Homeಮುಖಪುಟಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ: ಪಿ.ಚಿದಂಬರಂ

ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ: ಪಿ.ಚಿದಂಬರಂ

ಆರ್‌ಬಿಐ ಸೇರಿದಂತೆ ಇತರೆ ತಜ್ಞರು ಈ ಕುಸಿತವನ್ನು ಊಹಿಸಿ, ಎಚ್ಚರಿಸಿದ್ದರು. ಈ ಸರ್ಕಾರವು ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ. ಜೊತೆಗೆ ಆಶಾಭಾವನೆಯ ಭರವಸೆಯನ್ನೂ ಸಹ ಮೂಡಿಸುವುದಿಲ್ಲ ಎಂದು ಚಿದಂಬರಂ ಹೇಳಿದರು

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಕ್ಟ್ ಆಫ್ ಗಾಡ್ (ದೇವರ ಕಾರ್ಯ) ಹೇಳಿಕೆಗೆ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನವ ನಿರ್ಮಿತ ತಪ್ಪುಗಳಿಗೆ ದೇವರನ್ನು ದೂಷಿಸಬೇಡಿ ಎಂದಿದ್ದಾರೆ.

ಕೊರೊನಾ ವೈರಸ್ ಆರ್ಥಿಕತೆ ಮೇಲೆ ಬೀರಿರುವ ಪರಿಣಾಮದ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ’ಕೊರೊನಾ ಸಾಂಕ್ರಾಮಿಕವು ದೇವರ ಕಾರ್ಯ. ಹಾಗಾಗಿಯೇ ಜಿಎಸ್‌ಟಿ ಸಂಗ್ರಹದಲ್ಲಿ ಕುಸಿತವಾಗಿದೆ’ ಎಂದು ಹೇಳಿ ವಿವಾದಕ್ಕೊಳಗಾಗಿದ್ದಾರೆ.

ಕೊರೋನಾ ಸೋಂಕು ಸಾಂಕ್ರಾಮಿಕ ರೋಗವು ನೈಸರ್ಗಿಕ ವಿಪತ್ತು ನಿಜ, ಆದರೆ ನೀವು ನೈಸರ್ಗಿಕ ವಿಪತ್ತನ್ನು ಮಾನವ ನಿರ್ಮಿತ ವಿಪತ್ತಿನೊಂದಿಗೆ ಸಂಯೋಜಿಸುತ್ತಿದ್ದೀರಿ ಎಂದಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ಇನ್ನು ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಮಣ್ಯನ್ ಅವರ ವಿ-ಆಕಾರದ ಚೇತರಿಕೆಯನ್ನು ಟೀಕಿಸಿದ್ದಾರೆ. ಮುಖ್ಯ ಆರ್ಥಿಕ ಸಲಹೆಗಾರರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವವರಿಲ್ಲ. ಅವರು ಪ್ರಧಾನಿಗಳನ್ನು ಭೇಟಿ ಮಾಡಿ ಸಂಭಾಷಣೆ ನಡೆಸಿ ತುಂಬಾ ದಿನಗಳಾಗಿವೆ ಎಂದಿದ್ದಾರೆ.

2019-20ರ ಅಂತ್ಯದ ವೇಳೆಗೆ ಒಟ್ಟು ದೇಶೀಯ ಉತ್ಪಾದನೆಯು ಶೇ.20 ರಷ್ಟು ಕುಸಿದಿತ್ತು. ಆದರೆ ಕೃಷಿ, ಅರಣ್ಯ ಮತ್ತು ಮೀನುಗಾರಿಕೆು ಕ್ಷೇತ್ರ ಮಾತ್ರ ಶೇ.3.4 ರಷ್ಟು ಏರಿಕೆ ಕಂಡಿತ್ತು. ಆರ್ಥಿಕ ಕುಸಿತಕ್ಕೆ ದೇವರನ್ನು ದೂಷಿಸುವ ನಿರ್ಮಲಾ ಸೀತಾರಾಮನ್, ಕೃಷಿಕರು ಮತ್ತು ಅವರಿಗೆ ಕೃಪೆ ತೋರಿದ ದೇವರನ್ನು ಶ್ಲಾಘಿಸಬೇಕು” ಎಂದು ಚಿದಂಬರಂ ಹೇಳಿದರು.

ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ಆರ್‌ಬಿಐ ಸೇರಿದಂತೆ ಇತರೆ ತಜ್ಞರು ಈ ಕುಸಿತವನ್ನು ಊಹಿಸಿ, ಎಚ್ಚರಿಸಿದ್ದರು. ಈ ಸರ್ಕಾರವು ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ. ಜೊತೆಗೆ ಆಶಾಭಾವನೆಯ ಭರವಸೆಯನ್ನೂ ಸಹ ಮೂಡಿಸುವುದಿಲ್ಲ ಎಂದು ಚಿದಂಬರಂ ಹೇಳಿದರು.

ಸದ್ಯದ ಆರ್ಥಿಕ ಚೇತರಿಕೆಗೆ ಸರ್ಕಾರ ಭಾರಿ ಸಾಲವನ್ನು ಪಡೆಯಬೇಕು ಅಥವಾ ಕೊರತೆಯ ಭಾಗವನ್ನು ಸರಿದೂಗಿಸಲು ಹಣವನ್ನು ಮುದ್ರಿಸಬೇಕು ಎಂಬ ಸಲಹೆಯನ್ನು ಮಾಜಿ ಹಣಕಾಸು ಸಚಿವ ಚಿದಂಬರಂ ಹೇಳಿದ್ದಾರೆ.

ದೇಶದ ಜಿಡಿಪಿಯಲ್ಲಿ ಶೇಕಡಾ 23.9 ರಷ್ಟು ಕುಸಿತ ಕಂಡಿರುವುದಕ್ಕೆ ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್ ಅನ್ನು ಪಿ.ಚಿದಂಬರಂ ಅದೊಂದು ತಮಾಷೆ ಎಂದು ಕರೆದಿದ್ದಾರೆ.


ಇದನ್ನೂ ಓದಿ: ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...