Homeಮುಖಪುಟ'ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ': ಕಂಗನಾ ರನೌತ್ 'ಎಮರ್ಜೆನ್ಸಿ' ವಿರುದ್ಧ ಕಾನೂನು ಕ್ರಮಕ್ಕೆ...

‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

- Advertisement -
- Advertisement -

‘ಐತಿಹಾಸಿಕ ವಿಷಯಗಳನ್ನು ತಪ್ಪಾಗಿ ಪ್ರಸ್ತುತಪಡಿಸಲಾಗಿದೆ’ ಎಂದು ಆರೋಪಿಸಿ, ಬಿಜೆಪಿ ಸಂಸದೆ ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಲು ಲೇಖಕಿ ಕೂಮಿ ಕಪೂರ್ ನಿರ್ಧರಿಸಿದ್ದಾರೆ.

ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರನ್ನು ಇಂದಿರಾ ಗಾಂಧಿಯವರೊಂದಿಗೆ ರಹಸ್ಯವಾಗಿ ಒಪ್ಪಂದ ಮಾಡಿಕೊಂಡು ಕೆಲಸ ಮಾಡುತ್ತಿರುವಂತೆ ಚಿತ್ರಿಸಿದ್ದಕ್ಕಾಗಿ ಈ ಹಿಂದೆ ಎಮರ್ಜೆನ್ಸಿ ಚಿತ್ರ ಸಿಖ್ ಗುಂಪುಗಳಿಂದ ವಿರೋಧವನ್ನು ಎದುರಿಸಿತ್ತು.

ಚಿತ್ರದ ಡಿಸ್ಕ್ಲೈಮರ್‌ನಲ್ಲಿ, ಇದು ಕೂಮಿ ಕಪೂರ್ ಅವರ ‘ದಿ ಎಮರ್ಜೆನ್ಸಿ’ ಮತ್ತು ‘ಜಯಂತ್ ವಸಂತ್ ಸಿನ್ಹಾ ಅವರ ‘ಪ್ರಿಯದರ್ಶಿನಿ’ ಕೃತಿಗಳನ್ನು ಆಧರಿಸಿದೆ ಎಂದು ಹೇಳಲಾಗಿದೆ. ಆದರೆ, ಇದಕ್ಕೆ ಕಪೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಎರಡು ಲೀಗಲ್ ನೋಟಿಸ್‌ಗಳ ನಂತರವೂ, ಚಿತ್ರದ ಡಿಸ್ಕ್ಲೈಮರ್‌ ಬದಲಾಗಿಲ್ಲ” ಎಂದು ಕೂಮಿ ಕಪೂರ್ ಹೇಳಿದ್ದಾಗಿ ದಿ ಟೆಲಿಗ್ರಾಫ್‌ಗೆ ವರದಿ ಮಾಡಿದೆ.

“ಅವರು ಇಂದಿರಾ ಗಾಂಧಿಯವರ ಬಗ್ಗೆ ಸಿನಿಮಾ ಮಾಡುತ್ತಿರುವುದಾಗಿ ನನಗೆ ಹೇಳಿದರು. ನಾನು ಅವರಿಗೆ ಅನುಮತಿ ಕೊಟ್ಟೆ. ಅದು ನನ್ನ ಮೂರ್ಖತನ, ಏಕೆಂದರೆ ಅವರು ನಾವು ಒಂದೇ ಅಧ್ಯಾಯವನ್ನು ಬಳಸುತ್ತಿರುವುದಾಗಿ ಹೇಳಿದ್ದರು. ಆದರೆ, ಎಲ್ಲಾ ಅಧ್ಯಾಯಗಳನ್ನು ಬಳಸಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಜೀವನವು ಪಬ್ಲಿಕ್ ಡೊಮೈನ್‌ನಲ್ಲಿದೆ. ಹಾಗಾಗಿ, ನನ್ನ ಪುಸ್ತಕವನ್ನು ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ” ಎಂದು ಕೂಮಿ ಕಪೂರ್ ಹೇಳಿದ್ದಾರೆ.

ಏಪ್ರಿಲ್ 3ರಂದು ಕಂಗನಾ ರನೌತ್ ಅವರ ‘ಮಣಿಕರ್ಣಿಕಾ ಫಿಲ್ಮ್ಸ್’ ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ‘ನೆಟ್‌ಫ್ಲಿಕ್ಸ್‌’ಗೆ ನೋಟಿಸ್‌ ನೀಡಿರುವ ಕಪೂರ್ ಪರ ವಕೀಲರು, “ನೀವು ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರಿತವಾಗಿ ಚಿತ್ರದಲ್ಲಿ ಸತ್ಯಗಳನ್ನು ತಿರುಚಿದ್ದೀರಿ. ನಮ್ಮ ಕಕ್ಷಿದಾರರ ಹಕ್ಕುಗಳು ಮತ್ತು ಒಪ್ಪಿಗೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದೀರಿ ಮತ್ತು ಸದರಿ ಚಿತ್ರದೊಂದಿಗೆ ಅವರ ಹೆಸರನ್ನು ಕಾನೂನುಬಾಹಿರವಾಗಿ ಬಳಸಿಕೊಂಡಿದ್ದೀರಿ” ಎಂದಿದ್ದಾರೆ.

