Homeಚಳವಳಿಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

ಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

- Advertisement -
- Advertisement -

“ಈ ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ನಮಗೆ ಸಂಪೂರ್ಣವಾಗಿ ತಿಳಿದಿದೆ. ಇದಕ್ಕೆ ಬೆಂಬಲ ಕೊಡಿ ಎಂದು ವಿವರಿಸಲು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಇಲ್ಲಿಗೆ ಬರಬೇಕಾಗಿಲ್ಲ”.

ಕೇರಳದ ಹಲವು ಮನೆಗಳ ಮುಂದೆ ಈ ರೀತಿಯ ಪೋಸ್ಟರ್‌ಗಳನ್ನು ಹಚ್ಚಲಾಗಿದ್ದು  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಗೆ ಭಾರೀ ಪ್ರತಿರೋಧ ವ್ಯಕ್ತಪಡಿಸಿವೆ.

ವಿವಾದಾತ್ಮಕ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಂತೆ, ಬಿಜೆಪಿಯು ಜನರ ಬೆಂಬಲವನ್ನು ಪಡೆಯಲು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಮನೆ ಮನೆ ಪ್ರಚಾರವು ಒಂದು. ಅದರೆ  ಕೇರಳದ ಕೋಳಿಕೋಡ್ ಜಿಲ್ಲೆಯ ಕರಡಿ ಗ್ರಾಮವೊಂದರಲ್ಲೇ ಸುಮಾರು 350 ಮನೆಗಳು ಬಿಜೆಪಿಗರಿಗೆ ಪ್ರವೇಶವಿಲ್ಲ ಎಂದು ತಿಳಿಸುವ ಪೋಸ್ಟರ್‌ಗಳನ್ನು ಹಾಕಿವೆ. ಪೋಸ್ಟರ್‌ಗಳು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಕರೆ ನೀಡಿವೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಯುವ ವಿಭಾಗವಾದ ಮುಸ್ಲಿಂ ಯೂತ್ ಲೀಗ್‌ನ ಸ್ಥಳೀಯ ಕಾರ್ಯಕರ್ತ ಆಜಾದ್ ಕರಡಿ ಮಾತನಾಡಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಿರುಪುಸ್ತಕದಲ್ಲಿ “ಬಡ ಮುಸ್ಲಿಂ ಪುರುಷರ ಮತ್ತು ಮಹಿಳೆಯರು ಸಿಎಎ ಪರವಿದ್ದಾರೆ ಎಂಬ ಮಾಹಿತಿ ಪ್ರಕಟಿಸಿದೆ. ಹಾಗಾಗಿ ಜನರಿಗೆ ಸತ್ಯ ತಿಳಿಸಲು ನಾವು ಪೋಸ್ಟರ್‌ ಅಭಿಯಾನ ಆರಂಭಿಸಿದ್ದೇವೆ ಎಂದಿದ್ದಾರೆ.

ಎಲ್ಲಾ ಸಮುದಾಯಗಳ ಕುಟುಂಬಗಳು ಸಿಎಎ ಬೆಂಬಲಿಸುತ್ತಿವೆ ಎಂಬ ತಪ್ಪು ಸಂದೇಶವನ್ನು ಬಿಜೆಪಿಯವರು ಹರಡುತ್ತಿದ್ದಾರೆ. ಹಲವಾರು ಕುಟುಂಬಗಳು ಈ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಆದರೂ ಕರಪತ್ರ ಕೊಡುವ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಎಲ್ಲರ ಬೆಂಬಲವಿದೆ ಎಂಬ ಸುಳ್ಳು ಹರಡಲಾಗುತ್ತಿದೆ. ಇದು ಆಕ್ಷೇಪಾರ್ಹ ಸಂಗತಿಯಾಗಿದೆ ಎಂದು ಆಜಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಎಡಪಂಥೀಯ ಸ್ವತಂತ್ರ ಶಾಸಕರಾದ ಕರತ್ ರಜಾಕ್ ಮತ್ತು ಸುನ್ನಿ ಯುವ ಚಳವಳಿಯ ರಾಜ್ಯ ಕಾರ್ಯದರ್ಶಿ ನಾಸರ್ ಫೈಜಿ ಕೂದಥೈ ಅವರಿಗೆ ಸಿಎಎ ಕರಪತ್ರ ಕೊಡುತ್ತಿರುವ ಫೋಟೊಗಳನ್ನು ಪ್ರಕಟಿಸಿರುವ ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಖಾತೆಗೆಳು ಇವರು ಕೂಡ ಬೆಂಬಲಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿವೆ.

