Homeಮುಖಪುಟ'ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ': ಕಂಗನಾ ರನೌತ್ 'ಎಮರ್ಜೆನ್ಸಿ' ವಿರುದ್ಧ ಕಾನೂನು ಕ್ರಮಕ್ಕೆ...

‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

- Advertisement -
- Advertisement -

‘ಐತಿಹಾಸಿಕ ವಿಷಯಗಳನ್ನು ತಪ್ಪಾಗಿ ಪ್ರಸ್ತುತಪಡಿಸಲಾಗಿದೆ’ ಎಂದು ಆರೋಪಿಸಿ, ಬಿಜೆಪಿ ಸಂಸದೆ ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಲು ಲೇಖಕಿ ಕೂಮಿ ಕಪೂರ್ ನಿರ್ಧರಿಸಿದ್ದಾರೆ.

ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರನ್ನು ಇಂದಿರಾ ಗಾಂಧಿಯವರೊಂದಿಗೆ ರಹಸ್ಯವಾಗಿ ಒಪ್ಪಂದ ಮಾಡಿಕೊಂಡು ಕೆಲಸ ಮಾಡುತ್ತಿರುವಂತೆ ಚಿತ್ರಿಸಿದ್ದಕ್ಕಾಗಿ ಈ ಹಿಂದೆ ಎಮರ್ಜೆನ್ಸಿ ಚಿತ್ರ ಸಿಖ್ ಗುಂಪುಗಳಿಂದ ವಿರೋಧವನ್ನು ಎದುರಿಸಿತ್ತು.

ಚಿತ್ರದ ಡಿಸ್ಕ್ಲೈಮರ್‌ನಲ್ಲಿ, ಇದು ಕೂಮಿ ಕಪೂರ್ ಅವರ ‘ದಿ ಎಮರ್ಜೆನ್ಸಿ’ ಮತ್ತು ‘ಜಯಂತ್ ವಸಂತ್ ಸಿನ್ಹಾ ಅವರ ‘ಪ್ರಿಯದರ್ಶಿನಿ’ ಕೃತಿಗಳನ್ನು ಆಧರಿಸಿದೆ ಎಂದು ಹೇಳಲಾಗಿದೆ. ಆದರೆ, ಇದಕ್ಕೆ ಕಪೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಎರಡು ಲೀಗಲ್ ನೋಟಿಸ್‌ಗಳ ನಂತರವೂ, ಚಿತ್ರದ ಡಿಸ್ಕ್ಲೈಮರ್‌ ಬದಲಾಗಿಲ್ಲ” ಎಂದು ಕೂಮಿ ಕಪೂರ್ ಹೇಳಿದ್ದಾಗಿ ದಿ ಟೆಲಿಗ್ರಾಫ್‌ಗೆ ವರದಿ ಮಾಡಿದೆ.

“ಅವರು ಇಂದಿರಾ ಗಾಂಧಿಯವರ ಬಗ್ಗೆ ಸಿನಿಮಾ ಮಾಡುತ್ತಿರುವುದಾಗಿ ನನಗೆ ಹೇಳಿದರು. ನಾನು ಅವರಿಗೆ ಅನುಮತಿ ಕೊಟ್ಟೆ. ಅದು ನನ್ನ ಮೂರ್ಖತನ, ಏಕೆಂದರೆ ಅವರು ನಾವು ಒಂದೇ ಅಧ್ಯಾಯವನ್ನು ಬಳಸುತ್ತಿರುವುದಾಗಿ ಹೇಳಿದ್ದರು. ಆದರೆ, ಎಲ್ಲಾ ಅಧ್ಯಾಯಗಳನ್ನು ಬಳಸಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಜೀವನವು ಪಬ್ಲಿಕ್ ಡೊಮೈನ್‌ನಲ್ಲಿದೆ. ಹಾಗಾಗಿ, ನನ್ನ ಪುಸ್ತಕವನ್ನು ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ” ಎಂದು ಕೂಮಿ ಕಪೂರ್ ಹೇಳಿದ್ದಾರೆ.

ಏಪ್ರಿಲ್ 3ರಂದು ಕಂಗನಾ ರನೌತ್ ಅವರ ‘ಮಣಿಕರ್ಣಿಕಾ ಫಿಲ್ಮ್ಸ್’ ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ‘ನೆಟ್‌ಫ್ಲಿಕ್ಸ್‌’ಗೆ ನೋಟಿಸ್‌ ನೀಡಿರುವ ಕಪೂರ್ ಪರ ವಕೀಲರು, “ನೀವು ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರಿತವಾಗಿ ಚಿತ್ರದಲ್ಲಿ ಸತ್ಯಗಳನ್ನು ತಿರುಚಿದ್ದೀರಿ. ನಮ್ಮ ಕಕ್ಷಿದಾರರ ಹಕ್ಕುಗಳು ಮತ್ತು ಒಪ್ಪಿಗೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದೀರಿ ಮತ್ತು ಸದರಿ ಚಿತ್ರದೊಂದಿಗೆ ಅವರ ಹೆಸರನ್ನು ಕಾನೂನುಬಾಹಿರವಾಗಿ ಬಳಸಿಕೊಂಡಿದ್ದೀರಿ” ಎಂದಿದ್ದಾರೆ.

