Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು.

- Advertisement -
- Advertisement -

ತೆಂಗಿನ ಮರವನ್ನು ಇನ್ನಿತರ ಮರಗಳಿಂದ ಬೇರ್ಪಡಿಸಿ ನೋಡುವಂತೆ ಮಾಡಿರುವುದೇ ಈ ಮರಕ್ಕಿರುವ ರೆಕ್ಕೆಯಂತಾ ಗರಿಗಳು. ಜನರು ಇದನ್ನು ಸರಿಯಾಗಿಯೇ ಗುರ್ತಿಸಿ ತೆಂಗಿನ ಎಲೆ ಎನ್ನದೆ ತೆಂಗಿನ ಗರಿ ಎಂದು ಕರೆದಿರುವುದು. ಗಾಳಿ ಬೀಸುವಾಗ ನೋಡಿದರೆ ಇವು ಎಲ್ಲಿಗೋ ಹಾರಿ ಹೋಗಲು ಸಿದ್ಧವಾಗುತ್ತಿವೆಯೇನೋ ಅನಿಸುತ್ತದೆ. ರೆಂಬೆ ಕೊಂಬೆ ಇಲ್ಲದ ಈ ಮರಕ್ಕೆ ಈ ಗರಿಗಳೇ ರೆಂಬೆಗಳು ಕೊಂಬೆಗಳು.

ಈಗ್ಗೆ ನಲವತ್ತು ಐವತ್ತು ವರ್ಷಗಳ ಹಿಂದೆ ತೆಂಗು ವಿರಳವಾಗಿದ್ದಾಗಲೂ ಅವುಗಳ ಗರಿಗಳನ್ನು ಮದುವೆ ಚಪ್ಪರಗಳ ರಚನೆಗೆ ಬಳಸುತ್ತಿದ್ದರು. ಅಡಕೆ ಮರ ಅಡಕೆ ದಬ್ಬೆಗಳನ್ನು ಬಳಸಿ ರೂಪಿಸುತ್ತಿದ್ದ ಚಪ್ಪರಕ್ಕೆ ಈ ಕಲಾಕೃತಿಯಂತಾ ಗರಿಗಳನ್ನು ಹೊದಿಸುತ್ತಿದ್ದರು. ಈ ಬಗೆಯ ಚಪ್ಪರವನ್ನು ನೋಡಲೆಂದೆ ಜನ ನಮ್ಮೂರಿನ ಮದುವೆಗಳಿಗೆ ಬರುತ್ತಿದ್ದರು. ನಮ್ಮೂರಿನ ಸಿದ್ದಕ್ಕನವರ ರಾಮಣ್ಣನವರು ಈ ಚಪ್ಪರ ಹಾಕಿಸುವ ಇಂಜಿನಿಯರ್‌ ಆಗಿದ್ದರು. ಒಂದಿಂಚೂ ಆಚೀಚೆ ಆಗದಂತೆ ಗಣಿತ ಶಾಸ್ತ್ರ ಪಂಡಿತರಂತೆ ಮುಂದೆ ನಿಂತು ಚಪ್ಪರ ಹಾಕಿಸುತ್ತಿದ್ದರು. ಇವರಿಗೆ ಸಾತ್‌ ನೀಡುತ್ತಿದ್ದ ನಮ್ಮ ಪೀಳಿಗೆಯ ಜನ ಅವರನ್ನು ಬಹುವಾಗಿ ನೆನಪಿಸಿಕೊಳ್ಳುತ್ತಾರೆ.

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು. ನಮ್ಮ ಅಟ್ಟದ ಮೇಲೆ ಹುಡುಕಿದರೆ ಸಿದ್ದಪ್ಪ ಹೆಣೆದ ಸಿಂಬೆಗಳು ಅನಾಥ ಸ್ಥಿತಿಯಲ್ಲಿ ಸಿಕ್ಕಾವು. ಇಂಥಾ ಸಿದ್ದಪ್ಪ ಹೆಣೆದುಕೊಡುತ್ತಿದ್ದ ಹರಟೆ ಚಾಪೆಗಳ ಮೇಲೆ ಕೂರಿಸಿಕೊಂಡು ರಾತ್ರಿ ಆಕಾಶದ ಅಡಿಯಲ್ಲಿ ನಮ್ಮಜ್ಜಿ ಹೇಳುತ್ತಿದ್ದ ಕತೆಗಳ ಮಾಯಕ್ಕೆ ಏನು ಸಮ.