ಫೋಟೋಗಳ ಬಗ್ಗೆ ಇವರಿಬ್ಬರನ್ನು ಪ್ರಶ್ನಿಸಿದಾಗ, ತಮ್ಮನ್ನು ಭೇಟಿ ಮಾಡಿದ ಪ್ರಚಾರಕರನ್ನು ತಡೆಯಲು ಸಾಧ್ಯವಾಗದಿದ್ದರೂ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಾವು ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಬೆಂಬಲಿಸಿದ್ದಾರೆ ಎಂದು ಹಾಕಿಕೊಂಡಿದೆ.. ಹಾಗಾಗಿ ಪೋಸ್ಟರ್‌ ಹಾಕುತ್ತಿದ್ದೇವೆ, ನಮ್ಮ ಮನೆಗಳಿಗೆ ಅವರು ಬರುವುದೇ ಬೇಡ ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಪೋಸ್ಟರ್‌ಗಳನ್ನು ಹಿಂದೂಗಳು, ಮುಸ್ಲಿಮರು ಮತ್ತು ಕ್ರೈಸ್ತರ ಮನೆಗಳಲ್ಲಿ ಹಾಕಲಾಗಿದೆ ಎಂದು ಆಜಾದ್ ಹೇಳಿದ್ದಾರೆ. ನಾವು ಅವರು ಸ್ನೇಹಿತರಾಗಿದ್ದರೂ ಸಹ ನಂಬಿಕೆಯ ದೃಷ್ಟಿಯಿಂದ ಪೋಸ್ಟರ್‌ಗಳನ್ನು ಅಂಟಿಸುವ ಮೊದಲು ನಾವು ಅವರ ಅನುಮತಿಯನ್ನು ಪಡೆಯುತ್ತೇವೆ ಎಂದು ಅಜಾದ್‌ ಹೇಳಿದ್ದಾರೆ.

ನಾನು ಸಿಎಎಯನ್ನು ಬೆಂಬಲಿಸುತ್ತೇನೆ ಎಂದು ನಂಬುವಂತೆ ಜನರನ್ನು ದಾರಿ ತಪ್ಪಿಸಲು ಬಿಜೆಪಿ ಕಾರ್ಯಕರ್ತರು ನನ್ನ ಚಿತ್ರವನ್ನು ಪ್ರಸಾರ ಮಾಡುತ್ತಾರೆಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಶಾಸಕ ರಜಾಕ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ. “ನಾನು ಎಲ್ಲರನ್ನು ಸ್ವಾಗತಿಸುವ ರೀತಿಯಲ್ಲೇ ಅವರನ್ನು ಸಹ ಸ್ವಾಗತಿಸಿದೆ. ಆದರೆ ಮುಸ್ಲಿಮರು ಮತ್ತು ಎಡಪಂಥೀಯರು ಸಿಎಎಗೆ ಬೆಂಬಲ ನೀಡುತ್ತಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುವಂತಹ ಚಿತ್ರಗಳನ್ನು ಪ್ರಸಾರ ಮಾಡಿರುವುದು ಸರಿಯಲ್ಲ” ಎಂದು ರಜಾಕ್ ಹೇಳಿದ್ದಾರೆ.

ಆಧಾರ: ದಿವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...