತಿದೆ. ಆದರೆ ಚೋಪಾ ಅವರು ಅದನ್ನು ಒಪ್ಪಿಕೊಳ್ಳುತ್ತಿಲ್ಲ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲಲು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು ಎಂದು ಹೇಳಿದ್ದಾರೆ.

ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್‌, ಜಾವೆಲಿನ್‌ನ್ನು 88.17 ಮೀ. ದೂರ ಎಸೆಯುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಆರು ಎಸೆತಗಳ ಅವಕಾಶವಿದ್ದ ಫೈನಲ್‌ನ ಎರಡನೇ ಪ್ರಯತ್ನದಲ್ಲಿ ಅವರಿಂದ ಈ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ದೊರೆತ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ.

ಛೋಪ್ರಾ ಅವರ ನಿಕಟ ಪ್ರತಿಸ್ಪರ್ಧಿ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ಎಸೆಯುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದು, ಜಾಕುಬ್ ವದ್ಲೇಚ್ 86.67 ಮೀಟರ್ ಸಾಧನೆ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ವಿನಮ್ರತೆಗೆ ಹೆಸರಾಗಿರುವ ನೀರಜ್‌ ಚೋಪ್ರಾ ಅವರು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಚರ್ಚೆಯಲ್ಲಿ ಒಳಗೊಳ್ಳಲು ಇಷ್ಟಪಟ್ಟಿಲ್ಲ. ”ನಾನು ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಮಾತನ್ನು ಒಪ್ಪಲಾರೆ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲುವುದು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು. ಆದರೆ ಸಾಧಿಸಲು ಇನ್ನೂ ನನ್ನ ಎದುರು ಹಲವು ಗುರಿಗಳಿವೆ, ಅದರ ಕಡೆ ನನ್ನ ಗಮನ ಇರಲಿದೆ. ನಾನು ಇದನ್ನು (ಸಾವಕಾಲಿಕ ಶ್ರೇಷ್ಠ) ಹೇಳಿಕೊಳ್ಳಲು ಬಯಸುವುದಿಲ್ಲ” ಎಂದು ಜೋಪಾ ಪ್ರತಿಕ್ರಿಯಿಸಿದರು.

ಸಾವಕಾಲಿಕ ಶ್ರೇಷ್ಠ ಅಥ್ಲೇಟ್ ಎನಿಸಿಕೊಳ್ಳಬೇಕದಾರೆ, ಅದು ಜಾನ್‌ ಜೆಲೆಸ್ಕಿ ರೀತಿ ಇರಬೇಕು” ಎಂದು ಚೋಪ್ರಾ ಅವರು, ಜೆಕೊಸ್ಲಾವಾಕಿಯಾದ ವಿಶ್ವದಾಖರವೀರನ ಹೆಸರು ಪುಸ್ತಾಪಿಸಿದರು. ಜೆಲೆಸ್ಕಿ ಜಾವೆಲಿನ್‌ನಲ್ಲಿ ದಂತಕತೆಯಾಗಿದ್ದು, ಹಲವು ವರ್ಷಗಳಿಂದ ವಿಶ್ವದಾಖಲೆ (98.48 ಮೀ)ಯನ್ನು ತಮ್ಮ ಹೆಸರಿನಲ್ಲೇ ಹೊಂದಿದ್ದಾರೆ. ಮೂರು ಬಾರಿ ಒಲಿಂಪಿಕ್ ಮತ್ತು ಮೂರು ಬಾರಿ ವಿಶ್ವ ಚಾಂಪಿಯನ್ ಕೂಡ.. ಚೋಪ್ರಾ ಅವರಿಗೆ ಜೆಲೆನ್‌ಸ್ಕಿ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...