Homeಮುಖಪುಟ'ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ': ಕಂಗನಾ ರನೌತ್ 'ಎಮರ್ಜೆನ್ಸಿ' ವಿರುದ್ಧ ಕಾನೂನು ಕ್ರಮಕ್ಕೆ...

‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

- Advertisement -
- Advertisement -

‘ಐತಿಹಾಸಿಕ ವಿಷಯಗಳನ್ನು ತಪ್ಪಾಗಿ ಪ್ರಸ್ತುತಪಡಿಸಲಾಗಿದೆ’ ಎಂದು ಆರೋಪಿಸಿ, ಬಿಜೆಪಿ ಸಂಸದೆ ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಲು ಲೇಖಕಿ ಕೂಮಿ ಕಪೂರ್ ನಿರ್ಧರಿಸಿದ್ದಾರೆ.

ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರನ್ನು ಇಂದಿರಾ ಗಾಂಧಿಯವರೊಂದಿಗೆ ರಹಸ್ಯವಾಗಿ ಒಪ್ಪಂದ ಮಾಡಿಕೊಂಡು ಕೆಲಸ ಮಾಡುತ್ತಿರುವಂತೆ ಚಿತ್ರಿಸಿದ್ದಕ್ಕಾಗಿ ಈ ಹಿಂದೆ ಎಮರ್ಜೆನ್ಸಿ ಚಿತ್ರ ಸಿಖ್ ಗುಂಪುಗಳಿಂದ ವಿರೋಧವನ್ನು ಎದುರಿಸಿತ್ತು.

ಚಿತ್ರದ ಡಿಸ್ಕ್ಲೈಮರ್‌ನಲ್ಲಿ, ಇದು ಕೂಮಿ ಕಪೂರ್ ಅವರ ‘ದಿ ಎಮರ್ಜೆನ್ಸಿ’ ಮತ್ತು ‘ಜಯಂತ್ ವಸಂತ್ ಸಿನ್ಹಾ ಅವರ ‘ಪ್ರಿಯದರ್ಶಿನಿ’ ಕೃತಿಗಳನ್ನು ಆಧರಿಸಿದೆ ಎಂದು ಹೇಳಲಾಗಿದೆ. ಆದರೆ, ಇದಕ್ಕೆ ಕಪೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಎರಡು ಲೀಗಲ್ ನೋಟಿಸ್‌ಗಳ ನಂತರವೂ, ಚಿತ್ರದ ಡಿಸ್ಕ್ಲೈಮರ್‌ ಬದಲಾಗಿಲ್ಲ” ಎಂದು ಕೂಮಿ ಕಪೂರ್ ಹೇಳಿದ್ದಾಗಿ ದಿ ಟೆಲಿಗ್ರಾಫ್‌ಗೆ ವರದಿ ಮಾಡಿದೆ.

“ಅವರು ಇಂದಿರಾ ಗಾಂಧಿಯವರ ಬಗ್ಗೆ ಸಿನಿಮಾ ಮಾಡುತ್ತಿರುವುದಾಗಿ ನನಗೆ ಹೇಳಿದರು. ನಾನು ಅವರಿಗೆ ಅನುಮತಿ ಕೊಟ್ಟೆ. ಅದು ನನ್ನ ಮೂರ್ಖತನ, ಏಕೆಂದರೆ ಅವರು ನಾವು ಒಂದೇ ಅಧ್ಯಾಯವನ್ನು ಬಳಸುತ್ತಿರುವುದಾಗಿ ಹೇಳಿದ್ದರು. ಆದರೆ, ಎಲ್ಲಾ ಅಧ್ಯಾಯಗಳನ್ನು ಬಳಸಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಜೀವನವು ಪಬ್ಲಿಕ್ ಡೊಮೈನ್‌ನಲ್ಲಿದೆ. ಹಾಗಾಗಿ, ನನ್ನ ಪುಸ್ತಕವನ್ನು ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ” ಎಂದು ಕೂಮಿ ಕಪೂರ್ ಹೇಳಿದ್ದಾರೆ.

