Homeಮುಖಪುಟ'ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..'; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

‘ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..’; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನುಬದ್ದ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರಂಭವಾದ ರೈತರ ಪ್ರತಿಭಟನೆಯು ಪಂಜಾಬ್-ಹರಿಯಾಣ ಗಡಿಯ ಶಂಭು ಎಂಬಲ್ಲಿ ಅಶ್ರುವಾಯು ಸಿಡಿಸುವುದರೊಂದಿಗೆ ಘರ್ಷಣೆಗೆ ಕಾರಣವಾಗಿದೆ. 2020/21ರಲ್ಲಿ ಕೇಂದ್ರ ಸರ್ಕಾರದ ಮಾರಕ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಪ್ರಮುಖರಾಗಿರುವ ರಾಕೇಶ್ ಟಿಕಾಯತ್ ‘ಚಲೋ ದೆಹಲಿ’ ಮೆರವಣಿಗೆಗೆ  ಬೆಂಬಲಿಸಿದ್ದು, ರೈತರಿಗೆ ತೊಂದರೆ ನೀಡದಂತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಹಲವಾರು ರೈತ ಸಂಘಗಳಿವೆ; ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ… ದೆಹಲಿಗೆ ಪಾದಯಾತ್ರೆ ಮಾಡುವ ರೈತರಿಗೆ ಸರ್ಕಾರ ಸಮಸ್ಯೆ ಸೃಷ್ಟಿಸಿದರೆ, ನಾವು ಅವರಿಂದ ಬಹಳ ದೂರವಿಲ್ಲ, ನಾವು ಅವರ ಬೆಂಬಲದಲ್ಲಿದ್ದೇವೆ…’ ಎಂದು ಹೇಳಿದ್ದಾರೆ.

ಟಿಕಾಯತ್ ಅವರು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಸ್ಥಾಪಿಸಿದ ಉತ್ತರ ಪ್ರದೇಶ ಮೂಲದ ಸಂಸ್ಥೆಯಾದ ಭಾರತೀಯ ಕಿಸಾನ್ ಯೂನಿಯನ್‌ನ ಮುಖ್ಯಸ್ಥರಾಗಿದ್ದಾರೆ. ಈ ತಿಂಗಳು ಸಿಂಗ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲಾಗಿದೆ.

ಬಿಕೆಯು ದೇಶದ ದೊಡ್ಡ ರೈತ ಒಕ್ಕೂಟಗಳಲ್ಲಿ ಒಂದಾಗಿದ್ದು, ಇಂದು ಮಧ್ಯಾಹ್ನ ಪ್ರಾರಂಭವಾದ ಆಂದೋಲನದಲ್ಲಿ ಅದು ಸೇರಿಕೊಂಡರೆ, ಕೇಂದ್ರವು ಎದುರಿಸುತ್ತಿರುವ ಪ್ರತಿಭಟನೆ ಒತ್ತಡವು ಸಹಜವಾಗಿಯೆ ಹೆಚ್ಚಾಗುತ್ತದೆ.

ಬಿಕೆಯು ರಾಷ್ಟ್ರೀಯ ಅಧ್ಯಕ್ಷರಾದ ಟಿಕಾಯತ್ ಅವರ ಸಹೋದರ ನರೇಶ್ ಟಿಕಾಯಿತ್ ಅವರು ರೈತರೊಂದಿಗೆ ಕುಳಿತು ಮಾತುಕತೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ‘ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ… ಸರ್ಕಾರವು ಚರ್ಚೆಗಳನ್ನು ನಡೆಸಬೇಕು; ಜತೆಗೆ ರೈತರಿಗೆ ಗೌರವವನ್ನು ನೀಡಬೇಕು… ಈ ಸಮಸ್ಯೆಯನ್ನು ಪರಿಹರಿಸಲು ಯೋಚಿಸುವ ಜತೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಕೇಶ್ ಟಿಕಾಯತ್ ರೈತರ ಬೇಡಿಕೆಗಳಿಗೆ ಒತ್ತಾಯಿಸಿ ಫೆಬ್ರವರಿ 16 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಕಳೆದ ವರ್ಷ ಜೂನ್‌ನಲ್ಲಿ, ಕನಿಷ್ಠ ಬೆಂಬಲ ಬೆಲೆಗಳ ಮೇಲೆ ಕಾನೂನು ಖಾತರಿಯ ಬೇಡಿಕೆಯನ್ನು ಪರಿಹರಿಸದಿದ್ದರೆ, ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕಿಂತ ದೊಡ್ಡ ಆಂದೋಲನ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

‘ದೆಹಲಿಯಲ್ಲಿನ ಆಂದೋಲನಕ್ಕಿಂತ ದೊಡ್ಡ ಆಂದೋಲನವನ್ನು (ಈಗ ರದ್ದುಪಡಿಸಿದ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ) ಎಂಎಸ್‌ಪಿಗಾಗಿ ಕೈಗೊಳ್ಳಬೇಕಾಗುತ್ತದೆ’ ಎಂದು ಅವರು ಹರಿಯಾಣದ ಕರ್ನಾಲ್‌ನಲ್ಲಿ ಹೇಳಿದರು. ರೈತರ ‘ದೆಹಲಿ ಚಲೋ’ 2.0 ಇಂದು ಶಂಭು ಗಡಿ ಕ್ರಾಸಿಂಗ್‌ನಲ್ಲಿ ಅಶೃವಾಯು ಸಿಡಿಸುವುದರೊಂದಿಗೆ ಪ್ರಾರಂಭವಾಯಿತು.

ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಪ್ರಮುಖವಾದದ್ದು, ಮಾರುಕಟ್ಟೆಯ ಅನಿಶ್ಚಿತತೆಯನ್ನು ಎದುರಿಸುತ್ತಿರುವ ರೈತರಿಗೆ ನಿರ್ಣಾಯಕ ಆರ್ಥಿಕ ಜೀವನಾಡಿಯಾಗಿರುವ ಬೆಳೆಗಳಿಗೆ ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕು ಎಂಬುದಾಗಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಪ್ರತಿಭಟನೆಯ ಬೇಡಿಕೆಗಳಲ್ಲಿ ಎಂಎಸ್‌ಪಿಗೆ ಕಾನೂನು ಬೆಂಬಲವೂ ಸೇರಿತ್ತು.

ಇತರ ಪ್ರಮುಖ ಬೇಡಿಕೆಗಳೆಂದರೆ 2020ರ ವಿದ್ಯುತ್ ಕಾಯಿದೆಯನ್ನು ರದ್ದುಗೊಳಿಸುವುದು, ಯುಪಿಯ ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ಕೊನೆಯ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

ರೈತರ ಬೇಡಿಕೆಗಳ ಕುರಿತು ಚರ್ಚಿಸಲು ಕಿರಿಯ ಕೃಷಿ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಇಬ್ಬರು ಕೇಂದ್ರ ಸಚಿವರು ಸೋಮವಾರ ತಡರಾತ್ರಿ ರೈತ ಮುಖಂಡರನ್ನು ಭೇಟಿ ಮಾಡಿದರು. ಕೆಲವು ಷರತ್ತುಗಳಿಗೆ ಕೇಂದ್ರ ಒಪ್ಪಿದೆಯಾದರೂ, ವಿದ್ಯುತ್ ಕಾಯ್ದೆಯನ್ನು ರದ್ದುಗೊಳಿಸುವ ಬಗ್ಗೆ ಮತ್ತು ಲಖಿಂಪುರ ಖೇರಿಯಲ್ಲಿ ಸತ್ತ ರೈತರಿಗೆ ಪರಿಹಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ; ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...