Homeಕರ್ನಾಟಕಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ; ನೀವು ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ. ನಾವು ಬಸವಾದಿ ಶರಣರ ಮಾರ್ಗದಲ್ಲಿ ಹಿಂದೆಯೂ ನುಡಿದಂತೆ ನಡೆದಿದ್ದೇವೆ. ಈಗಲೂ ನಡೆಯುತ್ತಿದ್ದೇವೆ’ ಎಂದು ಮುಖ್ಯಮಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

‘ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿತು’ ಎಂದು ವಿವರಿಸಿದರು.

‘ಆದರೆ, ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ ‘ಇವ ನಮ್ಮವ ಇವ ನಮ್ಮವ’ ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

‘ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು , ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.

‘ಒಂದೇ ದಿನ ₹227 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

‘ಮಾರ್ಚ್ 20 ರಂದು ನಾನು ಮುದ್ಸೇಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇ ಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ಸೇವೆ. ಈಗಲೂ ಅಷ್ಟೆ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ; ಎಂದು ವಿವರಿಸಿದರು.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲೇ ಅಭಿನಂದಿಸಿ, ಸನ್ಮಾನಿಸಿ ಆಶೀರ್ವದಿಸಿದರು.

ಇದನ್ನೂ ಓದಿ; ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...