Homeಚಳವಳಿಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

ಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

- Advertisement -
- Advertisement -

“ಈ ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ನಮಗೆ ಸಂಪೂರ್ಣವಾಗಿ ತಿಳಿದಿದೆ. ಇದಕ್ಕೆ ಬೆಂಬಲ ಕೊಡಿ ಎಂದು ವಿವರಿಸಲು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಇಲ್ಲಿಗೆ ಬರಬೇಕಾಗಿಲ್ಲ”.

ಕೇರಳದ ಹಲವು ಮನೆಗಳ ಮುಂದೆ ಈ ರೀತಿಯ ಪೋಸ್ಟರ್‌ಗಳನ್ನು ಹಚ್ಚಲಾಗಿದ್ದು  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಗೆ ಭಾರೀ ಪ್ರತಿರೋಧ ವ್ಯಕ್ತಪಡಿಸಿವೆ.

ವಿವಾದಾತ್ಮಕ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಂತೆ, ಬಿಜೆಪಿಯು ಜನರ ಬೆಂಬಲವನ್ನು ಪಡೆಯಲು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಮನೆ ಮನೆ ಪ್ರಚಾರವು ಒಂದು. ಅದರೆ  ಕೇರಳದ ಕೋಳಿಕೋಡ್ ಜಿಲ್ಲೆಯ ಕರಡಿ ಗ್ರಾಮವೊಂದರಲ್ಲೇ ಸುಮಾರು 350 ಮನೆಗಳು ಬಿಜೆಪಿಗರಿಗೆ ಪ್ರವೇಶವಿಲ್ಲ ಎಂದು ತಿಳಿಸುವ ಪೋಸ್ಟರ್‌ಗಳನ್ನು ಹಾಕಿವೆ. ಪೋಸ್ಟರ್‌ಗಳು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಕರೆ ನೀಡಿವೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಯುವ ವಿಭಾಗವಾದ ಮುಸ್ಲಿಂ ಯೂತ್ ಲೀಗ್‌ನ ಸ್ಥಳೀಯ ಕಾರ್ಯಕರ್ತ ಆಜಾದ್ ಕರಡಿ ಮಾತನಾಡಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಿರುಪುಸ್ತಕದಲ್ಲಿ “ಬಡ ಮುಸ್ಲಿಂ ಪುರುಷರ ಮತ್ತು ಮಹಿಳೆಯರು ಸಿಎಎ ಪರವಿದ್ದಾರೆ ಎಂಬ ಮಾಹಿತಿ ಪ್ರಕಟಿಸಿದೆ. ಹಾಗಾಗಿ ಜನರಿಗೆ ಸತ್ಯ ತಿಳಿಸಲು ನಾವು ಪೋಸ್ಟರ್‌ ಅಭಿಯಾನ ಆರಂಭಿಸಿದ್ದೇವೆ ಎಂದಿದ್ದಾರೆ.

ಎಲ್ಲಾ ಸಮುದಾಯಗಳ ಕುಟುಂಬಗಳು ಸಿಎಎ ಬೆಂಬಲಿಸುತ್ತಿವೆ ಎಂಬ ತಪ್ಪು ಸಂದೇಶವನ್ನು ಬಿಜೆಪಿಯವರು ಹರಡುತ್ತಿದ್ದಾರೆ. ಹಲವಾರು ಕುಟುಂಬಗಳು ಈ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಆದರೂ ಕರಪತ್ರ ಕೊಡುವ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಎಲ್ಲರ ಬೆಂಬಲವಿದೆ ಎಂಬ ಸುಳ್ಳು ಹರಡಲಾಗುತ್ತಿದೆ. ಇದು ಆಕ್ಷೇಪಾರ್ಹ ಸಂಗತಿಯಾಗಿದೆ ಎಂದು ಆಜಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಎಡಪಂಥೀಯ ಸ್ವತಂತ್ರ ಶಾಸಕರಾದ ಕರತ್ ರಜಾಕ್ ಮತ್ತು ಸುನ್ನಿ ಯುವ ಚಳವಳಿಯ ರಾಜ್ಯ ಕಾರ್ಯದರ್ಶಿ ನಾಸರ್ ಫೈಜಿ ಕೂದಥೈ ಅವರಿಗೆ ಸಿಎಎ ಕರಪತ್ರ ಕೊಡುತ್ತಿರುವ ಫೋಟೊಗಳನ್ನು ಪ್ರಕಟಿಸಿರುವ ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಖಾತೆಗೆಳು ಇವರು ಕೂಡ ಬೆಂಬಲಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿವೆ.

