Homeಚಳವಳಿಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

ಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

- Advertisement -
- Advertisement -

“ಈ ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ನಮಗೆ ಸಂಪೂರ್ಣವಾಗಿ ತಿಳಿದಿದೆ. ಇದಕ್ಕೆ ಬೆಂಬಲ ಕೊಡಿ ಎಂದು ವಿವರಿಸಲು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಇಲ್ಲಿಗೆ ಬರಬೇಕಾಗಿಲ್ಲ”.

ಕೇರಳದ ಹಲವು ಮನೆಗಳ ಮುಂದೆ ಈ ರೀತಿಯ ಪೋಸ್ಟರ್‌ಗಳನ್ನು ಹಚ್ಚಲಾಗಿದ್ದು  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಗೆ ಭಾರೀ ಪ್ರತಿರೋಧ ವ್ಯಕ್ತಪಡಿಸಿವೆ.

ವಿವಾದಾತ್ಮಕ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಂತೆ, ಬಿಜೆಪಿಯು ಜನರ ಬೆಂಬಲವನ್ನು ಪಡೆಯಲು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಮನೆ ಮನೆ ಪ್ರಚಾರವು ಒಂದು. ಅದರೆ  ಕೇರಳದ ಕೋಳಿಕೋಡ್ ಜಿಲ್ಲೆಯ ಕರಡಿ ಗ್ರಾಮವೊಂದರಲ್ಲೇ ಸುಮಾರು 350 ಮನೆಗಳು ಬಿಜೆಪಿಗರಿಗೆ ಪ್ರವೇಶವಿಲ್ಲ ಎಂದು ತಿಳಿಸುವ ಪೋಸ್ಟರ್‌ಗಳನ್ನು ಹಾಕಿವೆ. ಪೋಸ್ಟರ್‌ಗಳು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಕರೆ ನೀಡಿವೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಯುವ ವಿಭಾಗವಾದ ಮುಸ್ಲಿಂ ಯೂತ್ ಲೀಗ್‌ನ ಸ್ಥಳೀಯ ಕಾರ್ಯಕರ್ತ ಆಜಾದ್ ಕರಡಿ ಮಾತನಾಡಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಿರುಪುಸ್ತಕದಲ್ಲಿ “ಬಡ ಮುಸ್ಲಿಂ ಪುರುಷರ ಮತ್ತು ಮಹಿಳೆಯರು ಸಿಎಎ ಪರವಿದ್ದಾರೆ ಎಂಬ ಮಾಹಿತಿ ಪ್ರಕಟಿಸಿದೆ. ಹಾಗಾಗಿ ಜನರಿಗೆ ಸತ್ಯ ತಿಳಿಸಲು ನಾವು ಪೋಸ್ಟರ್‌ ಅಭಿಯಾನ ಆರಂಭಿಸಿದ್ದೇವೆ ಎಂದಿದ್ದಾರೆ.

ಎಲ್ಲಾ ಸಮುದಾಯಗಳ ಕುಟುಂಬಗಳು ಸಿಎಎ ಬೆಂಬಲಿಸುತ್ತಿವೆ ಎಂಬ ತಪ್ಪು ಸಂದೇಶವನ್ನು ಬಿಜೆಪಿಯವರು ಹರಡುತ್ತಿದ್ದಾರೆ. ಹಲವಾರು ಕುಟುಂಬಗಳು ಈ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಆದರೂ ಕರಪತ್ರ ಕೊಡುವ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಎಲ್ಲರ ಬೆಂಬಲವಿದೆ ಎಂಬ ಸುಳ್ಳು ಹರಡಲಾಗುತ್ತಿದೆ. ಇದು ಆಕ್ಷೇಪಾರ್ಹ ಸಂಗತಿಯಾಗಿದೆ ಎಂದು ಆಜಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಎಡಪಂಥೀಯ ಸ್ವತಂತ್ರ ಶಾಸಕರಾದ ಕರತ್ ರಜಾಕ್ ಮತ್ತು ಸುನ್ನಿ ಯುವ ಚಳವಳಿಯ ರಾಜ್ಯ ಕಾರ್ಯದರ್ಶಿ ನಾಸರ್ ಫೈಜಿ ಕೂದಥೈ ಅವರಿಗೆ ಸಿಎಎ ಕರಪತ್ರ ಕೊಡುತ್ತಿರುವ ಫೋಟೊಗಳನ್ನು ಪ್ರಕಟಿಸಿರುವ ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಖಾತೆಗೆಳು ಇವರು ಕೂಡ ಬೆಂಬಲಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿವೆ.

