Homeಚಳವಳಿರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ ಕೇಜ್ರಿವಾಲ್

ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ ಕೇಜ್ರಿವಾಲ್

ಈ ಕೃಷಿ ಕಾನೂನುಗಳು ರೈತರಿಗೆ ಸಹಾಯವಾಗಲಿ ಎಂದು ತಂದಿಲ್ಲ. ಇವುಗಳನ್ನು ಬಿಜೆಪಿಗೆ ಚುನಾವಣೆಯ ಸಮಯದಲ್ಲಿ ಹಣಕಾಸು ನೀಡುವವರಿಗಾಗಿ ತರಲಾಗಿದೆ ಎಂದು ಕೇಜ್ರಿವಾಲ್ ದೂರಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಕುರಿತು ಚರ್ಚಿಸಲು ಕರೆದಿರುವ ವಿಶೇಷ ಅಸೆಂಬ್ಲಿ ಅಧಿವೇಶನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೃಷಿ ಮಸೂದೆಗಳ ಪ್ರತಿಗಳನ್ನು ಹರಿದುಹಾಕಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ, “ಬ್ರಿಟಿಷರಿಗಿಂತ ಕೆಟ್ಟವರಾಗಬೇಡಿ” ಎಂದು ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿರುವ ಕೇಜ್ರಿವಾಲ್, “ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಕೃಷಿ ಕಾನೂನುಗಳನ್ನು ಜಾರಿಗೆ ತರಲು ಏನು ಅವಸರ” ಎಂದು ಪ್ರಶ್ನಿಸಿದ್ದಾರೆ.

ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಎಲ್ಲಾ ಸೌಲಭ್ಯಗಳನ್ನು ಕೇಜ್ರಿವಾಲ್ ಒದಗಿಸಿದ್ದರು. ತಾವೇ ಖುದ್ದು ಪ್ರತಿಭಟನಾಕಾರರನ್ನು ಭೇಟಿಯಾಗಿ ವಿಚಾರಿಸಿದ್ದರು. ಇದರಿಂದ ಗೃಹ ಬಂಧನಕ್ಕೂ ಒಳಗಾಗಿದ್ದರು.

ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಕೇಜ್ರಿವಾಲ್, ’ನಾನು ಈ ಅಸೆಂಬ್ಲಿಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹರಿದು ಹಾಕುತ್ತೇನೆ ಮತ್ತು ಬ್ರಿಟಿಷರಿಗಿಂತ ಕೆಟ್ಟವರಾಗದಂತೆ ಕೇಂದ್ರಕ್ಕೆ ಮನವಿ ಮಾಡುತ್ತೇನೆ. ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಅಂಗೀಕರಿಸುವ ಆತುರ ಏನು?” ಎಂದು ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಕರೆಯಲಾದ ಅಧಿವೇಶನದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಮುಂದುವರಿದು, “ಪ್ರತಿಯೊಬ್ಬ ರೈತ ಭಗತ್ ಸಿಂಗ್ ಆಗಿ ಮಾರ್ಪಟ್ಟಿದ್ದಾರೆ’ ಎಂದು ರೈತರ ಪ್ರತಿಭಟನೆಯ ಬಗ್ಗೆ, ಕೃಷಿ ಕಾನೂನುಗಳ ರದ್ಧತಿ ಬಗ್ಗೆ ಪಟ್ಟು ಹಿಡಿದು ಕುಳಿತಿರುವ ರೈತರ ಬಗ್ಗೆ ವಿವರಿಸಿದ್ದಾರೆ.

ಈವರೆಗೆ ಪ್ರತಿಭಟನಾ ನಿರತ ರೈತರಲ್ಲಿ 20ಕ್ಕೂ ಹೆಚ್ಚು ರೈತರು ಚಳಿ, ಅನಾರೋಗ್ಯ ಹಿನ್ನೆಲೆ ಸಾವನ್ನಪ್ಪಿದ್ದು, ಕೇಂದ್ರ ಸರ್ಕಾರ ಇನ್ನೂ ರೈತರ ಮಾತುಗಳನ್ನು ಕೇಳಲು ರೈತರು ಇನ್ನೆಷ್ಟು ಬಲಿದಾನ ನೀಡಬೇಕು. ಬ್ರಿಟಿಷರಿಗಿಂತ ಕೆಟ್ಟವರಾಗಬೇಡಿ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಈ ಕೃಷಿ ಕಾನೂನುಗಳು ರೈತರಿಗೆ ಸಹಾಯವಾಗಲಿ ಎಂದು ತಂದಿಲ್ಲ. ಇವುಗಳನ್ನು ಭಾರತೀಯ ಜನತಾ ಪಾರ್ಟಿಗೆ ಚುನಾವಣೆಯ ಸಮಯದಲ್ಲಿ ಹಣಕಾಸು ನೀಡುವವರಿಗಾಗಿ ತರಲಾಗಿದೆ ಎಂದು ಆರೋಪಿಸಿದ್ದಾರೆ.

ಆಪ್ ಕಾರ್ಯಕರ್ತರು, ನಾಯಕರು ದೆಹಲಿ ವಿಧಾನಸಭೆಯ ಮುಂದೆಯೂ ಕೂಡ ಕೃಷಿ ಮಸೂದೆಗಳನ್ನು ಸುಟ್ಟು ವಿರೋಧ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಆಡಳಿತರೂಢ ಆಪ್ ಸರ್ಕಾರ ರೈತರ ಧ್ವನಿಗೆ ಬೆಂಬಲವಾಗಿ ನಿಂತಿದೆ. ಕೇಂದ್ರ ಸರ್ಕಾರದ ದೌರ್ಜನ್ಯಗಳಾದ ಜಲಫಿರಂಗಿ, ಆಶ್ರುವಾಯು ಪ್ರಯೋಗ ಮತ್ತು ಲಾಠಿಚಾರ್ಜ್ ಅನುಭವಿಸಿ ಈಗ ತೀವ್ರ ಶೀತದಲ್ಲೂ ಪ್ರತಿಭಟೆಇಸುತ್ತಿರುವ ಸಾವಿರಾರು ರೈತರಿಗೆ ಕುಡಿಯುವ ನೀರು, ವೈದ್ಯಕೀಯ ಆರೈಕೆ ಮತ್ತು ನೈರ್ಮಲ್ಯ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಿದೆ.

Image

ಆಪ್ ಶಾಸಕರು ಕೃಷಿ ಮಸೂದೆಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಕೃಷಿ ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿ ಸ್ಪೀಕರ್‌ ಅವರನ್ನು ಮುತ್ತಿಗೆ ಹಾಕಿದ ಕಾರಣ, ಕಲಾಪವನ್ನು ನಾಳೆ 11 ಗಂಟೆಗೆ ಮುಂದೂಡಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಪ್ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...