Homeಚಳವಳಿಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

ಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

- Advertisement -
- Advertisement -

“ಈ ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ನಮಗೆ ಸಂಪೂರ್ಣವಾಗಿ ತಿಳಿದಿದೆ. ಇದಕ್ಕೆ ಬೆಂಬಲ ಕೊಡಿ ಎಂದು ವಿವರಿಸಲು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಇಲ್ಲಿಗೆ ಬರಬೇಕಾಗಿಲ್ಲ”.

ಕೇರಳದ ಹಲವು ಮನೆಗಳ ಮುಂದೆ ಈ ರೀತಿಯ ಪೋಸ್ಟರ್‌ಗಳನ್ನು ಹಚ್ಚಲಾಗಿದ್ದು  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಗೆ ಭಾರೀ ಪ್ರತಿರೋಧ ವ್ಯಕ್ತಪಡಿಸಿವೆ.

ವಿವಾದಾತ್ಮಕ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಂತೆ, ಬಿಜೆಪಿಯು ಜನರ ಬೆಂಬಲವನ್ನು ಪಡೆಯಲು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಮನೆ ಮನೆ ಪ್ರಚಾರವು ಒಂದು. ಅದರೆ  ಕೇರಳದ ಕೋಳಿಕೋಡ್ ಜಿಲ್ಲೆಯ ಕರಡಿ ಗ್ರಾಮವೊಂದರಲ್ಲೇ ಸುಮಾರು 350 ಮನೆಗಳು ಬಿಜೆಪಿಗರಿಗೆ ಪ್ರವೇಶವಿಲ್ಲ ಎಂದು ತಿಳಿಸುವ ಪೋಸ್ಟರ್‌ಗಳನ್ನು ಹಾಕಿವೆ. ಪೋಸ್ಟರ್‌ಗಳು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಕರೆ ನೀಡಿವೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಯುವ ವಿಭಾಗವಾದ ಮುಸ್ಲಿಂ ಯೂತ್ ಲೀಗ್‌ನ ಸ್ಥಳೀಯ ಕಾರ್ಯಕರ್ತ ಆಜಾದ್ ಕರಡಿ ಮಾತನಾಡಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಿರುಪುಸ್ತಕದಲ್ಲಿ “ಬಡ ಮುಸ್ಲಿಂ ಪುರುಷರ ಮತ್ತು ಮಹಿಳೆಯರು ಸಿಎಎ ಪರವಿದ್ದಾರೆ ಎಂಬ ಮಾಹಿತಿ ಪ್ರಕಟಿಸಿದೆ. ಹಾಗಾಗಿ ಜನರಿಗೆ ಸತ್ಯ ತಿಳಿಸಲು ನಾವು ಪೋಸ್ಟರ್‌ ಅಭಿಯಾನ ಆರಂಭಿಸಿದ್ದೇವೆ ಎಂದಿದ್ದಾರೆ.

ಎಲ್ಲಾ ಸಮುದಾಯಗಳ ಕುಟುಂಬಗಳು ಸಿಎಎ ಬೆಂಬಲಿಸುತ್ತಿವೆ ಎಂಬ ತಪ್ಪು ಸಂದೇಶವನ್ನು ಬಿಜೆಪಿಯವರು ಹರಡುತ್ತಿದ್ದಾರೆ. ಹಲವಾರು ಕುಟುಂಬಗಳು ಈ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಆದರೂ ಕರಪತ್ರ ಕೊಡುವ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಎಲ್ಲರ ಬೆಂಬಲವಿದೆ ಎಂಬ ಸುಳ್ಳು ಹರಡಲಾಗುತ್ತಿದೆ. ಇದು ಆಕ್ಷೇಪಾರ್ಹ ಸಂಗತಿಯಾಗಿದೆ ಎಂದು ಆಜಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಎಡಪಂಥೀಯ ಸ್ವತಂತ್ರ ಶಾಸಕರಾದ ಕರತ್ ರಜಾಕ್ ಮತ್ತು ಸುನ್ನಿ ಯುವ ಚಳವಳಿಯ ರಾಜ್ಯ ಕಾರ್ಯದರ್ಶಿ ನಾಸರ್ ಫೈಜಿ ಕೂದಥೈ ಅವರಿಗೆ ಸಿಎಎ ಕರಪತ್ರ ಕೊಡುತ್ತಿರುವ ಫೋಟೊಗಳನ್ನು ಪ್ರಕಟಿಸಿರುವ ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಖಾತೆಗೆಳು ಇವರು ಕೂಡ ಬೆಂಬಲಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿವೆ.

