Homeಮುಖಪುಟ'ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ': ಕಂಗನಾ ರನೌತ್ 'ಎಮರ್ಜೆನ್ಸಿ' ವಿರುದ್ಧ ಕಾನೂನು ಕ್ರಮಕ್ಕೆ...

‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

- Advertisement -
- Advertisement -

‘ಐತಿಹಾಸಿಕ ವಿಷಯಗಳನ್ನು ತಪ್ಪಾಗಿ ಪ್ರಸ್ತುತಪಡಿಸಲಾಗಿದೆ’ ಎಂದು ಆರೋಪಿಸಿ, ಬಿಜೆಪಿ ಸಂಸದೆ ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಲು ಲೇಖಕಿ ಕೂಮಿ ಕಪೂರ್ ನಿರ್ಧರಿಸಿದ್ದಾರೆ.

ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರನ್ನು ಇಂದಿರಾ ಗಾಂಧಿಯವರೊಂದಿಗೆ ರಹಸ್ಯವಾಗಿ ಒಪ್ಪಂದ ಮಾಡಿಕೊಂಡು ಕೆಲಸ ಮಾಡುತ್ತಿರುವಂತೆ ಚಿತ್ರಿಸಿದ್ದಕ್ಕಾಗಿ ಈ ಹಿಂದೆ ಎಮರ್ಜೆನ್ಸಿ ಚಿತ್ರ ಸಿಖ್ ಗುಂಪುಗಳಿಂದ ವಿರೋಧವನ್ನು ಎದುರಿಸಿತ್ತು.

ಚಿತ್ರದ ಡಿಸ್ಕ್ಲೈಮರ್‌ನಲ್ಲಿ, ಇದು ಕೂಮಿ ಕಪೂರ್ ಅವರ ‘ದಿ ಎಮರ್ಜೆನ್ಸಿ’ ಮತ್ತು ‘ಜಯಂತ್ ವಸಂತ್ ಸಿನ್ಹಾ ಅವರ ‘ಪ್ರಿಯದರ್ಶಿನಿ’ ಕೃತಿಗಳನ್ನು ಆಧರಿಸಿದೆ ಎಂದು ಹೇಳಲಾಗಿದೆ. ಆದರೆ, ಇದಕ್ಕೆ ಕಪೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಎರಡು ಲೀಗಲ್ ನೋಟಿಸ್‌ಗಳ ನಂತರವೂ, ಚಿತ್ರದ ಡಿಸ್ಕ್ಲೈಮರ್‌ ಬದಲಾಗಿಲ್ಲ” ಎಂದು ಕೂಮಿ ಕಪೂರ್ ಹೇಳಿದ್ದಾಗಿ ದಿ ಟೆಲಿಗ್ರಾಫ್‌ಗೆ ವರದಿ ಮಾಡಿದೆ.

“ಅವರು ಇಂದಿರಾ ಗಾಂಧಿಯವರ ಬಗ್ಗೆ ಸಿನಿಮಾ ಮಾಡುತ್ತಿರುವುದಾಗಿ ನನಗೆ ಹೇಳಿದರು. ನಾನು ಅವರಿಗೆ ಅನುಮತಿ ಕೊಟ್ಟೆ. ಅದು ನನ್ನ ಮೂರ್ಖತನ, ಏಕೆಂದರೆ ಅವರು ನಾವು ಒಂದೇ ಅಧ್ಯಾಯವನ್ನು ಬಳಸುತ್ತಿರುವುದಾಗಿ ಹೇಳಿದ್ದರು. ಆದರೆ, ಎಲ್ಲಾ ಅಧ್ಯಾಯಗಳನ್ನು ಬಳಸಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಜೀವನವು ಪಬ್ಲಿಕ್ ಡೊಮೈನ್‌ನಲ್ಲಿದೆ. ಹಾಗಾಗಿ, ನನ್ನ ಪುಸ್ತಕವನ್ನು ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ” ಎಂದು ಕೂಮಿ ಕಪೂರ್ ಹೇಳಿದ್ದಾರೆ.

ಏಪ್ರಿಲ್ 3ರಂದು ಕಂಗನಾ ರನೌತ್ ಅವರ ‘ಮಣಿಕರ್ಣಿಕಾ ಫಿಲ್ಮ್ಸ್’ ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ‘ನೆಟ್‌ಫ್ಲಿಕ್ಸ್‌’ಗೆ ನೋಟಿಸ್‌ ನೀಡಿರುವ ಕಪೂರ್ ಪರ ವಕೀಲರು, “ನೀವು ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರಿತವಾಗಿ ಚಿತ್ರದಲ್ಲಿ ಸತ್ಯಗಳನ್ನು ತಿರುಚಿದ್ದೀರಿ. ನಮ್ಮ ಕಕ್ಷಿದಾರರ ಹಕ್ಕುಗಳು ಮತ್ತು ಒಪ್ಪಿಗೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದೀರಿ ಮತ್ತು ಸದರಿ ಚಿತ್ರದೊಂದಿಗೆ ಅವರ ಹೆಸರನ್ನು ಕಾನೂನುಬಾಹಿರವಾಗಿ ಬಳಸಿಕೊಂಡಿದ್ದೀರಿ” ಎಂದಿದ್ದಾರೆ.

