Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು.

- Advertisement -
- Advertisement -

ತೆಂಗಿನ ಮರವನ್ನು ಇನ್ನಿತರ ಮರಗಳಿಂದ ಬೇರ್ಪಡಿಸಿ ನೋಡುವಂತೆ ಮಾಡಿರುವುದೇ ಈ ಮರಕ್ಕಿರುವ ರೆಕ್ಕೆಯಂತಾ ಗರಿಗಳು. ಜನರು ಇದನ್ನು ಸರಿಯಾಗಿಯೇ ಗುರ್ತಿಸಿ ತೆಂಗಿನ ಎಲೆ ಎನ್ನದೆ ತೆಂಗಿನ ಗರಿ ಎಂದು ಕರೆದಿರುವುದು. ಗಾಳಿ ಬೀಸುವಾಗ ನೋಡಿದರೆ ಇವು ಎಲ್ಲಿಗೋ ಹಾರಿ ಹೋಗಲು ಸಿದ್ಧವಾಗುತ್ತಿವೆಯೇನೋ ಅನಿಸುತ್ತದೆ. ರೆಂಬೆ ಕೊಂಬೆ ಇಲ್ಲದ ಈ ಮರಕ್ಕೆ ಈ ಗರಿಗಳೇ ರೆಂಬೆಗಳು ಕೊಂಬೆಗಳು.

ಈಗ್ಗೆ ನಲವತ್ತು ಐವತ್ತು ವರ್ಷಗಳ ಹಿಂದೆ ತೆಂಗು ವಿರಳವಾಗಿದ್ದಾಗಲೂ ಅವುಗಳ ಗರಿಗಳನ್ನು ಮದುವೆ ಚಪ್ಪರಗಳ ರಚನೆಗೆ ಬಳಸುತ್ತಿದ್ದರು. ಅಡಕೆ ಮರ ಅಡಕೆ ದಬ್ಬೆಗಳನ್ನು ಬಳಸಿ ರೂಪಿಸುತ್ತಿದ್ದ ಚಪ್ಪರಕ್ಕೆ ಈ ಕಲಾಕೃತಿಯಂತಾ ಗರಿಗಳನ್ನು ಹೊದಿಸುತ್ತಿದ್ದರು. ಈ ಬಗೆಯ ಚಪ್ಪರವನ್ನು ನೋಡಲೆಂದೆ ಜನ ನಮ್ಮೂರಿನ ಮದುವೆಗಳಿಗೆ ಬರುತ್ತಿದ್ದರು. ನಮ್ಮೂರಿನ ಸಿದ್ದಕ್ಕನವರ ರಾಮಣ್ಣನವರು ಈ ಚಪ್ಪರ ಹಾಕಿಸುವ ಇಂಜಿನಿಯರ್‌ ಆಗಿದ್ದರು. ಒಂದಿಂಚೂ ಆಚೀಚೆ ಆಗದಂತೆ ಗಣಿತ ಶಾಸ್ತ್ರ ಪಂಡಿತರಂತೆ ಮುಂದೆ ನಿಂತು ಚಪ್ಪರ ಹಾಕಿಸುತ್ತಿದ್ದರು. ಇವರಿಗೆ ಸಾತ್‌ ನೀಡುತ್ತಿದ್ದ ನಮ್ಮ ಪೀಳಿಗೆಯ ಜನ ಅವರನ್ನು ಬಹುವಾಗಿ ನೆನಪಿಸಿಕೊಳ್ಳುತ್ತಾರೆ.

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು. ನಮ್ಮ ಅಟ್ಟದ ಮೇಲೆ ಹುಡುಕಿದರೆ ಸಿದ್ದಪ್ಪ ಹೆಣೆದ ಸಿಂಬೆಗಳು ಅನಾಥ ಸ್ಥಿತಿಯಲ್ಲಿ ಸಿಕ್ಕಾವು. ಇಂಥಾ ಸಿದ್ದಪ್ಪ ಹೆಣೆದುಕೊಡುತ್ತಿದ್ದ ಹರಟೆ ಚಾಪೆಗಳ ಮೇಲೆ ಕೂರಿಸಿಕೊಂಡು ರಾತ್ರಿ ಆಕಾಶದ ಅಡಿಯಲ್ಲಿ ನಮ್ಮಜ್ಜಿ ಹೇಳುತ್ತಿದ್ದ ಕತೆಗಳ ಮಾಯಕ್ಕೆ ಏನು ಸಮ.

