Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು.

- Advertisement -
- Advertisement -

ತೆಂಗಿನ ಮರವನ್ನು ಇನ್ನಿತರ ಮರಗಳಿಂದ ಬೇರ್ಪಡಿಸಿ ನೋಡುವಂತೆ ಮಾಡಿರುವುದೇ ಈ ಮರಕ್ಕಿರುವ ರೆಕ್ಕೆಯಂತಾ ಗರಿಗಳು. ಜನರು ಇದನ್ನು ಸರಿಯಾಗಿಯೇ ಗುರ್ತಿಸಿ ತೆಂಗಿನ ಎಲೆ ಎನ್ನದೆ ತೆಂಗಿನ ಗರಿ ಎಂದು ಕರೆದಿರುವುದು. ಗಾಳಿ ಬೀಸುವಾಗ ನೋಡಿದರೆ ಇವು ಎಲ್ಲಿಗೋ ಹಾರಿ ಹೋಗಲು ಸಿದ್ಧವಾಗುತ್ತಿವೆಯೇನೋ ಅನಿಸುತ್ತದೆ. ರೆಂಬೆ ಕೊಂಬೆ ಇಲ್ಲದ ಈ ಮರಕ್ಕೆ ಈ ಗರಿಗಳೇ ರೆಂಬೆಗಳು ಕೊಂಬೆಗಳು.

ಈಗ್ಗೆ ನಲವತ್ತು ಐವತ್ತು ವರ್ಷಗಳ ಹಿಂದೆ ತೆಂಗು ವಿರಳವಾಗಿದ್ದಾಗಲೂ ಅವುಗಳ ಗರಿಗಳನ್ನು ಮದುವೆ ಚಪ್ಪರಗಳ ರಚನೆಗೆ ಬಳಸುತ್ತಿದ್ದರು. ಅಡಕೆ ಮರ ಅಡಕೆ ದಬ್ಬೆಗಳನ್ನು ಬಳಸಿ ರೂಪಿಸುತ್ತಿದ್ದ ಚಪ್ಪರಕ್ಕೆ ಈ ಕಲಾಕೃತಿಯಂತಾ ಗರಿಗಳನ್ನು ಹೊದಿಸುತ್ತಿದ್ದರು. ಈ ಬಗೆಯ ಚಪ್ಪರವನ್ನು ನೋಡಲೆಂದೆ ಜನ ನಮ್ಮೂರಿನ ಮದುವೆಗಳಿಗೆ ಬರುತ್ತಿದ್ದರು. ನಮ್ಮೂರಿನ ಸಿದ್ದಕ್ಕನವರ ರಾಮಣ್ಣನವರು ಈ ಚಪ್ಪರ ಹಾಕಿಸುವ ಇಂಜಿನಿಯರ್‌ ಆಗಿದ್ದರು. ಒಂದಿಂಚೂ ಆಚೀಚೆ ಆಗದಂತೆ ಗಣಿತ ಶಾಸ್ತ್ರ ಪಂಡಿತರಂತೆ ಮುಂದೆ ನಿಂತು ಚಪ್ಪರ ಹಾಕಿಸುತ್ತಿದ್ದರು. ಇವರಿಗೆ ಸಾತ್‌ ನೀಡುತ್ತಿದ್ದ ನಮ್ಮ ಪೀಳಿಗೆಯ ಜನ ಅವರನ್ನು ಬಹುವಾಗಿ ನೆನಪಿಸಿಕೊಳ್ಳುತ್ತಾರೆ.

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು. ನಮ್ಮ ಅಟ್ಟದ ಮೇಲೆ ಹುಡುಕಿದರೆ ಸಿದ್ದಪ್ಪ ಹೆಣೆದ ಸಿಂಬೆಗಳು ಅನಾಥ ಸ್ಥಿತಿಯಲ್ಲಿ ಸಿಕ್ಕಾವು. ಇಂಥಾ ಸಿದ್ದಪ್ಪ ಹೆಣೆದುಕೊಡುತ್ತಿದ್ದ ಹರಟೆ ಚಾಪೆಗಳ ಮೇಲೆ ಕೂರಿಸಿಕೊಂಡು ರಾತ್ರಿ ಆಕಾಶದ ಅಡಿಯಲ್ಲಿ ನಮ್ಮಜ್ಜಿ ಹೇಳುತ್ತಿದ್ದ ಕತೆಗಳ ಮಾಯಕ್ಕೆ ಏನು ಸಮ.