ಕಪೂರ್ ಪರ ವಕೀಲರು ಎಮರ್ಜೆನ್ಸಿ ಚಿತ್ರದಲ್ಲಿ ವಿಷಯಗಳನ್ನು ತಿರುಚಲಾಗಿದೆ ಎಂಬುವುದಕ್ಕೆ 6 ಉದಾಹಣೆಗಳನ್ನು ಕೊಟ್ಟಿದ್ದಾರೆ. ಅವುಗಳಲ್ಲಿ, “ಇಂದಿರಾ ಗಾಂಧಿಯವರು ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರ ಬಳಿಗೆ ವೈಯಕ್ತಿಕವಾಗಿ ಹೋಗಿ ಸಂಪುಟ ಸಭೆ ಕರೆಯದೆ ತುರ್ತು ಪರಿಸ್ಥಿತಿ ಘೋಷಿಸುವಂತೆ ಬೆದರಿಕೆ ಹಾಕಿದ್ದಾರೆ ಎಂಬುದು ಮತ್ತು ಪತ್ರಕರ್ತ ನಿಖಿಲ್ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ನಿರ್ವಹಣೆ ಕಾಯ್ದೆ [ಮಿಸಾ] ಅಡಿಯಲ್ಲಿ ಬಂಧಿಸಲಾಗಿದೆ ಎಂಬುದು ಒಳಗೊಂಡಿವೆ.

ಕಪೂರ್ ಪರ ವಕೀಲರು ನೀಡಿರುವ ಮಾನನಷ್ಟ ಮೊಕದ್ದಮೆ ನೋಟಿಸ್‌ನಲ್ಲಿ, “ಕಿಶೋರ್ ಕುಮಾರ್ ಅವರ ಹಾಡುಗಳನ್ನು ಆಲ್ ಇಂಡಿಯಾ ರೇಡಿಯೋ ನಿಷೇಧಿಸಿದಾಗ ಅವರು ಭಾರತದಲ್ಲಿ ಇರಲಿಲ್ಲ ಎಂದು ಆಕ್ರೋಶಗೊಂಡ ಅಕ್ಬರ್ ಅಹ್ಮದ್ (ಡಂಪಿ) ನಮ್ಮ ಕಕ್ಷಿದಾರರಿಗೆ ದೂರವಾಣಿ ಕರೆ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ನಮ್ಮ ಕಕ್ಷಿದಾರರು ಅವರನ್ನು ಸಮಾಧಾನಪಡಿಸಿ ತಮ್ಮ ಪುಸ್ತಕದಲ್ಲಿ ಆಲ್ ಇಂಡಿಯಾ ರೇಡಿಯೋದಲ್ಲಿ ಕಿಶೋರ್ ಕುಮಾರ್ ಅವರ ಹಾಡುಗಳನ್ನು ನಿಷೇಧಿಸಲು ಅಂದಿನ ಮಾಹಿತಿ ಮತ್ತು ಪ್ರಸಾರ ಸಚಿವ ವಿ ಸಿ ಶುಕ್ಲಾ ಕಾರಣ, ಅಕ್ಬರ್ ಅಹ್ಮದ್ (ಡಂಪಿ) ಅಲ್ಲ” ಎಂದು ಎಂದು ವಿವರಿಸಬೇಕಾಯಿತು” ಎಂದು ಹೇಳಲಾಗಿದೆ.

ಕಪೂರ್ ಅವರ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ ನಡುವಿನ 2021ರ ಒಪ್ಪಂದವು ಸತ್ಯಗಳನ್ನು ತಿರುಚಲು ಅವಕಾಶ ನೀಡುವುದಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪ್ರಸ್ತಾವಿತ ಚಿತ್ರದ ಸ್ಕ್ರಿಪ್ಟ್ ಅನ್ನು ನಮ್ಮ ಕಕ್ಷಿದಾರರಿಗೆ ತೋರಿಸಲು ನಿಮ್ಮನ್ನು ವಿನಂತಿಸಲಾಗಿತ್ತು. ನಮ್ಮ ಕಕ್ಷಿದಾರ ಫಾಲೋ-ಅಪ್ ಸಂದೇಶಗಳ ಹೊರತಾಗಿಯೂ, ನೀವು ಅದನ್ನು ಮಾಡಿಲ್ಲ ಎಂದು ಕಪೂರ್ ಪರ ವಕೀಲರು ಹೇಳಿದ್ದಾರೆ.

ಇದಲ್ಲದೆ, ಸದರಿ ಒಪ್ಪಂದದಲ್ಲಿ ನಮ್ಮ ಕಕ್ಷಿದಾರ ಹೆಸರು, ಭಾವಚಿತ್ರ, ಜೀವನಚರಿತ್ರೆ ಮತ್ತು ಗುರುತನ್ನು ಜಾಹೀರಾತು ಮತ್ತು ಪ್ರಚಾರದ ಉದ್ದೇಶಗಳಿಗಾಗಿ ಬಳಸುವುದು ಕಟ್ಟುನಿಟ್ಟಾಗಿ ‘ಲೇಖಕರ ಲಿಖಿತ ಅನುಮೋದನೆಗೆ ಒಳಪಟ್ಟಿರುತ್ತದೆ’ ಎಂದು ನಿರ್ದಿಷ್ಟವಾಗಿ ಹೇಳಲಾಗಿದೆ. ನೀವು ಅಂತಹ ಯಾವುದೇ ಅನುಮೋದನೆಯನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಲಾಗಿದೆ.