ಆಯ್ಕೆ ಮಾಡಿದ ಒಣ ತೆಂಗಿನ ಗರಿಗಳಿಂದ ಚಾಪೆ ಹೆಣೆದು ಕೃಷಿ ಉತ್ಪನ್ನಗಳನ್ನು ಒಣಗಲು ಹಾಕಲು ಬಳಸುತ್ತಿದ್ದರು. ಟಾರ್ಪಾಲು, ಪ್ಲಾಸ್ಟಿಕ್ ಶೀಟ್‌ ಗಳ ಬಳಕೆ ಇರಲೇ ಇಲ್ಲ. ಇಂಥ ಚಾಪೆಗಳನ್ನು ಹೆಣೆಯುವುದರಲ್ಲಿ ನಮ್ಮವ್ವನ್ನನ್ನು ಮೀರಿಸುವವರು ಇರಲಿಲ್ಲವೆಂದು ಆಗ ನಮ್ಮವ್ವನ ಸಹಚರರು ಹೇಳುತ್ತಿದ್ದುದನ್ನು ಕೇಳಿಸಿಕೊಂಡಿದ್ದೆ. ನಮ್ಮವ್ವನ ಈ ಚಾಪೆಗಳ ಹಣಿ ಅಗಲವಾಗಿಯೂ ದೃಢವಾಗಿಯೂ ಇರುತ್ತಿದ್ದವು. ಮಾತು ಮಾತಾಡುತ್ತಲೇ ಚಾಪೆಯ ಹಣಿಯ ಸಿಂಬೆಗಳು ಸುತ್ತಿಕೊಂಡು ದೊಡ್ಡವಾಗುತ್ತಿದ್ದವು. ಈ ಹಣಿಗಳನ್ನು ಸೇರಿಸಿ ಒಟ್ಟಿಗೆ ಚಾಪೆ ಹೊಲಿಯುವುದು ಒಂದು ಕಲೆ. ಈಚಲು ಗರಿಗಳಿಂದ ಚಾಪೆ ಹೆಣಿಯುತ್ತಿದ್ದರು, ನಿಜ ಹೇಳಬೇಕೆಂದರೆ ಇವು ತೆಂಗಿನ ಚಾಪೆಗಳಿಗಿಂತಲೂ ಬಾಳಿಕೆ ಬರುತ್ತಿದ್ದವು. ಇವೆಲ್ಲ ಈಗ ಗ್ರಾಮೀಣ ಚರಿತ್ರೆಯ ಹಳಹಳಿಕೆಗಳಾಗಿ ಮಾತ್ರ ಉಳಿದಿವೆ.

ಈಗ ಈ ಗರಿಗಳನ್ನು ನಾವೀಗ ಮಲ್ಚಿಂಗ್‌ ಮುಚ್ಚಿಕೆಯಾಗಿ ಬಳಸುತ್ತಿದ್ದೇವೆ. ಸ್ವಾಗೆ ಗರಿಗಳಲ್ಲಿರುವ ಕಡ್ಡಿಗೆ ಈಗ ಉತ್ತಮ ಬೆಲೆ ಬಂದಿದೆ, ಉತ್ತರ ಭಾರತದ ಕಸ ಗುಡಿಸುತ್ತಿರುವುದು ಈ ನಮ್ಮ ಭಾಗದ ಸ್ವಾಗೆ ಕಡ್ಡಿ ಪೊರಕೆಗಳೇ. ಆಮ್‌ ಆದ್ಮಿ ಪಕ್ಷದ ಸಿಂಬಲ್ ಮಟ್ಟಕೆ ಅದು ಬೆಳೆದು ನಿಂತಿರುವುದು ಯಾರಿಗೆ ತಾನೆ ಗೊತ್ತಿಲ್ಲ.

ಈ ತೆಂಗಿನ ಗರಿಗಳನ್ನು ಸುಟ್ಟು ಭಸ್ಮ ಮಾಡುತ್ತಿದ್ದ ರೈತರೀಗ ಅದರ ಲಾಭ ಕಂಡುಕೊಂಡಿದ್ದಾರೆ. ನೆಲದ ಪಸೆ ಆರದಂತೆ ಅವುಗಳನ್ನು ಹರಡಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಈ ಗರಿಗಳನ್ನು ಸಣ್ಣಗೆ ಸವರಿ ಹರಡುತ್ತಿದ್ದಾರೆ, ಏನಾದರೂ ಆಗಲಿ ಸುಡದಿದ್ದರೆ ಸಾಕು. ಸುಟ್ಟರೆ ಸುಡುಗಾಡು ಎಂಬುದನ್ನು ಮತ್ತೆ ಮತ್ತೆ ನೆನೆದರೆ ಅದೇ ಪುಣ್ಯ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...