Homeಮುಖಪುಟ'ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..'; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

‘ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..’; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನುಬದ್ದ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರಂಭವಾದ ರೈತರ ಪ್ರತಿಭಟನೆಯು ಪಂಜಾಬ್-ಹರಿಯಾಣ ಗಡಿಯ ಶಂಭು ಎಂಬಲ್ಲಿ ಅಶ್ರುವಾಯು ಸಿಡಿಸುವುದರೊಂದಿಗೆ ಘರ್ಷಣೆಗೆ ಕಾರಣವಾಗಿದೆ. 2020/21ರಲ್ಲಿ ಕೇಂದ್ರ ಸರ್ಕಾರದ ಮಾರಕ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಪ್ರಮುಖರಾಗಿರುವ ರಾಕೇಶ್ ಟಿಕಾಯತ್ ‘ಚಲೋ ದೆಹಲಿ’ ಮೆರವಣಿಗೆಗೆ  ಬೆಂಬಲಿಸಿದ್ದು, ರೈತರಿಗೆ ತೊಂದರೆ ನೀಡದಂತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಹಲವಾರು ರೈತ ಸಂಘಗಳಿವೆ; ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ… ದೆಹಲಿಗೆ ಪಾದಯಾತ್ರೆ ಮಾಡುವ ರೈತರಿಗೆ ಸರ್ಕಾರ ಸಮಸ್ಯೆ ಸೃಷ್ಟಿಸಿದರೆ, ನಾವು ಅವರಿಂದ ಬಹಳ ದೂರವಿಲ್ಲ, ನಾವು ಅವರ ಬೆಂಬಲದಲ್ಲಿದ್ದೇವೆ…’ ಎಂದು ಹೇಳಿದ್ದಾರೆ.

ಟಿಕಾಯತ್ ಅವರು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಸ್ಥಾಪಿಸಿದ ಉತ್ತರ ಪ್ರದೇಶ ಮೂಲದ ಸಂಸ್ಥೆಯಾದ ಭಾರತೀಯ ಕಿಸಾನ್ ಯೂನಿಯನ್‌ನ ಮುಖ್ಯಸ್ಥರಾಗಿದ್ದಾರೆ. ಈ ತಿಂಗಳು ಸಿಂಗ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲಾಗಿದೆ.

ಬಿಕೆಯು ದೇಶದ ದೊಡ್ಡ ರೈತ ಒಕ್ಕೂಟಗಳಲ್ಲಿ ಒಂದಾಗಿದ್ದು, ಇಂದು ಮಧ್ಯಾಹ್ನ ಪ್ರಾರಂಭವಾದ ಆಂದೋಲನದಲ್ಲಿ ಅದು ಸೇರಿಕೊಂಡರೆ, ಕೇಂದ್ರವು ಎದುರಿಸುತ್ತಿರುವ ಪ್ರತಿಭಟನೆ ಒತ್ತಡವು ಸಹಜವಾಗಿಯೆ ಹೆಚ್ಚಾಗುತ್ತದೆ.

ಬಿಕೆಯು ರಾಷ್ಟ್ರೀಯ ಅಧ್ಯಕ್ಷರಾದ ಟಿಕಾಯತ್ ಅವರ ಸಹೋದರ ನರೇಶ್ ಟಿಕಾಯಿತ್ ಅವರು ರೈತರೊಂದಿಗೆ ಕುಳಿತು ಮಾತುಕತೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ‘ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ… ಸರ್ಕಾರವು ಚರ್ಚೆಗಳನ್ನು ನಡೆಸಬೇಕು; ಜತೆಗೆ ರೈತರಿಗೆ ಗೌರವವನ್ನು ನೀಡಬೇಕು… ಈ ಸಮಸ್ಯೆಯನ್ನು ಪರಿಹರಿಸಲು ಯೋಚಿಸುವ ಜತೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಕೇಶ್ ಟಿಕಾಯತ್ ರೈತರ ಬೇಡಿಕೆಗಳಿಗೆ ಒತ್ತಾಯಿಸಿ ಫೆಬ್ರವರಿ 16 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಕಳೆದ ವರ್ಷ ಜೂನ್‌ನಲ್ಲಿ, ಕನಿಷ್ಠ ಬೆಂಬಲ ಬೆಲೆಗಳ ಮೇಲೆ ಕಾನೂನು ಖಾತರಿಯ ಬೇಡಿಕೆಯನ್ನು ಪರಿಹರಿಸದಿದ್ದರೆ, ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕಿಂತ ದೊಡ್ಡ ಆಂದೋಲನ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

‘ದೆಹಲಿಯಲ್ಲಿನ ಆಂದೋಲನಕ್ಕಿಂತ ದೊಡ್ಡ ಆಂದೋಲನವನ್ನು (ಈಗ ರದ್ದುಪಡಿಸಿದ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ) ಎಂಎಸ್‌ಪಿಗಾಗಿ ಕೈಗೊಳ್ಳಬೇಕಾಗುತ್ತದೆ’ ಎಂದು ಅವರು ಹರಿಯಾಣದ ಕರ್ನಾಲ್‌ನಲ್ಲಿ ಹೇಳಿದರು. ರೈತರ ‘ದೆಹಲಿ ಚಲೋ’ 2.0 ಇಂದು ಶಂಭು ಗಡಿ ಕ್ರಾಸಿಂಗ್‌ನಲ್ಲಿ ಅಶೃವಾಯು ಸಿಡಿಸುವುದರೊಂದಿಗೆ ಪ್ರಾರಂಭವಾಯಿತು.

ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಪ್ರಮುಖವಾದದ್ದು, ಮಾರುಕಟ್ಟೆಯ ಅನಿಶ್ಚಿತತೆಯನ್ನು ಎದುರಿಸುತ್ತಿರುವ ರೈತರಿಗೆ ನಿರ್ಣಾಯಕ ಆರ್ಥಿಕ ಜೀವನಾಡಿಯಾಗಿರುವ ಬೆಳೆಗಳಿಗೆ ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕು ಎಂಬುದಾಗಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಪ್ರತಿಭಟನೆಯ ಬೇಡಿಕೆಗಳಲ್ಲಿ ಎಂಎಸ್‌ಪಿಗೆ ಕಾನೂನು ಬೆಂಬಲವೂ ಸೇರಿತ್ತು.

ಇತರ ಪ್ರಮುಖ ಬೇಡಿಕೆಗಳೆಂದರೆ 2020ರ ವಿದ್ಯುತ್ ಕಾಯಿದೆಯನ್ನು ರದ್ದುಗೊಳಿಸುವುದು, ಯುಪಿಯ ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ಕೊನೆಯ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

ರೈತರ ಬೇಡಿಕೆಗಳ ಕುರಿತು ಚರ್ಚಿಸಲು ಕಿರಿಯ ಕೃಷಿ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಇಬ್ಬರು ಕೇಂದ್ರ ಸಚಿವರು ಸೋಮವಾರ ತಡರಾತ್ರಿ ರೈತ ಮುಖಂಡರನ್ನು ಭೇಟಿ ಮಾಡಿದರು. ಕೆಲವು ಷರತ್ತುಗಳಿಗೆ ಕೇಂದ್ರ ಒಪ್ಪಿದೆಯಾದರೂ, ವಿದ್ಯುತ್ ಕಾಯ್ದೆಯನ್ನು ರದ್ದುಗೊಳಿಸುವ ಬಗ್ಗೆ ಮತ್ತು ಲಖಿಂಪುರ ಖೇರಿಯಲ್ಲಿ ಸತ್ತ ರೈತರಿಗೆ ಪರಿಹಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ; ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....