ಏಪ್ರಿಲ್ 3ರಂದು ಕಂಗನಾ ರನೌತ್ ಅವರ ‘ಮಣಿಕರ್ಣಿಕಾ ಫಿಲ್ಮ್ಸ್’ ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ‘ನೆಟ್‌ಫ್ಲಿಕ್ಸ್‌’ಗೆ ನೋಟಿಸ್‌ ನೀಡಿರುವ ಕಪೂರ್ ಪರ ವಕೀಲರು, “ನೀವು ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರಿತವಾಗಿ ಚಿತ್ರದಲ್ಲಿ ಸತ್ಯಗಳನ್ನು ತಿರುಚಿದ್ದೀರಿ. ನಮ್ಮ ಕಕ್ಷಿದಾರರ ಹಕ್ಕುಗಳು ಮತ್ತು ಒಪ್ಪಿಗೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದೀರಿ ಮತ್ತು ಸದರಿ ಚಿತ್ರದೊಂದಿಗೆ ಅವರ ಹೆಸರನ್ನು ಕಾನೂನುಬಾಹಿರವಾಗಿ ಬಳಸಿಕೊಂಡಿದ್ದೀರಿ” ಎಂದಿದ್ದಾರೆ.

ಕಪೂರ್ ಪರ ವಕೀಲರು ಎಮರ್ಜೆನ್ಸಿ ಚಿತ್ರದಲ್ಲಿ ವಿಷಯಗಳನ್ನು ತಿರುಚಲಾಗಿದೆ ಎಂಬುವುದಕ್ಕೆ 6 ಉದಾಹಣೆಗಳನ್ನು ಕೊಟ್ಟಿದ್ದಾರೆ. ಅವುಗಳಲ್ಲಿ, “ಇಂದಿರಾ ಗಾಂಧಿಯವರು ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರ ಬಳಿಗೆ ವೈಯಕ್ತಿಕವಾಗಿ ಹೋಗಿ ಸಂಪುಟ ಸಭೆ ಕರೆಯದೆ ತುರ್ತು ಪರಿಸ್ಥಿತಿ ಘೋಷಿಸುವಂತೆ ಬೆದರಿಕೆ ಹಾಕಿದ್ದಾರೆ ಎಂಬುದು ಮತ್ತು ಪತ್ರಕರ್ತ ನಿಖಿಲ್ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ನಿರ್ವಹಣೆ ಕಾಯ್ದೆ [ಮಿಸಾ] ಅಡಿಯಲ್ಲಿ ಬಂಧಿಸಲಾಗಿದೆ ಎಂಬುದು ಒಳಗೊಂಡಿವೆ.

ಕಪೂರ್ ಪರ ವಕೀಲರು ನೀಡಿರುವ ಮಾನನಷ್ಟ ಮೊಕದ್ದಮೆ ನೋಟಿಸ್‌ನಲ್ಲಿ, “ಕಿಶೋರ್ ಕುಮಾರ್ ಅವರ ಹಾಡುಗಳನ್ನು ಆಲ್ ಇಂಡಿಯಾ ರೇಡಿಯೋ ನಿಷೇಧಿಸಿದಾಗ ಅವರು ಭಾರತದಲ್ಲಿ ಇರಲಿಲ್ಲ ಎಂದು ಆಕ್ರೋಶಗೊಂಡ ಅಕ್ಬರ್ ಅಹ್ಮದ್ (ಡಂಪಿ) ನಮ್ಮ ಕಕ್ಷಿದಾರರಿಗೆ ದೂರವಾಣಿ ಕರೆ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ನಮ್ಮ ಕಕ್ಷಿದಾರರು ಅವರನ್ನು ಸಮಾಧಾನಪಡಿಸಿ ತಮ್ಮ ಪುಸ್ತಕದಲ್ಲಿ ಆಲ್ ಇಂಡಿಯಾ ರೇಡಿಯೋದಲ್ಲಿ ಕಿಶೋರ್ ಕುಮಾರ್ ಅವರ ಹಾಡುಗಳನ್ನು ನಿಷೇಧಿಸಲು ಅಂದಿನ ಮಾಹಿತಿ ಮತ್ತು ಪ್ರಸಾರ ಸಚಿವ ವಿ ಸಿ ಶುಕ್ಲಾ ಕಾರಣ, ಅಕ್ಬರ್ ಅಹ್ಮದ್ (ಡಂಪಿ) ಅಲ್ಲ” ಎಂದು ಎಂದು ವಿವರಿಸಬೇಕಾಯಿತು” ಎಂದು ಹೇಳಲಾಗಿದೆ.

