Homeಚಳವಳಿಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

ಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

- Advertisement -
- Advertisement -

“ಈ ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ನಮಗೆ ಸಂಪೂರ್ಣವಾಗಿ ತಿಳಿದಿದೆ. ಇದಕ್ಕೆ ಬೆಂಬಲ ಕೊಡಿ ಎಂದು ವಿವರಿಸಲು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಇಲ್ಲಿಗೆ ಬರಬೇಕಾಗಿಲ್ಲ”.

ಕೇರಳದ ಹಲವು ಮನೆಗಳ ಮುಂದೆ ಈ ರೀತಿಯ ಪೋಸ್ಟರ್‌ಗಳನ್ನು ಹಚ್ಚಲಾಗಿದ್ದು  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಗೆ ಭಾರೀ ಪ್ರತಿರೋಧ ವ್ಯಕ್ತಪಡಿಸಿವೆ.

ವಿವಾದಾತ್ಮಕ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಂತೆ, ಬಿಜೆಪಿಯು ಜನರ ಬೆಂಬಲವನ್ನು ಪಡೆಯಲು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಮನೆ ಮನೆ ಪ್ರಚಾರವು ಒಂದು. ಅದರೆ  ಕೇರಳದ ಕೋಳಿಕೋಡ್ ಜಿಲ್ಲೆಯ ಕರಡಿ ಗ್ರಾಮವೊಂದರಲ್ಲೇ ಸುಮಾರು 350 ಮನೆಗಳು ಬಿಜೆಪಿಗರಿಗೆ ಪ್ರವೇಶವಿಲ್ಲ ಎಂದು ತಿಳಿಸುವ ಪೋಸ್ಟರ್‌ಗಳನ್ನು ಹಾಕಿವೆ. ಪೋಸ್ಟರ್‌ಗಳು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಕರೆ ನೀಡಿವೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಯುವ ವಿಭಾಗವಾದ ಮುಸ್ಲಿಂ ಯೂತ್ ಲೀಗ್‌ನ ಸ್ಥಳೀಯ ಕಾರ್ಯಕರ್ತ ಆಜಾದ್ ಕರಡಿ ಮಾತನಾಡಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಿರುಪುಸ್ತಕದಲ್ಲಿ “ಬಡ ಮುಸ್ಲಿಂ ಪುರುಷರ ಮತ್ತು ಮಹಿಳೆಯರು ಸಿಎಎ ಪರವಿದ್ದಾರೆ ಎಂಬ ಮಾಹಿತಿ ಪ್ರಕಟಿಸಿದೆ. ಹಾಗಾಗಿ ಜನರಿಗೆ ಸತ್ಯ ತಿಳಿಸಲು ನಾವು ಪೋಸ್ಟರ್‌ ಅಭಿಯಾನ ಆರಂಭಿಸಿದ್ದೇವೆ ಎಂದಿದ್ದಾರೆ.

ಎಲ್ಲಾ ಸಮುದಾಯಗಳ ಕುಟುಂಬಗಳು ಸಿಎಎ ಬೆಂಬಲಿಸುತ್ತಿವೆ ಎಂಬ ತಪ್ಪು ಸಂದೇಶವನ್ನು ಬಿಜೆಪಿಯವರು ಹರಡುತ್ತಿದ್ದಾರೆ. ಹಲವಾರು ಕುಟುಂಬಗಳು ಈ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಆದರೂ ಕರಪತ್ರ ಕೊಡುವ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಎಲ್ಲರ ಬೆಂಬಲವಿದೆ ಎಂಬ ಸುಳ್ಳು ಹರಡಲಾಗುತ್ತಿದೆ. ಇದು ಆಕ್ಷೇಪಾರ್ಹ ಸಂಗತಿಯಾಗಿದೆ ಎಂದು ಆಜಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಎಡಪಂಥೀಯ ಸ್ವತಂತ್ರ ಶಾಸಕರಾದ ಕರತ್ ರಜಾಕ್ ಮತ್ತು ಸುನ್ನಿ ಯುವ ಚಳವಳಿಯ ರಾಜ್ಯ ಕಾರ್ಯದರ್ಶಿ ನಾಸರ್ ಫೈಜಿ ಕೂದಥೈ ಅವರಿಗೆ ಸಿಎಎ ಕರಪತ್ರ ಕೊಡುತ್ತಿರುವ ಫೋಟೊಗಳನ್ನು ಪ್ರಕಟಿಸಿರುವ ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಖಾತೆಗೆಳು ಇವರು ಕೂಡ ಬೆಂಬಲಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿವೆ.

