Homeಸಿನಿಮಾಕ್ರೀಡೆ'ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್' ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

‘ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್’ ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

- Advertisement -
- Advertisement -

ಜಾವೆಲಿನ್‌ನಲ್ಲಿ ವಿಶ್ವ ಚಾಂಪಿಯನ್‌ಷಿಪ್ ಗೆದ್ದ ನಂತರ ನೀರಜ್‌ ಚೋಪ್ರಾ ಅವರನ್ನು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂದು ಕರೆಯಲಾಗುತ್ತಿದೆ. ಆದರೆ ಚೋಪಾ ಅವರು ಅದನ್ನು ಒಪ್ಪಿಕೊಳ್ಳುತ್ತಿಲ್ಲ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲಲು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು ಎಂದು ಹೇಳಿದ್ದಾರೆ.

ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್‌, ಜಾವೆಲಿನ್‌ನ್ನು 88.17 ಮೀ. ದೂರ ಎಸೆಯುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಆರು ಎಸೆತಗಳ ಅವಕಾಶವಿದ್ದ ಫೈನಲ್‌ನ ಎರಡನೇ ಪ್ರಯತ್ನದಲ್ಲಿ ಅವರಿಂದ ಈ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ದೊರೆತ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ.

ಛೋಪ್ರಾ ಅವರ ನಿಕಟ ಪ್ರತಿಸ್ಪರ್ಧಿ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ಎಸೆಯುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದು, ಜಾಕುಬ್ ವದ್ಲೇಚ್ 86.67 ಮೀಟರ್ ಸಾಧನೆ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ವಿನಮ್ರತೆಗೆ ಹೆಸರಾಗಿರುವ ನೀರಜ್‌ ಚೋಪ್ರಾ ಅವರು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಚರ್ಚೆಯಲ್ಲಿ ಒಳಗೊಳ್ಳಲು ಇಷ್ಟಪಟ್ಟಿಲ್ಲ. ”ನಾನು ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಮಾತನ್ನು ಒಪ್ಪಲಾರೆ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲುವುದು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು. ಆದರೆ ಸಾಧಿಸಲು ಇನ್ನೂ ನನ್ನ ಎದುರು ಹಲವು ಗುರಿಗಳಿವೆ, ಅದರ ಕಡೆ ನನ್ನ ಗಮನ ಇರಲಿದೆ. ನಾನು ಇದನ್ನು (ಸಾವಕಾಲಿಕ ಶ್ರೇಷ್ಠ) ಹೇಳಿಕೊಳ್ಳಲು ಬಯಸುವುದಿಲ್ಲ” ಎಂದು ಜೋಪಾ ಪ್ರತಿಕ್ರಿಯಿಸಿದರು.

ಸಾವಕಾಲಿಕ ಶ್ರೇಷ್ಠ ಅಥ್ಲೇಟ್ ಎನಿಸಿಕೊಳ್ಳಬೇಕದಾರೆ, ಅದು ಜಾನ್‌ ಜೆಲೆಸ್ಕಿ ರೀತಿ ಇರಬೇಕು” ಎಂದು ಚೋಪ್ರಾ ಅವರು, ಜೆಕೊಸ್ಲಾವಾಕಿಯಾದ ವಿಶ್ವದಾಖರವೀರನ ಹೆಸರು ಪುಸ್ತಾಪಿಸಿದರು. ಜೆಲೆಸ್ಕಿ ಜಾವೆಲಿನ್‌ನಲ್ಲಿ ದಂತಕತೆಯಾಗಿದ್ದು, ಹಲವು ವರ್ಷಗಳಿಂದ ವಿಶ್ವದಾಖಲೆ (98.48 ಮೀ)ಯನ್ನು ತಮ್ಮ ಹೆಸರಿನಲ್ಲೇ ಹೊಂದಿದ್ದಾರೆ. ಮೂರು ಬಾರಿ ಒಲಿಂಪಿಕ್ ಮತ್ತು ಮೂರು ಬಾರಿ ವಿಶ್ವ ಚಾಂಪಿಯನ್ ಕೂಡ.. ಚೋಪ್ರಾ ಅವರಿಗೆ ಜೆಲೆನ್‌ಸ್ಕಿ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...