ಫೋಟೋಗಳ ಬಗ್ಗೆ ಇವರಿಬ್ಬರನ್ನು ಪ್ರಶ್ನಿಸಿದಾಗ, ತಮ್ಮನ್ನು ಭೇಟಿ ಮಾಡಿದ ಪ್ರಚಾರಕರನ್ನು ತಡೆಯಲು ಸಾಧ್ಯವಾಗದಿದ್ದರೂ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಾವು ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಬೆಂಬಲಿಸಿದ್ದಾರೆ ಎಂದು ಹಾಕಿಕೊಂಡಿದೆ.. ಹಾಗಾಗಿ ಪೋಸ್ಟರ್‌ ಹಾಕುತ್ತಿದ್ದೇವೆ, ನಮ್ಮ ಮನೆಗಳಿಗೆ ಅವರು ಬರುವುದೇ ಬೇಡ ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಪೋಸ್ಟರ್‌ಗಳನ್ನು ಹಿಂದೂಗಳು, ಮುಸ್ಲಿಮರು ಮತ್ತು ಕ್ರೈಸ್ತರ ಮನೆಗಳಲ್ಲಿ ಹಾಕಲಾಗಿದೆ ಎಂದು ಆಜಾದ್ ಹೇಳಿದ್ದಾರೆ. ನಾವು ಅವರು ಸ್ನೇಹಿತರಾಗಿದ್ದರೂ ಸಹ ನಂಬಿಕೆಯ ದೃಷ್ಟಿಯಿಂದ ಪೋಸ್ಟರ್‌ಗಳನ್ನು ಅಂಟಿಸುವ ಮೊದಲು ನಾವು ಅವರ ಅನುಮತಿಯನ್ನು ಪಡೆಯುತ್ತೇವೆ ಎಂದು ಅಜಾದ್‌ ಹೇಳಿದ್ದಾರೆ.

ನಾನು ಸಿಎಎಯನ್ನು ಬೆಂಬಲಿಸುತ್ತೇನೆ ಎಂದು ನಂಬುವಂತೆ ಜನರನ್ನು ದಾರಿ ತಪ್ಪಿಸಲು ಬಿಜೆಪಿ ಕಾರ್ಯಕರ್ತರು ನನ್ನ ಚಿತ್ರವನ್ನು ಪ್ರಸಾರ ಮಾಡುತ್ತಾರೆಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಶಾಸಕ ರಜಾಕ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ. “ನಾನು ಎಲ್ಲರನ್ನು ಸ್ವಾಗತಿಸುವ ರೀತಿಯಲ್ಲೇ ಅವರನ್ನು ಸಹ ಸ್ವಾಗತಿಸಿದೆ. ಆದರೆ ಮುಸ್ಲಿಮರು ಮತ್ತು ಎಡಪಂಥೀಯರು ಸಿಎಎಗೆ ಬೆಂಬಲ ನೀಡುತ್ತಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುವಂತಹ ಚಿತ್ರಗಳನ್ನು ಪ್ರಸಾರ ಮಾಡಿರುವುದು ಸರಿಯಲ್ಲ” ಎಂದು ರಜಾಕ್ ಹೇಳಿದ್ದಾರೆ.

ಆಧಾರ: ದಿವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...