ಕಪೂರ್ ಪರ ವಕೀಲರು ಎಮರ್ಜೆನ್ಸಿ ಚಿತ್ರದಲ್ಲಿ ವಿಷಯಗಳನ್ನು ತಿರುಚಲಾಗಿದೆ ಎಂಬುವುದಕ್ಕೆ 6 ಉದಾಹಣೆಗಳನ್ನು ಕೊಟ್ಟಿದ್ದಾರೆ. ಅವುಗಳಲ್ಲಿ, “ಇಂದಿರಾ ಗಾಂಧಿಯವರು ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರ ಬಳಿಗೆ ವೈಯಕ್ತಿಕವಾಗಿ ಹೋಗಿ ಸಂಪುಟ ಸಭೆ ಕರೆಯದೆ ತುರ್ತು ಪರಿಸ್ಥಿತಿ ಘೋಷಿಸುವಂತೆ ಬೆದರಿಕೆ ಹಾಕಿದ್ದಾರೆ ಎಂಬುದು ಮತ್ತು ಪತ್ರಕರ್ತ ನಿಖಿಲ್ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ನಿರ್ವಹಣೆ ಕಾಯ್ದೆ [ಮಿಸಾ] ಅಡಿಯಲ್ಲಿ ಬಂಧಿಸಲಾಗಿದೆ ಎಂಬುದು ಒಳಗೊಂಡಿವೆ.

ಕಪೂರ್ ಪರ ವಕೀಲರು ನೀಡಿರುವ ಮಾನನಷ್ಟ ಮೊಕದ್ದಮೆ ನೋಟಿಸ್‌ನಲ್ಲಿ, “ಕಿಶೋರ್ ಕುಮಾರ್ ಅವರ ಹಾಡುಗಳನ್ನು ಆಲ್ ಇಂಡಿಯಾ ರೇಡಿಯೋ ನಿಷೇಧಿಸಿದಾಗ ಅವರು ಭಾರತದಲ್ಲಿ ಇರಲಿಲ್ಲ ಎಂದು ಆಕ್ರೋಶಗೊಂಡ ಅಕ್ಬರ್ ಅಹ್ಮದ್ (ಡಂಪಿ) ನಮ್ಮ ಕಕ್ಷಿದಾರರಿಗೆ ದೂರವಾಣಿ ಕರೆ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ನಮ್ಮ ಕಕ್ಷಿದಾರರು ಅವರನ್ನು ಸಮಾಧಾನಪಡಿಸಿ ತಮ್ಮ ಪುಸ್ತಕದಲ್ಲಿ ಆಲ್ ಇಂಡಿಯಾ ರೇಡಿಯೋದಲ್ಲಿ ಕಿಶೋರ್ ಕುಮಾರ್ ಅವರ ಹಾಡುಗಳನ್ನು ನಿಷೇಧಿಸಲು ಅಂದಿನ ಮಾಹಿತಿ ಮತ್ತು ಪ್ರಸಾರ ಸಚಿವ ವಿ ಸಿ ಶುಕ್ಲಾ ಕಾರಣ, ಅಕ್ಬರ್ ಅಹ್ಮದ್ (ಡಂಪಿ) ಅಲ್ಲ” ಎಂದು ಎಂದು ವಿವರಿಸಬೇಕಾಯಿತು” ಎಂದು ಹೇಳಲಾಗಿದೆ.

ಕಪೂರ್ ಅವರ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ ನಡುವಿನ 2021ರ ಒಪ್ಪಂದವು ಸತ್ಯಗಳನ್ನು ತಿರುಚಲು ಅವಕಾಶ ನೀಡುವುದಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪ್ರಸ್ತಾವಿತ ಚಿತ್ರದ ಸ್ಕ್ರಿಪ್ಟ್ ಅನ್ನು ನಮ್ಮ ಕಕ್ಷಿದಾರರಿಗೆ ತೋರಿಸಲು ನಿಮ್ಮನ್ನು ವಿನಂತಿಸಲಾಗಿತ್ತು. ನಮ್ಮ ಕಕ್ಷಿದಾರ ಫಾಲೋ-ಅಪ್ ಸಂದೇಶಗಳ ಹೊರತಾಗಿಯೂ, ನೀವು ಅದನ್ನು ಮಾಡಿಲ್ಲ ಎಂದು ಕಪೂರ್ ಪರ ವಕೀಲರು ಹೇಳಿದ್ದಾರೆ.

ಇದಲ್ಲದೆ, ಸದರಿ ಒಪ್ಪಂದದಲ್ಲಿ ನಮ್ಮ ಕಕ್ಷಿದಾರ ಹೆಸರು, ಭಾವಚಿತ್ರ, ಜೀವನಚರಿತ್ರೆ ಮತ್ತು ಗುರುತನ್ನು ಜಾಹೀರಾತು ಮತ್ತು ಪ್ರಚಾರದ ಉದ್ದೇಶಗಳಿಗಾಗಿ ಬಳಸುವುದು ಕಟ್ಟುನಿಟ್ಟಾಗಿ ‘ಲೇಖಕರ ಲಿಖಿತ ಅನುಮೋದನೆಗೆ ಒಳಪಟ್ಟಿರುತ್ತದೆ’ ಎಂದು ನಿರ್ದಿಷ್ಟವಾಗಿ ಹೇಳಲಾಗಿದೆ. ನೀವು ಅಂತಹ ಯಾವುದೇ ಅನುಮೋದನೆಯನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಲಾಗಿದೆ.