ಆಯ್ಕೆ ಮಾಡಿದ ಒಣ ತೆಂಗಿನ ಗರಿಗಳಿಂದ ಚಾಪೆ ಹೆಣೆದು ಕೃಷಿ ಉತ್ಪನ್ನಗಳನ್ನು ಒಣಗಲು ಹಾಕಲು ಬಳಸುತ್ತಿದ್ದರು. ಟಾರ್ಪಾಲು, ಪ್ಲಾಸ್ಟಿಕ್ ಶೀಟ್‌ ಗಳ ಬಳಕೆ ಇರಲೇ ಇಲ್ಲ. ಇಂಥ ಚಾಪೆಗಳನ್ನು ಹೆಣೆಯುವುದರಲ್ಲಿ ನಮ್ಮವ್ವನ್ನನ್ನು ಮೀರಿಸುವವರು ಇರಲಿಲ್ಲವೆಂದು ಆಗ ನಮ್ಮವ್ವನ ಸಹಚರರು ಹೇಳುತ್ತಿದ್ದುದನ್ನು ಕೇಳಿಸಿಕೊಂಡಿದ್ದೆ. ನಮ್ಮವ್ವನ ಈ ಚಾಪೆಗಳ ಹಣಿ ಅಗಲವಾಗಿಯೂ ದೃಢವಾಗಿಯೂ ಇರುತ್ತಿದ್ದವು. ಮಾತು ಮಾತಾಡುತ್ತಲೇ ಚಾಪೆಯ ಹಣಿಯ ಸಿಂಬೆಗಳು ಸುತ್ತಿಕೊಂಡು ದೊಡ್ಡವಾಗುತ್ತಿದ್ದವು. ಈ ಹಣಿಗಳನ್ನು ಸೇರಿಸಿ ಒಟ್ಟಿಗೆ ಚಾಪೆ ಹೊಲಿಯುವುದು ಒಂದು ಕಲೆ. ಈಚಲು ಗರಿಗಳಿಂದ ಚಾಪೆ ಹೆಣಿಯುತ್ತಿದ್ದರು, ನಿಜ ಹೇಳಬೇಕೆಂದರೆ ಇವು ತೆಂಗಿನ ಚಾಪೆಗಳಿಗಿಂತಲೂ ಬಾಳಿಕೆ ಬರುತ್ತಿದ್ದವು. ಇವೆಲ್ಲ ಈಗ ಗ್ರಾಮೀಣ ಚರಿತ್ರೆಯ ಹಳಹಳಿಕೆಗಳಾಗಿ ಮಾತ್ರ ಉಳಿದಿವೆ.

ಈಗ ಈ ಗರಿಗಳನ್ನು ನಾವೀಗ ಮಲ್ಚಿಂಗ್‌ ಮುಚ್ಚಿಕೆಯಾಗಿ ಬಳಸುತ್ತಿದ್ದೇವೆ. ಸ್ವಾಗೆ ಗರಿಗಳಲ್ಲಿರುವ ಕಡ್ಡಿಗೆ ಈಗ ಉತ್ತಮ ಬೆಲೆ ಬಂದಿದೆ, ಉತ್ತರ ಭಾರತದ ಕಸ ಗುಡಿಸುತ್ತಿರುವುದು ಈ ನಮ್ಮ ಭಾಗದ ಸ್ವಾಗೆ ಕಡ್ಡಿ ಪೊರಕೆಗಳೇ. ಆಮ್‌ ಆದ್ಮಿ ಪಕ್ಷದ ಸಿಂಬಲ್ ಮಟ್ಟಕೆ ಅದು ಬೆಳೆದು ನಿಂತಿರುವುದು ಯಾರಿಗೆ ತಾನೆ ಗೊತ್ತಿಲ್ಲ.

ಈ ತೆಂಗಿನ ಗರಿಗಳನ್ನು ಸುಟ್ಟು ಭಸ್ಮ ಮಾಡುತ್ತಿದ್ದ ರೈತರೀಗ ಅದರ ಲಾಭ ಕಂಡುಕೊಂಡಿದ್ದಾರೆ. ನೆಲದ ಪಸೆ ಆರದಂತೆ ಅವುಗಳನ್ನು ಹರಡಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಈ ಗರಿಗಳನ್ನು ಸಣ್ಣಗೆ ಸವರಿ ಹರಡುತ್ತಿದ್ದಾರೆ, ಏನಾದರೂ ಆಗಲಿ ಸುಡದಿದ್ದರೆ ಸಾಕು. ಸುಟ್ಟರೆ ಸುಡುಗಾಡು ಎಂಬುದನ್ನು ಮತ್ತೆ ಮತ್ತೆ ನೆನೆದರೆ ಅದೇ ಪುಣ್ಯ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...