Homeಸಿನಿಮಾಕ್ರೀಡೆ'ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್' ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

‘ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್’ ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

- Advertisement -
- Advertisement -

ಜಾವೆಲಿನ್‌ನಲ್ಲಿ ವಿಶ್ವ ಚಾಂಪಿಯನ್‌ಷಿಪ್ ಗೆದ್ದ ನಂತರ ನೀರಜ್‌ ಚೋಪ್ರಾ ಅವರನ್ನು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂದು ಕರೆಯಲಾಗುತ್ತಿದೆ. ಆದರೆ ಚೋಪಾ ಅವರು ಅದನ್ನು ಒಪ್ಪಿಕೊಳ್ಳುತ್ತಿಲ್ಲ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲಲು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು ಎಂದು ಹೇಳಿದ್ದಾರೆ.

ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್‌, ಜಾವೆಲಿನ್‌ನ್ನು 88.17 ಮೀ. ದೂರ ಎಸೆಯುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಆರು ಎಸೆತಗಳ ಅವಕಾಶವಿದ್ದ ಫೈನಲ್‌ನ ಎರಡನೇ ಪ್ರಯತ್ನದಲ್ಲಿ ಅವರಿಂದ ಈ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ದೊರೆತ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ.

ಛೋಪ್ರಾ ಅವರ ನಿಕಟ ಪ್ರತಿಸ್ಪರ್ಧಿ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ಎಸೆಯುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದು, ಜಾಕುಬ್ ವದ್ಲೇಚ್ 86.67 ಮೀಟರ್ ಸಾಧನೆ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ವಿನಮ್ರತೆಗೆ ಹೆಸರಾಗಿರುವ ನೀರಜ್‌ ಚೋಪ್ರಾ ಅವರು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಚರ್ಚೆಯಲ್ಲಿ ಒಳಗೊಳ್ಳಲು ಇಷ್ಟಪಟ್ಟಿಲ್ಲ. ”ನಾನು ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಮಾತನ್ನು ಒಪ್ಪಲಾರೆ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲುವುದು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು. ಆದರೆ ಸಾಧಿಸಲು ಇನ್ನೂ ನನ್ನ ಎದುರು ಹಲವು ಗುರಿಗಳಿವೆ, ಅದರ ಕಡೆ ನನ್ನ ಗಮನ ಇರಲಿದೆ. ನಾನು ಇದನ್ನು (ಸಾವಕಾಲಿಕ ಶ್ರೇಷ್ಠ) ಹೇಳಿಕೊಳ್ಳಲು ಬಯಸುವುದಿಲ್ಲ” ಎಂದು ಜೋಪಾ ಪ್ರತಿಕ್ರಿಯಿಸಿದರು.

ಸಾವಕಾಲಿಕ ಶ್ರೇಷ್ಠ ಅಥ್ಲೇಟ್ ಎನಿಸಿಕೊಳ್ಳಬೇಕದಾರೆ, ಅದು ಜಾನ್‌ ಜೆಲೆಸ್ಕಿ ರೀತಿ ಇರಬೇಕು” ಎಂದು ಚೋಪ್ರಾ ಅವರು, ಜೆಕೊಸ್ಲಾವಾಕಿಯಾದ ವಿಶ್ವದಾಖರವೀರನ ಹೆಸರು ಪುಸ್ತಾಪಿಸಿದರು. ಜೆಲೆಸ್ಕಿ ಜಾವೆಲಿನ್‌ನಲ್ಲಿ ದಂತಕತೆಯಾಗಿದ್ದು, ಹಲವು ವರ್ಷಗಳಿಂದ ವಿಶ್ವದಾಖಲೆ (98.48 ಮೀ)ಯನ್ನು ತಮ್ಮ ಹೆಸರಿನಲ್ಲೇ ಹೊಂದಿದ್ದಾರೆ. ಮೂರು ಬಾರಿ ಒಲಿಂಪಿಕ್ ಮತ್ತು ಮೂರು ಬಾರಿ ವಿಶ್ವ ಚಾಂಪಿಯನ್ ಕೂಡ.. ಚೋಪ್ರಾ ಅವರಿಗೆ ಜೆಲೆನ್‌ಸ್ಕಿ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...