ಏಪ್ರಿಲ್ 10 ರಂದು, ಮಣಿಕರ್ಣಿಕಾ ಫಿಲ್ಮ್ಸ್ ಕಪೂರ್ ಅವರ 2015ರ ಪುಸ್ತಕವು ಚಿತ್ರಕ್ಕೆ ಏಕೈಕ ಆಧಾರವಲ್ಲ. ಹಾಗಾಗಿ, ಸ್ಕ್ರಿಪ್ಟ್ ಅನ್ನು ಅವರಿಂದ ಅನುಮೋದಿಸುವ ಯಾವುದೇ ಅಗತ್ಯತೆ ಕಂಪನಿಗೆ ಇಲ್ಲ ಎಂದು ಹೇಳುವ ಮೂಲಕ ಆರೋಪಗಳನ್ನು ತಿರಸ್ಕರಿತ್ತು.

ವಿಷಯ ಕಥೆ ಮತ್ತು ಚಿತ್ರಕಥೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಲು ಸೃಜನಶೀಲ ಸ್ವಾತಂತ್ರ್ಯಗಳನ್ನು ಚಲಾಯಿಸಲಾಗುವುದು ಎಂದು ಪಕ್ಷಗಳ ಒಪ್ಪಂದದಲ್ಲಿ ಸ್ಪಷ್ಟವಾಗಿ ಒಪ್ಪಿಕೊಳ್ಳಲಾಗಿದೆ ಮತ್ತು ಈ ಉದ್ದೇಶಕ್ಕಾಗಿ ಕಪೂರ್ ಅವರು ಪುಸ್ತಕದ ಮೇಲಿನ ‘ಸಂಪೂರ್ಣ ಬೌದ್ಧಿಕ ಆಸ್ತಿ ಹಕ್ಕುಗಳನ್ನು’ ನಿರ್ಮಾಪಕರಿಗೆ ನೀಡಿದ್ದಾರೆ ಎಂದು ಆರೋಪಗಳ ಕುರಿತು ಮಣಿಕರ್ಣಿಕಾ ಫಿಲ್ಮ್ಸ್‌ ಹೇಳಿದೆ.

ಕಂಪನಿಯ ನಿರ್ದೇಶಕಿಯಾಗಿರುವ ರನೌತ್, ನಮ್ಮ ಇಮೇಲ್ ಮತ್ತು ವಾಟ್ಸಾಪ್ ಸಂದೇಶಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಸೆನ್ಸಾರ್ ಮಂಡಳಿಯು ತನ್ನ ಚಿತ್ರದ ಪ್ರಮಾಣೀಕರಣವನ್ನು ಸ್ಥಗಿತಗೊಳಿಸುವ ಮೂಲಕ “ತುರ್ತು ಪರಿಸ್ಥಿತಿ” ಹೇರಿದೆ ಎಂದು ಕಳೆದ ವರ್ಷ ಕಂಗನಾ ರನೌತ್ ಅವರು ಆರೋಪಿಸಿದ್ದರು.

ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನಿಂದ ಚಿತ್ರಕ್ಕೆ ‘ಪರವಾನಗಿ’ ನೀಡಲಾಗಿದ್ದು, ಹಾಗಾಗಿ, ಕಪೂರ್ ಅವರು ನಮ್ಮ ಬದಲು ಅವರನ್ನೇ ಸಂಪರ್ಕಿಸಬೇಕು ಎಂದು ಏಪ್ರಿಲ್ 8 ರಂದು ನೆಟ್‌ಫ್ಲಿಕ್ಸ್ ಕೈ ತೊಳೆದುಕೊಂಡಿದೆ.

ಕಪೂರ್ ಅವರ ಕಾನೂನು ತಂಡವು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವುದಾಗಿ ತಿಳಿಸಿದೆ.

ಜನವರಿಯಲ್ಲಿ ಚಿತ್ರ ಮಂದಿರಗಳಲ್ಲಿ ಎಮರ್ಜೆನ್ಸಿ ಚಿತ್ರ ಬಿಡುಗಡೆಯಾದಾಗ ಕಪೂರ್ ಅವರು ನೋಡಿರಲಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಿದ ನಂತರವೇ ಅವರು ನೋಡಿದ್ದಾರೆ. ಅದರಲ್ಲಿನ ತಪ್ಪು ಉಲ್ಲೇಖಗಳು ಕಂಡು ಅವರಿಗೆ ದಿಗಿಲು ಉಂಟಾಗಿದೆ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಯೇಸುಕ್ರಿಸ್ತಗೆ ಅಗೌರವ ಆರೋಪ: ‘ಜಾಟ್’ ಚಿತ್ರತಂಡದ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...