ಕಪೂರ್ ಪರ ವಕೀಲರು ಎಮರ್ಜೆನ್ಸಿ ಚಿತ್ರದಲ್ಲಿ ವಿಷಯಗಳನ್ನು ತಿರುಚಲಾಗಿದೆ ಎಂಬುವುದಕ್ಕೆ 6 ಉದಾಹಣೆಗಳನ್ನು ಕೊಟ್ಟಿದ್ದಾರೆ. ಅವುಗಳಲ್ಲಿ, “ಇಂದಿರಾ ಗಾಂಧಿಯವರು ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರ ಬಳಿಗೆ ವೈಯಕ್ತಿಕವಾಗಿ ಹೋಗಿ ಸಂಪುಟ ಸಭೆ ಕರೆಯದೆ ತುರ್ತು ಪರಿಸ್ಥಿತಿ ಘೋಷಿಸುವಂತೆ ಬೆದರಿಕೆ ಹಾಕಿದ್ದಾರೆ ಎಂಬುದು ಮತ್ತು ಪತ್ರಕರ್ತ ನಿಖಿಲ್ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ನಿರ್ವಹಣೆ ಕಾಯ್ದೆ [ಮಿಸಾ] ಅಡಿಯಲ್ಲಿ ಬಂಧಿಸಲಾಗಿದೆ ಎಂಬುದು ಒಳಗೊಂಡಿವೆ.

ಕಪೂರ್ ಪರ ವಕೀಲರು ನೀಡಿರುವ ಮಾನನಷ್ಟ ಮೊಕದ್ದಮೆ ನೋಟಿಸ್‌ನಲ್ಲಿ, “ಕಿಶೋರ್ ಕುಮಾರ್ ಅವರ ಹಾಡುಗಳನ್ನು ಆಲ್ ಇಂಡಿಯಾ ರೇಡಿಯೋ ನಿಷೇಧಿಸಿದಾಗ ಅವರು ಭಾರತದಲ್ಲಿ ಇರಲಿಲ್ಲ ಎಂದು ಆಕ್ರೋಶಗೊಂಡ ಅಕ್ಬರ್ ಅಹ್ಮದ್ (ಡಂಪಿ) ನಮ್ಮ ಕಕ್ಷಿದಾರರಿಗೆ ದೂರವಾಣಿ ಕರೆ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ನಮ್ಮ ಕಕ್ಷಿದಾರರು ಅವರನ್ನು ಸಮಾಧಾನಪಡಿಸಿ ತಮ್ಮ ಪುಸ್ತಕದಲ್ಲಿ ಆಲ್ ಇಂಡಿಯಾ ರೇಡಿಯೋದಲ್ಲಿ ಕಿಶೋರ್ ಕುಮಾರ್ ಅವರ ಹಾಡುಗಳನ್ನು ನಿಷೇಧಿಸಲು ಅಂದಿನ ಮಾಹಿತಿ ಮತ್ತು ಪ್ರಸಾರ ಸಚಿವ ವಿ ಸಿ ಶುಕ್ಲಾ ಕಾರಣ, ಅಕ್ಬರ್ ಅಹ್ಮದ್ (ಡಂಪಿ) ಅಲ್ಲ” ಎಂದು ಎಂದು ವಿವರಿಸಬೇಕಾಯಿತು” ಎಂದು ಹೇಳಲಾಗಿದೆ.

ಕಪೂರ್ ಅವರ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ ನಡುವಿನ 2021ರ ಒಪ್ಪಂದವು ಸತ್ಯಗಳನ್ನು ತಿರುಚಲು ಅವಕಾಶ ನೀಡುವುದಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪ್ರಸ್ತಾವಿತ ಚಿತ್ರದ ಸ್ಕ್ರಿಪ್ಟ್ ಅನ್ನು ನಮ್ಮ ಕಕ್ಷಿದಾರರಿಗೆ ತೋರಿಸಲು ನಿಮ್ಮನ್ನು ವಿನಂತಿಸಲಾಗಿತ್ತು. ನಮ್ಮ ಕಕ್ಷಿದಾರ ಫಾಲೋ-ಅಪ್ ಸಂದೇಶಗಳ ಹೊರತಾಗಿಯೂ, ನೀವು ಅದನ್ನು ಮಾಡಿಲ್ಲ ಎಂದು ಕಪೂರ್ ಪರ ವಕೀಲರು ಹೇಳಿದ್ದಾರೆ.

ಇದಲ್ಲದೆ, ಸದರಿ ಒಪ್ಪಂದದಲ್ಲಿ ನಮ್ಮ ಕಕ್ಷಿದಾರ ಹೆಸರು, ಭಾವಚಿತ್ರ, ಜೀವನಚರಿತ್ರೆ ಮತ್ತು ಗುರುತನ್ನು ಜಾಹೀರಾತು ಮತ್ತು ಪ್ರಚಾರದ ಉದ್ದೇಶಗಳಿಗಾಗಿ ಬಳಸುವುದು ಕಟ್ಟುನಿಟ್ಟಾಗಿ ‘ಲೇಖಕರ ಲಿಖಿತ ಅನುಮೋದನೆಗೆ ಒಳಪಟ್ಟಿರುತ್ತದೆ’ ಎಂದು ನಿರ್ದಿಷ್ಟವಾಗಿ ಹೇಳಲಾಗಿದೆ. ನೀವು ಅಂತಹ ಯಾವುದೇ ಅನುಮೋದನೆಯನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಲಾಗಿದೆ.