ಫೋಟೋಗಳ ಬಗ್ಗೆ ಇವರಿಬ್ಬರನ್ನು ಪ್ರಶ್ನಿಸಿದಾಗ, ತಮ್ಮನ್ನು ಭೇಟಿ ಮಾಡಿದ ಪ್ರಚಾರಕರನ್ನು ತಡೆಯಲು ಸಾಧ್ಯವಾಗದಿದ್ದರೂ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಾವು ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಬೆಂಬಲಿಸಿದ್ದಾರೆ ಎಂದು ಹಾಕಿಕೊಂಡಿದೆ.. ಹಾಗಾಗಿ ಪೋಸ್ಟರ್‌ ಹಾಕುತ್ತಿದ್ದೇವೆ, ನಮ್ಮ ಮನೆಗಳಿಗೆ ಅವರು ಬರುವುದೇ ಬೇಡ ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಪೋಸ್ಟರ್‌ಗಳನ್ನು ಹಿಂದೂಗಳು, ಮುಸ್ಲಿಮರು ಮತ್ತು ಕ್ರೈಸ್ತರ ಮನೆಗಳಲ್ಲಿ ಹಾಕಲಾಗಿದೆ ಎಂದು ಆಜಾದ್ ಹೇಳಿದ್ದಾರೆ. ನಾವು ಅವರು ಸ್ನೇಹಿತರಾಗಿದ್ದರೂ ಸಹ ನಂಬಿಕೆಯ ದೃಷ್ಟಿಯಿಂದ ಪೋಸ್ಟರ್‌ಗಳನ್ನು ಅಂಟಿಸುವ ಮೊದಲು ನಾವು ಅವರ ಅನುಮತಿಯನ್ನು ಪಡೆಯುತ್ತೇವೆ ಎಂದು ಅಜಾದ್‌ ಹೇಳಿದ್ದಾರೆ.

ನಾನು ಸಿಎಎಯನ್ನು ಬೆಂಬಲಿಸುತ್ತೇನೆ ಎಂದು ನಂಬುವಂತೆ ಜನರನ್ನು ದಾರಿ ತಪ್ಪಿಸಲು ಬಿಜೆಪಿ ಕಾರ್ಯಕರ್ತರು ನನ್ನ ಚಿತ್ರವನ್ನು ಪ್ರಸಾರ ಮಾಡುತ್ತಾರೆಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಶಾಸಕ ರಜಾಕ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ. “ನಾನು ಎಲ್ಲರನ್ನು ಸ್ವಾಗತಿಸುವ ರೀತಿಯಲ್ಲೇ ಅವರನ್ನು ಸಹ ಸ್ವಾಗತಿಸಿದೆ. ಆದರೆ ಮುಸ್ಲಿಮರು ಮತ್ತು ಎಡಪಂಥೀಯರು ಸಿಎಎಗೆ ಬೆಂಬಲ ನೀಡುತ್ತಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುವಂತಹ ಚಿತ್ರಗಳನ್ನು ಪ್ರಸಾರ ಮಾಡಿರುವುದು ಸರಿಯಲ್ಲ” ಎಂದು ರಜಾಕ್ ಹೇಳಿದ್ದಾರೆ.

ಆಧಾರ: ದಿವೈರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...