ಆಯ್ಕೆ ಮಾಡಿದ ಒಣ ತೆಂಗಿನ ಗರಿಗಳಿಂದ ಚಾಪೆ ಹೆಣೆದು ಕೃಷಿ ಉತ್ಪನ್ನಗಳನ್ನು ಒಣಗಲು ಹಾಕಲು ಬಳಸುತ್ತಿದ್ದರು. ಟಾರ್ಪಾಲು, ಪ್ಲಾಸ್ಟಿಕ್ ಶೀಟ್‌ ಗಳ ಬಳಕೆ ಇರಲೇ ಇಲ್ಲ. ಇಂಥ ಚಾಪೆಗಳನ್ನು ಹೆಣೆಯುವುದರಲ್ಲಿ ನಮ್ಮವ್ವನ್ನನ್ನು ಮೀರಿಸುವವರು ಇರಲಿಲ್ಲವೆಂದು ಆಗ ನಮ್ಮವ್ವನ ಸಹಚರರು ಹೇಳುತ್ತಿದ್ದುದನ್ನು ಕೇಳಿಸಿಕೊಂಡಿದ್ದೆ. ನಮ್ಮವ್ವನ ಈ ಚಾಪೆಗಳ ಹಣಿ ಅಗಲವಾಗಿಯೂ ದೃಢವಾಗಿಯೂ ಇರುತ್ತಿದ್ದವು. ಮಾತು ಮಾತಾಡುತ್ತಲೇ ಚಾಪೆಯ ಹಣಿಯ ಸಿಂಬೆಗಳು ಸುತ್ತಿಕೊಂಡು ದೊಡ್ಡವಾಗುತ್ತಿದ್ದವು. ಈ ಹಣಿಗಳನ್ನು ಸೇರಿಸಿ ಒಟ್ಟಿಗೆ ಚಾಪೆ ಹೊಲಿಯುವುದು ಒಂದು ಕಲೆ. ಈಚಲು ಗರಿಗಳಿಂದ ಚಾಪೆ ಹೆಣಿಯುತ್ತಿದ್ದರು, ನಿಜ ಹೇಳಬೇಕೆಂದರೆ ಇವು ತೆಂಗಿನ ಚಾಪೆಗಳಿಗಿಂತಲೂ ಬಾಳಿಕೆ ಬರುತ್ತಿದ್ದವು. ಇವೆಲ್ಲ ಈಗ ಗ್ರಾಮೀಣ ಚರಿತ್ರೆಯ ಹಳಹಳಿಕೆಗಳಾಗಿ ಮಾತ್ರ ಉಳಿದಿವೆ.

ಈಗ ಈ ಗರಿಗಳನ್ನು ನಾವೀಗ ಮಲ್ಚಿಂಗ್‌ ಮುಚ್ಚಿಕೆಯಾಗಿ ಬಳಸುತ್ತಿದ್ದೇವೆ. ಸ್ವಾಗೆ ಗರಿಗಳಲ್ಲಿರುವ ಕಡ್ಡಿಗೆ ಈಗ ಉತ್ತಮ ಬೆಲೆ ಬಂದಿದೆ, ಉತ್ತರ ಭಾರತದ ಕಸ ಗುಡಿಸುತ್ತಿರುವುದು ಈ ನಮ್ಮ ಭಾಗದ ಸ್ವಾಗೆ ಕಡ್ಡಿ ಪೊರಕೆಗಳೇ. ಆಮ್‌ ಆದ್ಮಿ ಪಕ್ಷದ ಸಿಂಬಲ್ ಮಟ್ಟಕೆ ಅದು ಬೆಳೆದು ನಿಂತಿರುವುದು ಯಾರಿಗೆ ತಾನೆ ಗೊತ್ತಿಲ್ಲ.

ಈ ತೆಂಗಿನ ಗರಿಗಳನ್ನು ಸುಟ್ಟು ಭಸ್ಮ ಮಾಡುತ್ತಿದ್ದ ರೈತರೀಗ ಅದರ ಲಾಭ ಕಂಡುಕೊಂಡಿದ್ದಾರೆ. ನೆಲದ ಪಸೆ ಆರದಂತೆ ಅವುಗಳನ್ನು ಹರಡಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಈ ಗರಿಗಳನ್ನು ಸಣ್ಣಗೆ ಸವರಿ ಹರಡುತ್ತಿದ್ದಾರೆ, ಏನಾದರೂ ಆಗಲಿ ಸುಡದಿದ್ದರೆ ಸಾಕು. ಸುಟ್ಟರೆ ಸುಡುಗಾಡು ಎಂಬುದನ್ನು ಮತ್ತೆ ಮತ್ತೆ ನೆನೆದರೆ ಅದೇ ಪುಣ್ಯ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...