ಏಪ್ರಿಲ್ 10 ರಂದು, ಮಣಿಕರ್ಣಿಕಾ ಫಿಲ್ಮ್ಸ್ ಕಪೂರ್ ಅವರ 2015ರ ಪುಸ್ತಕವು ಚಿತ್ರಕ್ಕೆ ಏಕೈಕ ಆಧಾರವಲ್ಲ. ಹಾಗಾಗಿ, ಸ್ಕ್ರಿಪ್ಟ್ ಅನ್ನು ಅವರಿಂದ ಅನುಮೋದಿಸುವ ಯಾವುದೇ ಅಗತ್ಯತೆ ಕಂಪನಿಗೆ ಇಲ್ಲ ಎಂದು ಹೇಳುವ ಮೂಲಕ ಆರೋಪಗಳನ್ನು ತಿರಸ್ಕರಿತ್ತು.

ವಿಷಯ ಕಥೆ ಮತ್ತು ಚಿತ್ರಕಥೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಲು ಸೃಜನಶೀಲ ಸ್ವಾತಂತ್ರ್ಯಗಳನ್ನು ಚಲಾಯಿಸಲಾಗುವುದು ಎಂದು ಪಕ್ಷಗಳ ಒಪ್ಪಂದದಲ್ಲಿ ಸ್ಪಷ್ಟವಾಗಿ ಒಪ್ಪಿಕೊಳ್ಳಲಾಗಿದೆ ಮತ್ತು ಈ ಉದ್ದೇಶಕ್ಕಾಗಿ ಕಪೂರ್ ಅವರು ಪುಸ್ತಕದ ಮೇಲಿನ ‘ಸಂಪೂರ್ಣ ಬೌದ್ಧಿಕ ಆಸ್ತಿ ಹಕ್ಕುಗಳನ್ನು’ ನಿರ್ಮಾಪಕರಿಗೆ ನೀಡಿದ್ದಾರೆ ಎಂದು ಆರೋಪಗಳ ಕುರಿತು ಮಣಿಕರ್ಣಿಕಾ ಫಿಲ್ಮ್ಸ್‌ ಹೇಳಿದೆ.

ಕಂಪನಿಯ ನಿರ್ದೇಶಕಿಯಾಗಿರುವ ರನೌತ್, ನಮ್ಮ ಇಮೇಲ್ ಮತ್ತು ವಾಟ್ಸಾಪ್ ಸಂದೇಶಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಸೆನ್ಸಾರ್ ಮಂಡಳಿಯು ತನ್ನ ಚಿತ್ರದ ಪ್ರಮಾಣೀಕರಣವನ್ನು ಸ್ಥಗಿತಗೊಳಿಸುವ ಮೂಲಕ “ತುರ್ತು ಪರಿಸ್ಥಿತಿ” ಹೇರಿದೆ ಎಂದು ಕಳೆದ ವರ್ಷ ಕಂಗನಾ ರನೌತ್ ಅವರು ಆರೋಪಿಸಿದ್ದರು.

ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನಿಂದ ಚಿತ್ರಕ್ಕೆ ‘ಪರವಾನಗಿ’ ನೀಡಲಾಗಿದ್ದು, ಹಾಗಾಗಿ, ಕಪೂರ್ ಅವರು ನಮ್ಮ ಬದಲು ಅವರನ್ನೇ ಸಂಪರ್ಕಿಸಬೇಕು ಎಂದು ಏಪ್ರಿಲ್ 8 ರಂದು ನೆಟ್‌ಫ್ಲಿಕ್ಸ್ ಕೈ ತೊಳೆದುಕೊಂಡಿದೆ.

ಕಪೂರ್ ಅವರ ಕಾನೂನು ತಂಡವು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವುದಾಗಿ ತಿಳಿಸಿದೆ.

ಜನವರಿಯಲ್ಲಿ ಚಿತ್ರ ಮಂದಿರಗಳಲ್ಲಿ ಎಮರ್ಜೆನ್ಸಿ ಚಿತ್ರ ಬಿಡುಗಡೆಯಾದಾಗ ಕಪೂರ್ ಅವರು ನೋಡಿರಲಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಿದ ನಂತರವೇ ಅವರು ನೋಡಿದ್ದಾರೆ. ಅದರಲ್ಲಿನ ತಪ್ಪು ಉಲ್ಲೇಖಗಳು ಕಂಡು ಅವರಿಗೆ ದಿಗಿಲು ಉಂಟಾಗಿದೆ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಯೇಸುಕ್ರಿಸ್ತಗೆ ಅಗೌರವ ಆರೋಪ: ‘ಜಾಟ್’ ಚಿತ್ರತಂಡದ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...