ಕಪೂರ್ ಅವರ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ ನಡುವಿನ 2021ರ ಒಪ್ಪಂದವು ಸತ್ಯಗಳನ್ನು ತಿರುಚಲು ಅವಕಾಶ ನೀಡುವುದಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪ್ರಸ್ತಾವಿತ ಚಿತ್ರದ ಸ್ಕ್ರಿಪ್ಟ್ ಅನ್ನು ನಮ್ಮ ಕಕ್ಷಿದಾರರಿಗೆ ತೋರಿಸಲು ನಿಮ್ಮನ್ನು ವಿನಂತಿಸಲಾಗಿತ್ತು. ನಮ್ಮ ಕಕ್ಷಿದಾರ ಫಾಲೋ-ಅಪ್ ಸಂದೇಶಗಳ ಹೊರತಾಗಿಯೂ, ನೀವು ಅದನ್ನು ಮಾಡಿಲ್ಲ ಎಂದು ಕಪೂರ್ ಪರ ವಕೀಲರು ಹೇಳಿದ್ದಾರೆ.

ಇದಲ್ಲದೆ, ಸದರಿ ಒಪ್ಪಂದದಲ್ಲಿ ನಮ್ಮ ಕಕ್ಷಿದಾರ ಹೆಸರು, ಭಾವಚಿತ್ರ, ಜೀವನಚರಿತ್ರೆ ಮತ್ತು ಗುರುತನ್ನು ಜಾಹೀರಾತು ಮತ್ತು ಪ್ರಚಾರದ ಉದ್ದೇಶಗಳಿಗಾಗಿ ಬಳಸುವುದು ಕಟ್ಟುನಿಟ್ಟಾಗಿ ‘ಲೇಖಕರ ಲಿಖಿತ ಅನುಮೋದನೆಗೆ ಒಳಪಟ್ಟಿರುತ್ತದೆ’ ಎಂದು ನಿರ್ದಿಷ್ಟವಾಗಿ ಹೇಳಲಾಗಿದೆ. ನೀವು ಅಂತಹ ಯಾವುದೇ ಅನುಮೋದನೆಯನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಲಾಗಿದೆ.

ಏಪ್ರಿಲ್ 10 ರಂದು, ಮಣಿಕರ್ಣಿಕಾ ಫಿಲ್ಮ್ಸ್ ಕಪೂರ್ ಅವರ 2015ರ ಪುಸ್ತಕವು ಚಿತ್ರಕ್ಕೆ ಏಕೈಕ ಆಧಾರವಲ್ಲ. ಹಾಗಾಗಿ, ಸ್ಕ್ರಿಪ್ಟ್ ಅನ್ನು ಅವರಿಂದ ಅನುಮೋದಿಸುವ ಯಾವುದೇ ಅಗತ್ಯತೆ ಕಂಪನಿಗೆ ಇಲ್ಲ ಎಂದು ಹೇಳುವ ಮೂಲಕ ಆರೋಪಗಳನ್ನು ತಿರಸ್ಕರಿತ್ತು.

