Homeಮುಖಪುಟಭಯದ ವಾತಾವರಣ ಸೃಷ್ಟಿಸಬೇಡಿ: 'ಇಡಿ'ಗೆ ಸುಪ್ರೀಂ ತಾಕೀತು

ಭಯದ ವಾತಾವರಣ ಸೃಷ್ಟಿಸಬೇಡಿ: ‘ಇಡಿ’ಗೆ ಸುಪ್ರೀಂ ತಾಕೀತು

- Advertisement -
- Advertisement -

“ಭಯದ ವಾತಾವರಣವನ್ನು ಸೃಷ್ಟಿಸಬೇಡಿ” ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸುಪ್ರೀಂ ಕೋರ್ಟ್ ಮಂಗಳವಾರ ತಾಕೀತು ಮಾಡಿದೆ.

ಛತ್ತೀಸಗಡ ಮೂಲದ ವ್ಯಕ್ತಿಗಳಿಬ್ಬರು, ಇಡಿ ತನಿಖೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಪ್ರಕರಣದಲ್ಲಿ ತಮ್ಮನ್ನೂ ಶಕ್ತಿದಾರರನ್ನಾಗಿಸುವಂತೆ ಕೋರಿ ರಾಜ್ಯ ಸರ್ಕಾರವೂ ಅರ್ಜಿ ಸಲ್ಲಿಸಿತ್ತು, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಆಹ್ವಾನುದ್ದೀಷ್ ಅಮಾನುಲ್ಲಾ ಅವರ ದ್ವಿಸದಸ್ಯ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿತು.

”ರಾಜ್ಯದಲ್ಲಿ 22,000 ಕೋಟಿ ಮೊತ್ತದ ಅಬಕಾರಿ ಹಗರಣ ನಡೆದಿದೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಭೂಪೇಶ್ ಬಜೆಲ್ ಅವರನ್ನು ಸಿಲುಕಿಸಲು ಇಡಿ ಕುತಂತ್ರ ನಡೆಸುತ್ತಿದೆ. ಇದಕ್ಕಾಗಿ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರಿಗೆ ಬಂಧನದ ಬೆದರಿಕೆ ಒಡ್ಡುತ್ತಿದೆ” ಎಂದು ಛತ್ತಿಸಗಡ ಸರ್ಕಾರ ಆರೋಪಿಸಿದೆ.

ರಾಜ್ಯ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್‌, ”ಚುನಾವಣೆ ಸಮೀಪಿಸುತ್ತಿರುವ ಕಾರಣದಿಂದ ಈ ರೀತಿಯ ಬೆದರಿಕೆ ತಂತ್ರಗಳನ್ನು ಅನುಸರಿಸಲಾಗುತ್ತಿದೆ. ತನಿಖಾ ಸಂಸ್ಥೆಯ ಈ ನಡೆ ಆಘಾತಕಾರಿಯಾದುದು ಸಂಸ್ಥೆಯು ಹದ್ದು ಮೀರಿ ವರ್ತಿಸುತ್ತಿದೆ” ಎಂದು ಹೇಳಿದರು.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಬಿಲ್‌ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ಜಾರಿ ನಿರ್ದೇಶನಾಲಯವು ರಾಜ್ಯದಲ್ಲಿ ನಡೆದಿರುವ ಹಗರಣದ ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದರು.

ಈ ವೇಳೆ ನ್ಯಾಯಪೀಠ, ”ಭಯದ ವಾತಾವರಣ ಸೃಷ್ಟಿಸಬೇಡಿ, ನಿಮ್ಮ (ಇ.ಡಿ) ಈ ಬಗೆಯ ವರ್ತನೆಯಿಂದಾಗಿ ನಿಜವಾದ ಪ್ರಕರಣವನ್ನೂ ಸಂಶಯದಿಂದಲೇ ನೋಡುವಂತಾಗುತ್ತದೆ” ಎಂದು ತನಿಖಾ ಸಂಸ್ಥೆಗೆ ಮೌಖಿಕ ಎಚ್ಚರಿಕೆ ನೀಡಿತು.

”ಈ ಏಜೆನ್ಸಿಗಳಲ್ಲಿ ಸಾಮಾನ್ಯ ಜನರಿಗೆ ಸ್ವಲ್ಪ ವಿಶ್ವಾಸವಿರಲಿ. ಇಲ್ಲದಿದ್ದರೆ, ಒಂದು ಪ್ರಾಮಾಣಿಕ ಕಾರಣವೂ ಶಂಕಿತವಾಗುತ್ತದೆ” ಎಂದು ಪೀಠವು ಇಡಿ ವಕೀಲರಿಗೆ ಹೇಳಿದೆ.

”ಇ.ಡಿ ಅಧಿಕಾರಿಗಳು ತಮ್ಮ ಜೊತೆಗೆ ಕುಟುಂಬದ ಸದಸ್ಯರನ್ನೂ ಬೆದರಿಸುತ್ತಿರುವುದಾಗಿ ಅಬಕಾರಿ ಇಲಾಖೆಯ ಅಧಿಕಾರಿಗಳೇ ದೂರಿದ್ದಾರೆ. ತನಿಖೆ ವೇಳೆ ತಮಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿರುವುದಾಗಿಯೂ ಅವರು ಆರೋಪಿಸಿದ್ದಾರೆ. ಇ.ಡಿ ಕೈಗೊಂಡಿರುವ ಕ್ರಮದಿಂದಾಗಿ ಆಡಳಿತವು ನಿಷ್ಕ್ರಿಯಗೊಂಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆ ತಲೆದೋರಿದೆ” ಎಂದು ರಾಜ್ಯ ಸರ್ಕಾರ ಅರ್ಜಿಯಲ್ಲಿ ದೂರಿದೆ.

ಮುಖ್ಯಮಂತ್ರಿ ಹಾಗೂ ರಾಜ್ಯದ ಇತರ ಉನ್ನತ ಅಧಿಕಾರಿಗಳನ್ನು ಪ್ರಕರಣದಲ್ಲಿ ಸಿಲುಕಿಸುವ ಉದ್ದೇಶದಿಂದ ತಾವು ಸಿದ್ಧಪಡಿಸಿರುವ ಹೇಳಿಕೆಗೆ ಸಹಿ ಮಾಡುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಸಹಿ ಮಾಡದಿದ್ದರೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಅವರು ಅಬಕಾರಿ ಅಧಿಕಾರಿಗಳಿಗೆ ಹೆದರಿಸಿದ್ದಾರೆ. ಪ್ರಭಾವಿ ರಾಜಕೀಯ ಮುಖಂಡರ ಆಣತಿಯಂತೆ ಇಡಿ ಕೆಲಸ ಮಾಡುತ್ತಿದೆ. ತನಿಖೆಯು ಪಕ್ಷಪಾತದಿಂದ ಕೂಡಿದೆ” ಎಂದೂ ರಾಜ್ಯ ಸರ್ಕಾರ ಆರೋಪಿಸಿದೆ.

ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯವು ಜಾರಿ ನಿರ್ದೇಶನಾಯಲಕ್ಕೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...