Homeಕರ್ನಾಟಕಕಾಸರಗೋಡಿನ ಗ್ರಾಮಗಳ ಕನ್ನಡದ ಹೆಸರು ಬದಲಿಸದಂತೆ ಕೇರಳ ಸಿಎಂಗೆ ಪತ್ರ ಬರೆಯುವೆ: ಬಿಎಸ್‌ವೈ

ಕಾಸರಗೋಡಿನ ಗ್ರಾಮಗಳ ಕನ್ನಡದ ಹೆಸರು ಬದಲಿಸದಂತೆ ಕೇರಳ ಸಿಎಂಗೆ ಪತ್ರ ಬರೆಯುವೆ: ಬಿಎಸ್‌ವೈ

- Advertisement -
- Advertisement -

ಕರ್ನಾಟಕದ ಗಡಿಯಲ್ಲಿರುವ ಕೇರಳದ ಕಾಸರಗೋಡಿನಲ್ಲಿ ಸಾಕಷ್ಟು ಊರುಗಳ ಹೆಸರು ಕನ್ನಡದಲ್ಲಿಯೇ ಇದೆ. ಕನ್ನಡಿಗರು ಮತ್ತು ಮಲಯಾಳಿಗಳು ಕಾಸರಗೋಡಿನಲ್ಲಿ ಸೌಹಾರ್ದತೆಯ ಸಹಬಾಳ್ವೆ ನಡೆಸುತ್ತಿದ್ದಾರೆ. ಈ ನಡುವೆ ಕೇರಳ ಸರ್ಕಾರ ಕಾಸರಗೋಡು ಜಿಲ್ಲೆಯ ಕೆಲವು ಊರುಗಳ ಹೆಸರು ಬದಲಾಯಿಸಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾಸರಗೋಡು ಭಾಗದ ಕನ್ನಡಿಗರು ಈ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂದು ಈ ಕುರಿತು ಪತ್ರಿಕಾ ಹೆಳಿಕೆ ನೀಡಿದ್ದು, “ಕೇರಳ ರಾಜ್ಯದ ವ್ಯಾಪ್ತಿಯಲ್ಲಿರುವ ಕಾಸರಗೋಡು ಜಿಲ್ಲೆಯ ಅನೇಕ ಗ್ರಾಮಗಳಿಗೆ ಕನ್ನಡದ ಹೆಸರು ಇದೆ. ಕನ್ನಡದ ಹೆಸರುಗಳನ್ನು ಬದಲಾಯಿಸಿ ಮಲಯಾಳಂ ಹೆಸರಿಡಲು ಮುಂದಾಗುವುದು ಸರಿಯಾದ ಕ್ರಮ ಅಲ್ಲ. ಕನ್ನಡಿಗರು ಮತ್ತು ಮಲಯಾಳಿಗಳು ಕಾಸರಗೋಡಿನಲ್ಲಿ ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಕಾಸರಗೋಡು, ಮಂಜೇಶ್ವರ ಭಾಗದ ಊರುಗಳ ಹೆಸರನ್ನು ಬದಲಾಯಿಸದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆಯಲಾಗುವುದು” ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ತಿಳಿಸಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡ ಗ್ರಾಮಗಳ ಹೆಸರನ್ನು ತೆಗೆದು ಮಲಯಾಳಂ ಹೆಸರಿಡುವ ಪ್ರಕ್ರಿಯೆಯನ್ನು ತಡೆಯಲೆಂದು ಪಿಣರಾಯಿ ವಿಜಯನ್‌ರವರಿಗೆ ಪತ್ರ ಬರೆದಿದ್ದೇನೆ. ಪಿಣರಾಯಿ ವಿಜಯನ್ ಅವರು ಕನ್ನಡಿಗರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸ ನನಗಿದೆ. ಕರ್ನಾಟಕ-ಕೇರಳ ನಡುವಿನ ಭಾಷಾ ಸಾಮರಸ್ಯ ಹೀಗೇ ಉಳಿಯಲಿ, ಬೆಳೆಯಲಿ ಎಂದು ಆಶಿಸುವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ (KBADA) ಅಧ್ಯಕ್ಷರಾಗಿರುವ ಡಾ. ಸಿ ಸೋಮಶೇಖರ ಅವರು ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕೇರಳದ ಕಾಸರಗೋಡು ಭಾಗದಲ್ಲಿ ಕನ್ನಡದ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಕೇರಳದ ಕಾಸರಗೋಡು, ಮಂಜೇಶ್ವರ ಪ್ರದೇಶದಲ್ಲಿ ಅನೇಕ ಗ್ರಾಮಗಳ ಕನ್ನಡ ಹೆಸರನ್ನು ಬದಲಾಯಿಸಿ ಮಲಯಾಳಂ ಹೆಸರಿಡುವ ಪ್ರಯತನ್ನ ನಡೆಯುತ್ತಿದೆ. ಈ ವಿಷಯ ಕೇರಳ ಸರ್ಕಾರದ ಗಮನಕ್ಕೆ ಬಂದಿರದೇ ಇರಬಹುದು. ಸ್ಥಳೀಯ ಆಡಳಿತಗಳ ವ್ಯಾಪ್ತಿಯಲ್ಲಿ ಈ ಪ್ರಯತ್ನಗಳು ನಡೆದಿರುವ ಸಾಧ್ಯತೆ ಇದೆ ಎಂದು ಸಿ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ : ಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...