Homeಚಳವಳಿರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ ಕೇಜ್ರಿವಾಲ್

ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ ಕೇಜ್ರಿವಾಲ್

ಈ ಕೃಷಿ ಕಾನೂನುಗಳು ರೈತರಿಗೆ ಸಹಾಯವಾಗಲಿ ಎಂದು ತಂದಿಲ್ಲ. ಇವುಗಳನ್ನು ಬಿಜೆಪಿಗೆ ಚುನಾವಣೆಯ ಸಮಯದಲ್ಲಿ ಹಣಕಾಸು ನೀಡುವವರಿಗಾಗಿ ತರಲಾಗಿದೆ ಎಂದು ಕೇಜ್ರಿವಾಲ್ ದೂರಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಕುರಿತು ಚರ್ಚಿಸಲು ಕರೆದಿರುವ ವಿಶೇಷ ಅಸೆಂಬ್ಲಿ ಅಧಿವೇಶನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೃಷಿ ಮಸೂದೆಗಳ ಪ್ರತಿಗಳನ್ನು ಹರಿದುಹಾಕಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ, “ಬ್ರಿಟಿಷರಿಗಿಂತ ಕೆಟ್ಟವರಾಗಬೇಡಿ” ಎಂದು ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿರುವ ಕೇಜ್ರಿವಾಲ್, “ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಕೃಷಿ ಕಾನೂನುಗಳನ್ನು ಜಾರಿಗೆ ತರಲು ಏನು ಅವಸರ” ಎಂದು ಪ್ರಶ್ನಿಸಿದ್ದಾರೆ.

ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಎಲ್ಲಾ ಸೌಲಭ್ಯಗಳನ್ನು ಕೇಜ್ರಿವಾಲ್ ಒದಗಿಸಿದ್ದರು. ತಾವೇ ಖುದ್ದು ಪ್ರತಿಭಟನಾಕಾರರನ್ನು ಭೇಟಿಯಾಗಿ ವಿಚಾರಿಸಿದ್ದರು. ಇದರಿಂದ ಗೃಹ ಬಂಧನಕ್ಕೂ ಒಳಗಾಗಿದ್ದರು.

ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಕೇಜ್ರಿವಾಲ್, ’ನಾನು ಈ ಅಸೆಂಬ್ಲಿಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹರಿದು ಹಾಕುತ್ತೇನೆ ಮತ್ತು ಬ್ರಿಟಿಷರಿಗಿಂತ ಕೆಟ್ಟವರಾಗದಂತೆ ಕೇಂದ್ರಕ್ಕೆ ಮನವಿ ಮಾಡುತ್ತೇನೆ. ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಅಂಗೀಕರಿಸುವ ಆತುರ ಏನು?” ಎಂದು ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಕರೆಯಲಾದ ಅಧಿವೇಶನದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಮುಂದುವರಿದು, “ಪ್ರತಿಯೊಬ್ಬ ರೈತ ಭಗತ್ ಸಿಂಗ್ ಆಗಿ ಮಾರ್ಪಟ್ಟಿದ್ದಾರೆ’ ಎಂದು ರೈತರ ಪ್ರತಿಭಟನೆಯ ಬಗ್ಗೆ, ಕೃಷಿ ಕಾನೂನುಗಳ ರದ್ಧತಿ ಬಗ್ಗೆ ಪಟ್ಟು ಹಿಡಿದು ಕುಳಿತಿರುವ ರೈತರ ಬಗ್ಗೆ ವಿವರಿಸಿದ್ದಾರೆ.

ಈವರೆಗೆ ಪ್ರತಿಭಟನಾ ನಿರತ ರೈತರಲ್ಲಿ 20ಕ್ಕೂ ಹೆಚ್ಚು ರೈತರು ಚಳಿ, ಅನಾರೋಗ್ಯ ಹಿನ್ನೆಲೆ ಸಾವನ್ನಪ್ಪಿದ್ದು, ಕೇಂದ್ರ ಸರ್ಕಾರ ಇನ್ನೂ ರೈತರ ಮಾತುಗಳನ್ನು ಕೇಳಲು ರೈತರು ಇನ್ನೆಷ್ಟು ಬಲಿದಾನ ನೀಡಬೇಕು. ಬ್ರಿಟಿಷರಿಗಿಂತ ಕೆಟ್ಟವರಾಗಬೇಡಿ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಈ ಕೃಷಿ ಕಾನೂನುಗಳು ರೈತರಿಗೆ ಸಹಾಯವಾಗಲಿ ಎಂದು ತಂದಿಲ್ಲ. ಇವುಗಳನ್ನು ಭಾರತೀಯ ಜನತಾ ಪಾರ್ಟಿಗೆ ಚುನಾವಣೆಯ ಸಮಯದಲ್ಲಿ ಹಣಕಾಸು ನೀಡುವವರಿಗಾಗಿ ತರಲಾಗಿದೆ ಎಂದು ಆರೋಪಿಸಿದ್ದಾರೆ.

ಆಪ್ ಕಾರ್ಯಕರ್ತರು, ನಾಯಕರು ದೆಹಲಿ ವಿಧಾನಸಭೆಯ ಮುಂದೆಯೂ ಕೂಡ ಕೃಷಿ ಮಸೂದೆಗಳನ್ನು ಸುಟ್ಟು ವಿರೋಧ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಆಡಳಿತರೂಢ ಆಪ್ ಸರ್ಕಾರ ರೈತರ ಧ್ವನಿಗೆ ಬೆಂಬಲವಾಗಿ ನಿಂತಿದೆ. ಕೇಂದ್ರ ಸರ್ಕಾರದ ದೌರ್ಜನ್ಯಗಳಾದ ಜಲಫಿರಂಗಿ, ಆಶ್ರುವಾಯು ಪ್ರಯೋಗ ಮತ್ತು ಲಾಠಿಚಾರ್ಜ್ ಅನುಭವಿಸಿ ಈಗ ತೀವ್ರ ಶೀತದಲ್ಲೂ ಪ್ರತಿಭಟೆಇಸುತ್ತಿರುವ ಸಾವಿರಾರು ರೈತರಿಗೆ ಕುಡಿಯುವ ನೀರು, ವೈದ್ಯಕೀಯ ಆರೈಕೆ ಮತ್ತು ನೈರ್ಮಲ್ಯ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಿದೆ.

Image

ಆಪ್ ಶಾಸಕರು ಕೃಷಿ ಮಸೂದೆಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಕೃಷಿ ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿ ಸ್ಪೀಕರ್‌ ಅವರನ್ನು ಮುತ್ತಿಗೆ ಹಾಕಿದ ಕಾರಣ, ಕಲಾಪವನ್ನು ನಾಳೆ 11 ಗಂಟೆಗೆ ಮುಂದೂಡಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಪ್ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...