ಏಪ್ರಿಲ್ 10 ರಂದು, ಮಣಿಕರ್ಣಿಕಾ ಫಿಲ್ಮ್ಸ್ ಕಪೂರ್ ಅವರ 2015ರ ಪುಸ್ತಕವು ಚಿತ್ರಕ್ಕೆ ಏಕೈಕ ಆಧಾರವಲ್ಲ. ಹಾಗಾಗಿ, ಸ್ಕ್ರಿಪ್ಟ್ ಅನ್ನು ಅವರಿಂದ ಅನುಮೋದಿಸುವ ಯಾವುದೇ ಅಗತ್ಯತೆ ಕಂಪನಿಗೆ ಇಲ್ಲ ಎಂದು ಹೇಳುವ ಮೂಲಕ ಆರೋಪಗಳನ್ನು ತಿರಸ್ಕರಿತ್ತು.

ವಿಷಯ ಕಥೆ ಮತ್ತು ಚಿತ್ರಕಥೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಲು ಸೃಜನಶೀಲ ಸ್ವಾತಂತ್ರ್ಯಗಳನ್ನು ಚಲಾಯಿಸಲಾಗುವುದು ಎಂದು ಪಕ್ಷಗಳ ಒಪ್ಪಂದದಲ್ಲಿ ಸ್ಪಷ್ಟವಾಗಿ ಒಪ್ಪಿಕೊಳ್ಳಲಾಗಿದೆ ಮತ್ತು ಈ ಉದ್ದೇಶಕ್ಕಾಗಿ ಕಪೂರ್ ಅವರು ಪುಸ್ತಕದ ಮೇಲಿನ ‘ಸಂಪೂರ್ಣ ಬೌದ್ಧಿಕ ಆಸ್ತಿ ಹಕ್ಕುಗಳನ್ನು’ ನಿರ್ಮಾಪಕರಿಗೆ ನೀಡಿದ್ದಾರೆ ಎಂದು ಆರೋಪಗಳ ಕುರಿತು ಮಣಿಕರ್ಣಿಕಾ ಫಿಲ್ಮ್ಸ್‌ ಹೇಳಿದೆ.

ಕಂಪನಿಯ ನಿರ್ದೇಶಕಿಯಾಗಿರುವ ರನೌತ್, ನಮ್ಮ ಇಮೇಲ್ ಮತ್ತು ವಾಟ್ಸಾಪ್ ಸಂದೇಶಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಸೆನ್ಸಾರ್ ಮಂಡಳಿಯು ತನ್ನ ಚಿತ್ರದ ಪ್ರಮಾಣೀಕರಣವನ್ನು ಸ್ಥಗಿತಗೊಳಿಸುವ ಮೂಲಕ “ತುರ್ತು ಪರಿಸ್ಥಿತಿ” ಹೇರಿದೆ ಎಂದು ಕಳೆದ ವರ್ಷ ಕಂಗನಾ ರನೌತ್ ಅವರು ಆರೋಪಿಸಿದ್ದರು.

ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನಿಂದ ಚಿತ್ರಕ್ಕೆ ‘ಪರವಾನಗಿ’ ನೀಡಲಾಗಿದ್ದು, ಹಾಗಾಗಿ, ಕಪೂರ್ ಅವರು ನಮ್ಮ ಬದಲು ಅವರನ್ನೇ ಸಂಪರ್ಕಿಸಬೇಕು ಎಂದು ಏಪ್ರಿಲ್ 8 ರಂದು ನೆಟ್‌ಫ್ಲಿಕ್ಸ್ ಕೈ ತೊಳೆದುಕೊಂಡಿದೆ.

ಕಪೂರ್ ಅವರ ಕಾನೂನು ತಂಡವು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವುದಾಗಿ ತಿಳಿಸಿದೆ.

ಜನವರಿಯಲ್ಲಿ ಚಿತ್ರ ಮಂದಿರಗಳಲ್ಲಿ ಎಮರ್ಜೆನ್ಸಿ ಚಿತ್ರ ಬಿಡುಗಡೆಯಾದಾಗ ಕಪೂರ್ ಅವರು ನೋಡಿರಲಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಿದ ನಂತರವೇ ಅವರು ನೋಡಿದ್ದಾರೆ. ಅದರಲ್ಲಿನ ತಪ್ಪು ಉಲ್ಲೇಖಗಳು ಕಂಡು ಅವರಿಗೆ ದಿಗಿಲು ಉಂಟಾಗಿದೆ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಯೇಸುಕ್ರಿಸ್ತಗೆ ಅಗೌರವ ಆರೋಪ: ‘ಜಾಟ್’ ಚಿತ್ರತಂಡದ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...