ವಿಷಯ ಕಥೆ ಮತ್ತು ಚಿತ್ರಕಥೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಲು ಸೃಜನಶೀಲ ಸ್ವಾತಂತ್ರ್ಯಗಳನ್ನು ಚಲಾಯಿಸಲಾಗುವುದು ಎಂದು ಪಕ್ಷಗಳ ಒಪ್ಪಂದದಲ್ಲಿ ಸ್ಪಷ್ಟವಾಗಿ ಒಪ್ಪಿಕೊಳ್ಳಲಾಗಿದೆ ಮತ್ತು ಈ ಉದ್ದೇಶಕ್ಕಾಗಿ ಕಪೂರ್ ಅವರು ಪುಸ್ತಕದ ಮೇಲಿನ ‘ಸಂಪೂರ್ಣ ಬೌದ್ಧಿಕ ಆಸ್ತಿ ಹಕ್ಕುಗಳನ್ನು’ ನಿರ್ಮಾಪಕರಿಗೆ ನೀಡಿದ್ದಾರೆ ಎಂದು ಆರೋಪಗಳ ಕುರಿತು ಮಣಿಕರ್ಣಿಕಾ ಫಿಲ್ಮ್ಸ್‌ ಹೇಳಿದೆ.

ಕಂಪನಿಯ ನಿರ್ದೇಶಕಿಯಾಗಿರುವ ರನೌತ್, ನಮ್ಮ ಇಮೇಲ್ ಮತ್ತು ವಾಟ್ಸಾಪ್ ಸಂದೇಶಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಸೆನ್ಸಾರ್ ಮಂಡಳಿಯು ತನ್ನ ಚಿತ್ರದ ಪ್ರಮಾಣೀಕರಣವನ್ನು ಸ್ಥಗಿತಗೊಳಿಸುವ ಮೂಲಕ “ತುರ್ತು ಪರಿಸ್ಥಿತಿ” ಹೇರಿದೆ ಎಂದು ಕಳೆದ ವರ್ಷ ಕಂಗನಾ ರನೌತ್ ಅವರು ಆರೋಪಿಸಿದ್ದರು.

ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನಿಂದ ಚಿತ್ರಕ್ಕೆ ‘ಪರವಾನಗಿ’ ನೀಡಲಾಗಿದ್ದು, ಹಾಗಾಗಿ, ಕಪೂರ್ ಅವರು ನಮ್ಮ ಬದಲು ಅವರನ್ನೇ ಸಂಪರ್ಕಿಸಬೇಕು ಎಂದು ಏಪ್ರಿಲ್ 8 ರಂದು ನೆಟ್‌ಫ್ಲಿಕ್ಸ್ ಕೈ ತೊಳೆದುಕೊಂಡಿದೆ.

ಕಪೂರ್ ಅವರ ಕಾನೂನು ತಂಡವು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವುದಾಗಿ ತಿಳಿಸಿದೆ.

ಜನವರಿಯಲ್ಲಿ ಚಿತ್ರ ಮಂದಿರಗಳಲ್ಲಿ ಎಮರ್ಜೆನ್ಸಿ ಚಿತ್ರ ಬಿಡುಗಡೆಯಾದಾಗ ಕಪೂರ್ ಅವರು ನೋಡಿರಲಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಿದ ನಂತರವೇ ಅವರು ನೋಡಿದ್ದಾರೆ. ಅದರಲ್ಲಿನ ತಪ್ಪು ಉಲ್ಲೇಖಗಳು ಕಂಡು ಅವರಿಗೆ ದಿಗಿಲು ಉಂಟಾಗಿದೆ ಎಂದು ದಿ ಟೆಲಿಗ್ರಾಫ್ ಹೇಳಿದೆ.

ಯೇಸುಕ್ರಿಸ್ತಗೆ ಅಗೌರವ ಆರೋಪ: ‘ಜಾಟ್’ ಚಿತ್ರತಂಡದ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...