Homeಮುಖಪುಟ'ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..'; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

‘ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..’; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನುಬದ್ದ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರಂಭವಾದ ರೈತರ ಪ್ರತಿಭಟನೆಯು ಪಂಜಾಬ್-ಹರಿಯಾಣ ಗಡಿಯ ಶಂಭು ಎಂಬಲ್ಲಿ ಅಶ್ರುವಾಯು ಸಿಡಿಸುವುದರೊಂದಿಗೆ ಘರ್ಷಣೆಗೆ ಕಾರಣವಾಗಿದೆ. 2020/21ರಲ್ಲಿ ಕೇಂದ್ರ ಸರ್ಕಾರದ ಮಾರಕ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಪ್ರಮುಖರಾಗಿರುವ ರಾಕೇಶ್ ಟಿಕಾಯತ್ ‘ಚಲೋ ದೆಹಲಿ’ ಮೆರವಣಿಗೆಗೆ  ಬೆಂಬಲಿಸಿದ್ದು, ರೈತರಿಗೆ ತೊಂದರೆ ನೀಡದಂತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಹಲವಾರು ರೈತ ಸಂಘಗಳಿವೆ; ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ… ದೆಹಲಿಗೆ ಪಾದಯಾತ್ರೆ ಮಾಡುವ ರೈತರಿಗೆ ಸರ್ಕಾರ ಸಮಸ್ಯೆ ಸೃಷ್ಟಿಸಿದರೆ, ನಾವು ಅವರಿಂದ ಬಹಳ ದೂರವಿಲ್ಲ, ನಾವು ಅವರ ಬೆಂಬಲದಲ್ಲಿದ್ದೇವೆ…’ ಎಂದು ಹೇಳಿದ್ದಾರೆ.

ಟಿಕಾಯತ್ ಅವರು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಸ್ಥಾಪಿಸಿದ ಉತ್ತರ ಪ್ರದೇಶ ಮೂಲದ ಸಂಸ್ಥೆಯಾದ ಭಾರತೀಯ ಕಿಸಾನ್ ಯೂನಿಯನ್‌ನ ಮುಖ್ಯಸ್ಥರಾಗಿದ್ದಾರೆ. ಈ ತಿಂಗಳು ಸಿಂಗ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲಾಗಿದೆ.

ಬಿಕೆಯು ದೇಶದ ದೊಡ್ಡ ರೈತ ಒಕ್ಕೂಟಗಳಲ್ಲಿ ಒಂದಾಗಿದ್ದು, ಇಂದು ಮಧ್ಯಾಹ್ನ ಪ್ರಾರಂಭವಾದ ಆಂದೋಲನದಲ್ಲಿ ಅದು ಸೇರಿಕೊಂಡರೆ, ಕೇಂದ್ರವು ಎದುರಿಸುತ್ತಿರುವ ಪ್ರತಿಭಟನೆ ಒತ್ತಡವು ಸಹಜವಾಗಿಯೆ ಹೆಚ್ಚಾಗುತ್ತದೆ.

ಬಿಕೆಯು ರಾಷ್ಟ್ರೀಯ ಅಧ್ಯಕ್ಷರಾದ ಟಿಕಾಯತ್ ಅವರ ಸಹೋದರ ನರೇಶ್ ಟಿಕಾಯಿತ್ ಅವರು ರೈತರೊಂದಿಗೆ ಕುಳಿತು ಮಾತುಕತೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ‘ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ… ಸರ್ಕಾರವು ಚರ್ಚೆಗಳನ್ನು ನಡೆಸಬೇಕು; ಜತೆಗೆ ರೈತರಿಗೆ ಗೌರವವನ್ನು ನೀಡಬೇಕು… ಈ ಸಮಸ್ಯೆಯನ್ನು ಪರಿಹರಿಸಲು ಯೋಚಿಸುವ ಜತೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಕೇಶ್ ಟಿಕಾಯತ್ ರೈತರ ಬೇಡಿಕೆಗಳಿಗೆ ಒತ್ತಾಯಿಸಿ ಫೆಬ್ರವರಿ 16 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಕಳೆದ ವರ್ಷ ಜೂನ್‌ನಲ್ಲಿ, ಕನಿಷ್ಠ ಬೆಂಬಲ ಬೆಲೆಗಳ ಮೇಲೆ ಕಾನೂನು ಖಾತರಿಯ ಬೇಡಿಕೆಯನ್ನು ಪರಿಹರಿಸದಿದ್ದರೆ, ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕಿಂತ ದೊಡ್ಡ ಆಂದೋಲನ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

‘ದೆಹಲಿಯಲ್ಲಿನ ಆಂದೋಲನಕ್ಕಿಂತ ದೊಡ್ಡ ಆಂದೋಲನವನ್ನು (ಈಗ ರದ್ದುಪಡಿಸಿದ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ) ಎಂಎಸ್‌ಪಿಗಾಗಿ ಕೈಗೊಳ್ಳಬೇಕಾಗುತ್ತದೆ’ ಎಂದು ಅವರು ಹರಿಯಾಣದ ಕರ್ನಾಲ್‌ನಲ್ಲಿ ಹೇಳಿದರು. ರೈತರ ‘ದೆಹಲಿ ಚಲೋ’ 2.0 ಇಂದು ಶಂಭು ಗಡಿ ಕ್ರಾಸಿಂಗ್‌ನಲ್ಲಿ ಅಶೃವಾಯು ಸಿಡಿಸುವುದರೊಂದಿಗೆ ಪ್ರಾರಂಭವಾಯಿತು.

ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಪ್ರಮುಖವಾದದ್ದು, ಮಾರುಕಟ್ಟೆಯ ಅನಿಶ್ಚಿತತೆಯನ್ನು ಎದುರಿಸುತ್ತಿರುವ ರೈತರಿಗೆ ನಿರ್ಣಾಯಕ ಆರ್ಥಿಕ ಜೀವನಾಡಿಯಾಗಿರುವ ಬೆಳೆಗಳಿಗೆ ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕು ಎಂಬುದಾಗಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಪ್ರತಿಭಟನೆಯ ಬೇಡಿಕೆಗಳಲ್ಲಿ ಎಂಎಸ್‌ಪಿಗೆ ಕಾನೂನು ಬೆಂಬಲವೂ ಸೇರಿತ್ತು.

ಇತರ ಪ್ರಮುಖ ಬೇಡಿಕೆಗಳೆಂದರೆ 2020ರ ವಿದ್ಯುತ್ ಕಾಯಿದೆಯನ್ನು ರದ್ದುಗೊಳಿಸುವುದು, ಯುಪಿಯ ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ಕೊನೆಯ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

ರೈತರ ಬೇಡಿಕೆಗಳ ಕುರಿತು ಚರ್ಚಿಸಲು ಕಿರಿಯ ಕೃಷಿ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಇಬ್ಬರು ಕೇಂದ್ರ ಸಚಿವರು ಸೋಮವಾರ ತಡರಾತ್ರಿ ರೈತ ಮುಖಂಡರನ್ನು ಭೇಟಿ ಮಾಡಿದರು. ಕೆಲವು ಷರತ್ತುಗಳಿಗೆ ಕೇಂದ್ರ ಒಪ್ಪಿದೆಯಾದರೂ, ವಿದ್ಯುತ್ ಕಾಯ್ದೆಯನ್ನು ರದ್ದುಗೊಳಿಸುವ ಬಗ್ಗೆ ಮತ್ತು ಲಖಿಂಪುರ ಖೇರಿಯಲ್ಲಿ ಸತ್ತ ರೈತರಿಗೆ ಪರಿಹಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ; ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...