ಫೋಟೋಗಳ ಬಗ್ಗೆ ಇವರಿಬ್ಬರನ್ನು ಪ್ರಶ್ನಿಸಿದಾಗ, ತಮ್ಮನ್ನು ಭೇಟಿ ಮಾಡಿದ ಪ್ರಚಾರಕರನ್ನು ತಡೆಯಲು ಸಾಧ್ಯವಾಗದಿದ್ದರೂ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಾವು ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಬೆಂಬಲಿಸಿದ್ದಾರೆ ಎಂದು ಹಾಕಿಕೊಂಡಿದೆ.. ಹಾಗಾಗಿ ಪೋಸ್ಟರ್‌ ಹಾಕುತ್ತಿದ್ದೇವೆ, ನಮ್ಮ ಮನೆಗಳಿಗೆ ಅವರು ಬರುವುದೇ ಬೇಡ ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಪೋಸ್ಟರ್‌ಗಳನ್ನು ಹಿಂದೂಗಳು, ಮುಸ್ಲಿಮರು ಮತ್ತು ಕ್ರೈಸ್ತರ ಮನೆಗಳಲ್ಲಿ ಹಾಕಲಾಗಿದೆ ಎಂದು ಆಜಾದ್ ಹೇಳಿದ್ದಾರೆ. ನಾವು ಅವರು ಸ್ನೇಹಿತರಾಗಿದ್ದರೂ ಸಹ ನಂಬಿಕೆಯ ದೃಷ್ಟಿಯಿಂದ ಪೋಸ್ಟರ್‌ಗಳನ್ನು ಅಂಟಿಸುವ ಮೊದಲು ನಾವು ಅವರ ಅನುಮತಿಯನ್ನು ಪಡೆಯುತ್ತೇವೆ ಎಂದು ಅಜಾದ್‌ ಹೇಳಿದ್ದಾರೆ.

ನಾನು ಸಿಎಎಯನ್ನು ಬೆಂಬಲಿಸುತ್ತೇನೆ ಎಂದು ನಂಬುವಂತೆ ಜನರನ್ನು ದಾರಿ ತಪ್ಪಿಸಲು ಬಿಜೆಪಿ ಕಾರ್ಯಕರ್ತರು ನನ್ನ ಚಿತ್ರವನ್ನು ಪ್ರಸಾರ ಮಾಡುತ್ತಾರೆಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಶಾಸಕ ರಜಾಕ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ. “ನಾನು ಎಲ್ಲರನ್ನು ಸ್ವಾಗತಿಸುವ ರೀತಿಯಲ್ಲೇ ಅವರನ್ನು ಸಹ ಸ್ವಾಗತಿಸಿದೆ. ಆದರೆ ಮುಸ್ಲಿಮರು ಮತ್ತು ಎಡಪಂಥೀಯರು ಸಿಎಎಗೆ ಬೆಂಬಲ ನೀಡುತ್ತಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುವಂತಹ ಚಿತ್ರಗಳನ್ನು ಪ್ರಸಾರ ಮಾಡಿರುವುದು ಸರಿಯಲ್ಲ” ಎಂದು ರಜಾಕ್ ಹೇಳಿದ್ದಾರೆ.

ಆಧಾರ: ದಿವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...