Homeಚಳವಳಿಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

ಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

- Advertisement -
- Advertisement -

“ಈ ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ನಮಗೆ ಸಂಪೂರ್ಣವಾಗಿ ತಿಳಿದಿದೆ. ಇದಕ್ಕೆ ಬೆಂಬಲ ಕೊಡಿ ಎಂದು ವಿವರಿಸಲು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಇಲ್ಲಿಗೆ ಬರಬೇಕಾಗಿಲ್ಲ”.

ಕೇರಳದ ಹಲವು ಮನೆಗಳ ಮುಂದೆ ಈ ರೀತಿಯ ಪೋಸ್ಟರ್‌ಗಳನ್ನು ಹಚ್ಚಲಾಗಿದ್ದು  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಗೆ ಭಾರೀ ಪ್ರತಿರೋಧ ವ್ಯಕ್ತಪಡಿಸಿವೆ.

ವಿವಾದಾತ್ಮಕ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಂತೆ, ಬಿಜೆಪಿಯು ಜನರ ಬೆಂಬಲವನ್ನು ಪಡೆಯಲು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಮನೆ ಮನೆ ಪ್ರಚಾರವು ಒಂದು. ಅದರೆ  ಕೇರಳದ ಕೋಳಿಕೋಡ್ ಜಿಲ್ಲೆಯ ಕರಡಿ ಗ್ರಾಮವೊಂದರಲ್ಲೇ ಸುಮಾರು 350 ಮನೆಗಳು ಬಿಜೆಪಿಗರಿಗೆ ಪ್ರವೇಶವಿಲ್ಲ ಎಂದು ತಿಳಿಸುವ ಪೋಸ್ಟರ್‌ಗಳನ್ನು ಹಾಕಿವೆ. ಪೋಸ್ಟರ್‌ಗಳು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಕರೆ ನೀಡಿವೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಯುವ ವಿಭಾಗವಾದ ಮುಸ್ಲಿಂ ಯೂತ್ ಲೀಗ್‌ನ ಸ್ಥಳೀಯ ಕಾರ್ಯಕರ್ತ ಆಜಾದ್ ಕರಡಿ ಮಾತನಾಡಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಿರುಪುಸ್ತಕದಲ್ಲಿ “ಬಡ ಮುಸ್ಲಿಂ ಪುರುಷರ ಮತ್ತು ಮಹಿಳೆಯರು ಸಿಎಎ ಪರವಿದ್ದಾರೆ ಎಂಬ ಮಾಹಿತಿ ಪ್ರಕಟಿಸಿದೆ. ಹಾಗಾಗಿ ಜನರಿಗೆ ಸತ್ಯ ತಿಳಿಸಲು ನಾವು ಪೋಸ್ಟರ್‌ ಅಭಿಯಾನ ಆರಂಭಿಸಿದ್ದೇವೆ ಎಂದಿದ್ದಾರೆ.

ಎಲ್ಲಾ ಸಮುದಾಯಗಳ ಕುಟುಂಬಗಳು ಸಿಎಎ ಬೆಂಬಲಿಸುತ್ತಿವೆ ಎಂಬ ತಪ್ಪು ಸಂದೇಶವನ್ನು ಬಿಜೆಪಿಯವರು ಹರಡುತ್ತಿದ್ದಾರೆ. ಹಲವಾರು ಕುಟುಂಬಗಳು ಈ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಆದರೂ ಕರಪತ್ರ ಕೊಡುವ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಎಲ್ಲರ ಬೆಂಬಲವಿದೆ ಎಂಬ ಸುಳ್ಳು ಹರಡಲಾಗುತ್ತಿದೆ. ಇದು ಆಕ್ಷೇಪಾರ್ಹ ಸಂಗತಿಯಾಗಿದೆ ಎಂದು ಆಜಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಎಡಪಂಥೀಯ ಸ್ವತಂತ್ರ ಶಾಸಕರಾದ ಕರತ್ ರಜಾಕ್ ಮತ್ತು ಸುನ್ನಿ ಯುವ ಚಳವಳಿಯ ರಾಜ್ಯ ಕಾರ್ಯದರ್ಶಿ ನಾಸರ್ ಫೈಜಿ ಕೂದಥೈ ಅವರಿಗೆ ಸಿಎಎ ಕರಪತ್ರ ಕೊಡುತ್ತಿರುವ ಫೋಟೊಗಳನ್ನು ಪ್ರಕಟಿಸಿರುವ ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಖಾತೆಗೆಳು ಇವರು ಕೂಡ ಬೆಂಬಲಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿವೆ.