ಫೋಟೋಗಳ ಬಗ್ಗೆ ಇವರಿಬ್ಬರನ್ನು ಪ್ರಶ್ನಿಸಿದಾಗ, ತಮ್ಮನ್ನು ಭೇಟಿ ಮಾಡಿದ ಪ್ರಚಾರಕರನ್ನು ತಡೆಯಲು ಸಾಧ್ಯವಾಗದಿದ್ದರೂ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಾವು ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಬೆಂಬಲಿಸಿದ್ದಾರೆ ಎಂದು ಹಾಕಿಕೊಂಡಿದೆ.. ಹಾಗಾಗಿ ಪೋಸ್ಟರ್‌ ಹಾಕುತ್ತಿದ್ದೇವೆ, ನಮ್ಮ ಮನೆಗಳಿಗೆ ಅವರು ಬರುವುದೇ ಬೇಡ ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಪೋಸ್ಟರ್‌ಗಳನ್ನು ಹಿಂದೂಗಳು, ಮುಸ್ಲಿಮರು ಮತ್ತು ಕ್ರೈಸ್ತರ ಮನೆಗಳಲ್ಲಿ ಹಾಕಲಾಗಿದೆ ಎಂದು ಆಜಾದ್ ಹೇಳಿದ್ದಾರೆ. ನಾವು ಅವರು ಸ್ನೇಹಿತರಾಗಿದ್ದರೂ ಸಹ ನಂಬಿಕೆಯ ದೃಷ್ಟಿಯಿಂದ ಪೋಸ್ಟರ್‌ಗಳನ್ನು ಅಂಟಿಸುವ ಮೊದಲು ನಾವು ಅವರ ಅನುಮತಿಯನ್ನು ಪಡೆಯುತ್ತೇವೆ ಎಂದು ಅಜಾದ್‌ ಹೇಳಿದ್ದಾರೆ.

ನಾನು ಸಿಎಎಯನ್ನು ಬೆಂಬಲಿಸುತ್ತೇನೆ ಎಂದು ನಂಬುವಂತೆ ಜನರನ್ನು ದಾರಿ ತಪ್ಪಿಸಲು ಬಿಜೆಪಿ ಕಾರ್ಯಕರ್ತರು ನನ್ನ ಚಿತ್ರವನ್ನು ಪ್ರಸಾರ ಮಾಡುತ್ತಾರೆಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಶಾಸಕ ರಜಾಕ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ. “ನಾನು ಎಲ್ಲರನ್ನು ಸ್ವಾಗತಿಸುವ ರೀತಿಯಲ್ಲೇ ಅವರನ್ನು ಸಹ ಸ್ವಾಗತಿಸಿದೆ. ಆದರೆ ಮುಸ್ಲಿಮರು ಮತ್ತು ಎಡಪಂಥೀಯರು ಸಿಎಎಗೆ ಬೆಂಬಲ ನೀಡುತ್ತಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುವಂತಹ ಚಿತ್ರಗಳನ್ನು ಪ್ರಸಾರ ಮಾಡಿರುವುದು ಸರಿಯಲ್ಲ” ಎಂದು ರಜಾಕ್ ಹೇಳಿದ್ದಾರೆ.

ಆಧಾರ: ದಿವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...