Homeಸಿನಿಮಾಕ್ರೀಡೆ'ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್' ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

‘ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್’ ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

- Advertisement -
- Advertisement -

ಜಾವೆಲಿನ್‌ನಲ್ಲಿ ವಿಶ್ವ ಚಾಂಪಿಯನ್‌ಷಿಪ್ ಗೆದ್ದ ನಂತರ ನೀರಜ್‌ ಚೋಪ್ರಾ ಅವರನ್ನು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂದು ಕರೆಯಲಾಗುತ್ತಿದೆ. ಆದರೆ ಚೋಪಾ ಅವರು ಅದನ್ನು ಒಪ್ಪಿಕೊಳ್ಳುತ್ತಿಲ್ಲ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲಲು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು ಎಂದು ಹೇಳಿದ್ದಾರೆ.

ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್‌, ಜಾವೆಲಿನ್‌ನ್ನು 88.17 ಮೀ. ದೂರ ಎಸೆಯುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಆರು ಎಸೆತಗಳ ಅವಕಾಶವಿದ್ದ ಫೈನಲ್‌ನ ಎರಡನೇ ಪ್ರಯತ್ನದಲ್ಲಿ ಅವರಿಂದ ಈ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ದೊರೆತ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ.

ಛೋಪ್ರಾ ಅವರ ನಿಕಟ ಪ್ರತಿಸ್ಪರ್ಧಿ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ಎಸೆಯುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದು, ಜಾಕುಬ್ ವದ್ಲೇಚ್ 86.67 ಮೀಟರ್ ಸಾಧನೆ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ವಿನಮ್ರತೆಗೆ ಹೆಸರಾಗಿರುವ ನೀರಜ್‌ ಚೋಪ್ರಾ ಅವರು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಚರ್ಚೆಯಲ್ಲಿ ಒಳಗೊಳ್ಳಲು ಇಷ್ಟಪಟ್ಟಿಲ್ಲ. ”ನಾನು ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಮಾತನ್ನು ಒಪ್ಪಲಾರೆ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲುವುದು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು. ಆದರೆ ಸಾಧಿಸಲು ಇನ್ನೂ ನನ್ನ ಎದುರು ಹಲವು ಗುರಿಗಳಿವೆ, ಅದರ ಕಡೆ ನನ್ನ ಗಮನ ಇರಲಿದೆ. ನಾನು ಇದನ್ನು (ಸಾವಕಾಲಿಕ ಶ್ರೇಷ್ಠ) ಹೇಳಿಕೊಳ್ಳಲು ಬಯಸುವುದಿಲ್ಲ” ಎಂದು ಜೋಪಾ ಪ್ರತಿಕ್ರಿಯಿಸಿದರು.

ಸಾವಕಾಲಿಕ ಶ್ರೇಷ್ಠ ಅಥ್ಲೇಟ್ ಎನಿಸಿಕೊಳ್ಳಬೇಕದಾರೆ, ಅದು ಜಾನ್‌ ಜೆಲೆಸ್ಕಿ ರೀತಿ ಇರಬೇಕು” ಎಂದು ಚೋಪ್ರಾ ಅವರು, ಜೆಕೊಸ್ಲಾವಾಕಿಯಾದ ವಿಶ್ವದಾಖರವೀರನ ಹೆಸರು ಪುಸ್ತಾಪಿಸಿದರು. ಜೆಲೆಸ್ಕಿ ಜಾವೆಲಿನ್‌ನಲ್ಲಿ ದಂತಕತೆಯಾಗಿದ್ದು, ಹಲವು ವರ್ಷಗಳಿಂದ ವಿಶ್ವದಾಖಲೆ (98.48 ಮೀ)ಯನ್ನು ತಮ್ಮ ಹೆಸರಿನಲ್ಲೇ ಹೊಂದಿದ್ದಾರೆ. ಮೂರು ಬಾರಿ ಒಲಿಂಪಿಕ್ ಮತ್ತು ಮೂರು ಬಾರಿ ವಿಶ್ವ ಚಾಂಪಿಯನ್ ಕೂಡ.. ಚೋಪ್ರಾ ಅವರಿಗೆ ಜೆಲೆನ್‌ಸ್ಕಿ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...