ಫೋಟೋಗಳ ಬಗ್ಗೆ ಇವರಿಬ್ಬರನ್ನು ಪ್ರಶ್ನಿಸಿದಾಗ, ತಮ್ಮನ್ನು ಭೇಟಿ ಮಾಡಿದ ಪ್ರಚಾರಕರನ್ನು ತಡೆಯಲು ಸಾಧ್ಯವಾಗದಿದ್ದರೂ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಾವು ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಬೆಂಬಲಿಸಿದ್ದಾರೆ ಎಂದು ಹಾಕಿಕೊಂಡಿದೆ.. ಹಾಗಾಗಿ ಪೋಸ್ಟರ್‌ ಹಾಕುತ್ತಿದ್ದೇವೆ, ನಮ್ಮ ಮನೆಗಳಿಗೆ ಅವರು ಬರುವುದೇ ಬೇಡ ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಪೋಸ್ಟರ್‌ಗಳನ್ನು ಹಿಂದೂಗಳು, ಮುಸ್ಲಿಮರು ಮತ್ತು ಕ್ರೈಸ್ತರ ಮನೆಗಳಲ್ಲಿ ಹಾಕಲಾಗಿದೆ ಎಂದು ಆಜಾದ್ ಹೇಳಿದ್ದಾರೆ. ನಾವು ಅವರು ಸ್ನೇಹಿತರಾಗಿದ್ದರೂ ಸಹ ನಂಬಿಕೆಯ ದೃಷ್ಟಿಯಿಂದ ಪೋಸ್ಟರ್‌ಗಳನ್ನು ಅಂಟಿಸುವ ಮೊದಲು ನಾವು ಅವರ ಅನುಮತಿಯನ್ನು ಪಡೆಯುತ್ತೇವೆ ಎಂದು ಅಜಾದ್‌ ಹೇಳಿದ್ದಾರೆ.

ನಾನು ಸಿಎಎಯನ್ನು ಬೆಂಬಲಿಸುತ್ತೇನೆ ಎಂದು ನಂಬುವಂತೆ ಜನರನ್ನು ದಾರಿ ತಪ್ಪಿಸಲು ಬಿಜೆಪಿ ಕಾರ್ಯಕರ್ತರು ನನ್ನ ಚಿತ್ರವನ್ನು ಪ್ರಸಾರ ಮಾಡುತ್ತಾರೆಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಶಾಸಕ ರಜಾಕ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ. “ನಾನು ಎಲ್ಲರನ್ನು ಸ್ವಾಗತಿಸುವ ರೀತಿಯಲ್ಲೇ ಅವರನ್ನು ಸಹ ಸ್ವಾಗತಿಸಿದೆ. ಆದರೆ ಮುಸ್ಲಿಮರು ಮತ್ತು ಎಡಪಂಥೀಯರು ಸಿಎಎಗೆ ಬೆಂಬಲ ನೀಡುತ್ತಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುವಂತಹ ಚಿತ್ರಗಳನ್ನು ಪ್ರಸಾರ ಮಾಡಿರುವುದು ಸರಿಯಲ್ಲ” ಎಂದು ರಜಾಕ್ ಹೇಳಿದ್ದಾರೆ.

ಆಧಾರ: ದಿವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...