Homeಮುಖಪುಟ'ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..'; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

‘ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..’; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನುಬದ್ದ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರಂಭವಾದ ರೈತರ ಪ್ರತಿಭಟನೆಯು ಪಂಜಾಬ್-ಹರಿಯಾಣ ಗಡಿಯ ಶಂಭು ಎಂಬಲ್ಲಿ ಅಶ್ರುವಾಯು ಸಿಡಿಸುವುದರೊಂದಿಗೆ ಘರ್ಷಣೆಗೆ ಕಾರಣವಾಗಿದೆ. 2020/21ರಲ್ಲಿ ಕೇಂದ್ರ ಸರ್ಕಾರದ ಮಾರಕ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಪ್ರಮುಖರಾಗಿರುವ ರಾಕೇಶ್ ಟಿಕಾಯತ್ ‘ಚಲೋ ದೆಹಲಿ’ ಮೆರವಣಿಗೆಗೆ  ಬೆಂಬಲಿಸಿದ್ದು, ರೈತರಿಗೆ ತೊಂದರೆ ನೀಡದಂತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಹಲವಾರು ರೈತ ಸಂಘಗಳಿವೆ; ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ… ದೆಹಲಿಗೆ ಪಾದಯಾತ್ರೆ ಮಾಡುವ ರೈತರಿಗೆ ಸರ್ಕಾರ ಸಮಸ್ಯೆ ಸೃಷ್ಟಿಸಿದರೆ, ನಾವು ಅವರಿಂದ ಬಹಳ ದೂರವಿಲ್ಲ, ನಾವು ಅವರ ಬೆಂಬಲದಲ್ಲಿದ್ದೇವೆ…’ ಎಂದು ಹೇಳಿದ್ದಾರೆ.

ಟಿಕಾಯತ್ ಅವರು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಸ್ಥಾಪಿಸಿದ ಉತ್ತರ ಪ್ರದೇಶ ಮೂಲದ ಸಂಸ್ಥೆಯಾದ ಭಾರತೀಯ ಕಿಸಾನ್ ಯೂನಿಯನ್‌ನ ಮುಖ್ಯಸ್ಥರಾಗಿದ್ದಾರೆ. ಈ ತಿಂಗಳು ಸಿಂಗ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲಾಗಿದೆ.

ಬಿಕೆಯು ದೇಶದ ದೊಡ್ಡ ರೈತ ಒಕ್ಕೂಟಗಳಲ್ಲಿ ಒಂದಾಗಿದ್ದು, ಇಂದು ಮಧ್ಯಾಹ್ನ ಪ್ರಾರಂಭವಾದ ಆಂದೋಲನದಲ್ಲಿ ಅದು ಸೇರಿಕೊಂಡರೆ, ಕೇಂದ್ರವು ಎದುರಿಸುತ್ತಿರುವ ಪ್ರತಿಭಟನೆ ಒತ್ತಡವು ಸಹಜವಾಗಿಯೆ ಹೆಚ್ಚಾಗುತ್ತದೆ.

ಬಿಕೆಯು ರಾಷ್ಟ್ರೀಯ ಅಧ್ಯಕ್ಷರಾದ ಟಿಕಾಯತ್ ಅವರ ಸಹೋದರ ನರೇಶ್ ಟಿಕಾಯಿತ್ ಅವರು ರೈತರೊಂದಿಗೆ ಕುಳಿತು ಮಾತುಕತೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ‘ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ… ಸರ್ಕಾರವು ಚರ್ಚೆಗಳನ್ನು ನಡೆಸಬೇಕು; ಜತೆಗೆ ರೈತರಿಗೆ ಗೌರವವನ್ನು ನೀಡಬೇಕು… ಈ ಸಮಸ್ಯೆಯನ್ನು ಪರಿಹರಿಸಲು ಯೋಚಿಸುವ ಜತೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಕೇಶ್ ಟಿಕಾಯತ್ ರೈತರ ಬೇಡಿಕೆಗಳಿಗೆ ಒತ್ತಾಯಿಸಿ ಫೆಬ್ರವರಿ 16 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಕಳೆದ ವರ್ಷ ಜೂನ್‌ನಲ್ಲಿ, ಕನಿಷ್ಠ ಬೆಂಬಲ ಬೆಲೆಗಳ ಮೇಲೆ ಕಾನೂನು ಖಾತರಿಯ ಬೇಡಿಕೆಯನ್ನು ಪರಿಹರಿಸದಿದ್ದರೆ, ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕಿಂತ ದೊಡ್ಡ ಆಂದೋಲನ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

‘ದೆಹಲಿಯಲ್ಲಿನ ಆಂದೋಲನಕ್ಕಿಂತ ದೊಡ್ಡ ಆಂದೋಲನವನ್ನು (ಈಗ ರದ್ದುಪಡಿಸಿದ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ) ಎಂಎಸ್‌ಪಿಗಾಗಿ ಕೈಗೊಳ್ಳಬೇಕಾಗುತ್ತದೆ’ ಎಂದು ಅವರು ಹರಿಯಾಣದ ಕರ್ನಾಲ್‌ನಲ್ಲಿ ಹೇಳಿದರು. ರೈತರ ‘ದೆಹಲಿ ಚಲೋ’ 2.0 ಇಂದು ಶಂಭು ಗಡಿ ಕ್ರಾಸಿಂಗ್‌ನಲ್ಲಿ ಅಶೃವಾಯು ಸಿಡಿಸುವುದರೊಂದಿಗೆ ಪ್ರಾರಂಭವಾಯಿತು.

ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಪ್ರಮುಖವಾದದ್ದು, ಮಾರುಕಟ್ಟೆಯ ಅನಿಶ್ಚಿತತೆಯನ್ನು ಎದುರಿಸುತ್ತಿರುವ ರೈತರಿಗೆ ನಿರ್ಣಾಯಕ ಆರ್ಥಿಕ ಜೀವನಾಡಿಯಾಗಿರುವ ಬೆಳೆಗಳಿಗೆ ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕು ಎಂಬುದಾಗಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಪ್ರತಿಭಟನೆಯ ಬೇಡಿಕೆಗಳಲ್ಲಿ ಎಂಎಸ್‌ಪಿಗೆ ಕಾನೂನು ಬೆಂಬಲವೂ ಸೇರಿತ್ತು.

ಇತರ ಪ್ರಮುಖ ಬೇಡಿಕೆಗಳೆಂದರೆ 2020ರ ವಿದ್ಯುತ್ ಕಾಯಿದೆಯನ್ನು ರದ್ದುಗೊಳಿಸುವುದು, ಯುಪಿಯ ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ಕೊನೆಯ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

ರೈತರ ಬೇಡಿಕೆಗಳ ಕುರಿತು ಚರ್ಚಿಸಲು ಕಿರಿಯ ಕೃಷಿ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಇಬ್ಬರು ಕೇಂದ್ರ ಸಚಿವರು ಸೋಮವಾರ ತಡರಾತ್ರಿ ರೈತ ಮುಖಂಡರನ್ನು ಭೇಟಿ ಮಾಡಿದರು. ಕೆಲವು ಷರತ್ತುಗಳಿಗೆ ಕೇಂದ್ರ ಒಪ್ಪಿದೆಯಾದರೂ, ವಿದ್ಯುತ್ ಕಾಯ್ದೆಯನ್ನು ರದ್ದುಗೊಳಿಸುವ ಬಗ್ಗೆ ಮತ್ತು ಲಖಿಂಪುರ ಖೇರಿಯಲ್ಲಿ ಸತ್ತ ರೈತರಿಗೆ ಪರಿಹಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ; ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

0
ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ....