Homeಅಂಕಣಗಳುಎಲೆಮರೆಯಿಂದಅಮಲ್ ದೆಪ್ಪಡೇ, ಓ ಅಕಲ್ ತಪ್ಪಡೇ..: ಅಮಲು ಸೇವಿಸದಿರಿ... ಓ ಮತಿ ತಪ್ಪದಿರಿ

ಅಮಲ್ ದೆಪ್ಪಡೇ, ಓ ಅಕಲ್ ತಪ್ಪಡೇ..: ಅಮಲು ಸೇವಿಸದಿರಿ… ಓ ಮತಿ ತಪ್ಪದಿರಿ

- Advertisement -
- Advertisement -

ತುಳು ಭಾಷೆ ಅರಿಯದವರು ಈ ಶೀರ್ಷಿಕೆ ನೋಡಿ ಗಲಿಬಿಲಿಗೊಳ್ಳಬಹುದು.. ಇದು ತುಳು, ಕನ್ನಡ ಮತ್ತು ಹವ್ಯಕ ಭಾಷೆಯ ಕವಿ ನನ್ನೂರಿನ ನರ್ಕಳ ಮಾರಪ್ಪ ಶೆಟ್ಟರ ಪ್ರಸಿದ್ಧ ಕವನವೊಂದರ ಸಾಲು. ಇದು ತುಳುನಾಡಿನಲ್ಲಿ ಮದ್ಯಪಾನ ವಿರೋಧೀ ಜನಜಾಗೃತಿ ಸಭೆಗಳಲ್ಲಿ ಲಾವಣಿಯಂತೆ ಹಾಡಲ್ಪಡುತ್ತಿದ್ದ ಸಾಲುಗಳು..
ಇದರರ್ಥ “ಅಮಲು ಸೇವಿಸದಿರಿ… ಓ ಮತಿ ತಪ್ಪದಿರಿ..”

ಕರ್ನಾಟಕ ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಹೊರತಂದ `ಶತಮಾನದ ಬೆಳಕು’ ಎಂಬ ಗ್ರಂಥದಲ್ಲಿ ಇಸ್ಮತ್ ಪಜೀರ್ ಬರೆದ `ಕನ್ನಡದ ಸಹೋದರ ಭಾಷೆಗಳಲ್ಲಿ ಸಾಹಿತ್ಯದ ಬೆಳವಣಿಗೆ’ ಎಂಬ ದೀರ್ಘ ಪ್ರಬಂಧವೊಂದನ್ನು ಓದುತ್ತಿದ್ದಂತೆ ನರ್ಕಳ ಮಾರಪ್ಪ ಶೆಟ್ಟರ ಹೆಸರು ಕಣ್ಣಿಗೆ ಬಿತ್ತು. ಅಲ್ಲಿಂದ ಈ ಶೆಟ್ಟರ ಜಾಡು ಹಿಡಿದು ಹೊರಟೆ. ಕಾರಣ ನರ್ಕಳವೆಂಬುವುದು ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ನನ್ನೂರು ಕುಳಾಲು ಎಂಬಲ್ಲಿರುವ ಒಂದು ಪುಟ್ಟ ಹಳ್ಳಿ. ಶೆಟ್ಟರ ಬಗ್ಗೆ ನನ್ನೂರಿನಲ್ಲಿ ವಿಚಾರಿಸಿದಾಗ ಗೊತ್ತಿಲ್ಲ ಎಂದವರೇ ಎಲ್ಲಾ. ಸೋಜಿಗವೇನೆಂದರೆ, ಇಸ್ಮತ್ ನರ್ಕಳ ಮಾರಪ್ಪ ಶೆಟ್ಟರ ಸಾಹಿತ್ಯದ ಕುರಿತಂತೆ “ಶತಮಾನದ ಬೆಳಕು” ಎಂಬ ಗ್ರಂಥದಲ್ಲಿ ಚರ್ಚೆ ನಡೆಸಿದ್ದಾರಾದರೂ ಅವರಿಗೂ ಈ ನರ್ಕಳ ನನ್ನೂರಿನ ಪಕ್ಕದ ಹಳ್ಳಿ ಎಂದು ಗೊತ್ತೇ ಇರಲಿಲ್ಲ.

ನಾನು ಶೆಟ್ಟರ ಕುರಿತ ಹುಡುಕಾಟ ಬಿಡಲಿಲ್ಲ. ವರ್ಷಗಳ ನಂತರ ಹೊಸಕಟ್ಟಡಕ್ಕೆ ಸ್ಥಳಾಂತರಗೊಂಡ ಸಾಲೆತ್ತೂರಿನ ಸಾರ್ವಜನಿಕ ಗ್ರಂಥಾಲಯಕ್ಕೆ ನರ್ಕಳ ಮಾರಪ್ಪ ಶೆಟ್ಟರ ಹೆಸರಿಟ್ಟಿರುವುದನ್ನು ನೋಡಿದ್ದೇ ತಡ ಲೈಬ್ರರಿಯ ಮೆಟ್ಟಿಲು ಹತ್ತಿದೆ. ಗ್ರಂಥಪಾಲಕಿಯ ಬಳಿ ಶೆಟ್ಟರ ಬಗ್ಗೆ ವಿಚಾರಿಸಿದಾಗ ಆಕೆ “ನರ್ಕಳ ಮಾರಪ್ಪ ಶೆಟ್ಟರ ಬದುಕು ಮತ್ತು ಬರಹ” ಎಂಬ ಗ್ರಂಥವೊಂದನ್ನು ಉಡುಗೊರೆಯಾಗಿ ನೀಡಿದರು. ಅಲ್ಲಲ್ಲಿ ಚದುರಿಹೋಗಿದ್ದ ಅವರ ಬದುಕು ಮತ್ತು ಬರಹವನ್ನು ಸಾದ್ಯಂತ ಸಂಗ್ರಹಿಸಿ ಗ್ರಂಥ ರೂಪಕ್ಕಿಳಿಸಿದ್ದು 1989ರ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ, ಮಾರಪ್ಪ ಶೆಟ್ಟರ ಮಗನಾದ ನರ್ಕಳ ರಘುನಾಥ ಶೆಟ್ಟರು… ಅದೂ ಬಹಳ ತಡವಾಗಿ.

ಇಂತಹ ಘನ ವ್ಯಕ್ತಿತ್ವವನ್ನು ಹೊಸ ಪೀಳಿಗೆಗೆ ಪರಿಚಯಿಸದ ನಮ್ಮೂರಿನ ಜನರ ಬಗ್ಗೆ, ನಾ ಕಲಿತ ಕುಳಾಲು ಶಾಲೆಯಲ್ಲಿ ಅಧ್ಯಾಪಕನಾಗಿ ಸೇವೆ ಸಲ್ಲಿಸಿದ್ದರೂ ಅವರ ಬಗ್ಗೆ ಪರಿಚಯಿಸಿ ಕೊಡದ ನನ್ನ ಶಿಕ್ಷಕರ ಬಗ್ಗೆ, ಸ್ವಾತಂತ್ರ‍್ಯ ಹೋರಾಟಗಾರನಾಗಿದ್ದರೂ ಕನಿಷ್ಟ ಸ್ವಾತಂತ್ರ‍್ಯ ದಿನದಂದಾದರೂ ಸ್ಮರಿಸದಿರುವುದರ ಬಗ್ಗೆ ಖೇದವಿದೆ.

1894ರಲ್ಲಿ ನರ್ಕಳದಲ್ಲಿ ಜನಿಸಿದ ಮಾರಪ್ಪ ಶೆಟ್ರು ನರ್ಕಳ ಮನೆತನದ ಅವಿಭಕ್ತ ಕುಟುಂಬದ ಮೊದಲ ವಿದ್ಯಾವಂತ. ನಮ್ಮೂರಿಗೂ ಅವರೇ ಮೊದಲಿಗರಿರಬೇಕು. ಎಳವೆಯಲ್ಲೇ ಅಧ್ಯಾಪಕನಾಗಬೇಕೆಂಬ ಕನಸ ಹೊತ್ತಿದ್ದ ಶೆಟ್ಟರು ತನ್ನ ಹದಿನಾಲ್ಕನೇ ವಯಸ್ಸಿಗೇ ತಾನು ಕಲಿತ ಸಾಲೆತ್ತೂರು ಶಾಲೆಯಲ್ಲೇ ಅಧ್ಯಾಪಕರಾದರು..!! ಅವರ ಅಧ್ಯಾಪನದ ಕನಸನ್ನು ನನಸಾಗಿಸಿದವರು ತುಳುನಾಡಿನ ಮಹಾಕವಿ ಪಂಜೆ ಮಂಗೇಶರಾಯರು. ಆಗಿನ ಬ್ರಿಟಿಷ್ ಸರಕಾರದ ನಿಯಮದಂತೆ ಶಾಲಾ ಇನ್ಸ್ಪೆಕ್ಟರ್‌ಗಳೇ ಜಾಣ ವಿದ್ಯಾರ್ಥಿಗಳನ್ನು ಗುರುತಿಸಿ ಶಿಕ್ಷಕರಾಗಿ ನೇಮಿಸಬೇಕಿತ್ತು. ಜೊತೆಗೆ ಶಿಕ್ಷಕ ತರಬೇತಿಗೆ ಶಿಫಾರಸು ಮಾಡಬೇಕಿತ್ತು.

ಶೆಟ್ಟರು ಸಾಲೆತ್ತೂರು ಶಾಲೆಯಲ್ಲಿ ೪ನೇ ತರಗತಿಯಲ್ಲಿ (ಫಾರಂ) ವ್ಯಾಸಂಗ ಮಾಡುತ್ತಿದ್ದಾಗ ಶಾಲಾ ಪರೀಕ್ಷಾಧಿಕಾರಿಯಾಗಿ ಬಂದ ಪಂಜೆಯವರು ಶೆಟ್ಟರನ್ನು ಮೂರು ರೂಪಾಯಿ ಮಾಸಿಕ ವೇತನದೊಂದಿಗೆ ಅದೇ ಶಾಲೆಗೆ ಅಧ್ಯಾಪಕರನ್ನಾಗಿ ನೇಮಿಸಿದರು. ಆರು ವರ್ಷಗಳ ನಂತರ ತರಬೇತಿ ಪಡೆದು ಅಧಿಕೃತ ಶಿಕ್ಷಕರಾದರು. ಕೊಡ್ಲಮೊಗರು, ಮೂಡಂಬೈಲು, ಅಡ್ಯನಡ್ಕ ಅಷ್ಟೇ ಅಲ್ಲದೇ ನಾ ಕಲಿತ ಕುಳಾಲು ಶಾಲೆಯಲ್ಲೂ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಇನ್ನೂ ಕೆಲವೆಡೆ ಅಧ್ಯಾಪಕನಾಗಿ ಸೇವೆ ಸಲ್ಲಿಸಿದ್ದರೂ ಅದರ ದಾಖಲೆಗಳು ಲಭ್ಯವಾಗಿಲ್ಲ. ಅಧ್ಯಾಪನದ ಜೊತೆಜೊತೆಗೆ ಅಕ್ಷರ ಬಿತ್ತುವ ಕಾಯಕದಲ್ಲೂ ತೊಡಗಿಸಿಕೊಂಡರು. ಶಾಲೆಯೇ ಇಲ್ಲದ ಮೂಡಂಬೈಲಿನಲ್ಲಿ ಮಕ್ಕಳನ್ನೆಲ್ಲಾ ಕೂಡಿಸಿ ಸಣ್ಣ ಗುಡಿಸಲೊಂದರಲ್ಲಿ ಶಾಲೆಯನ್ನು ಪ್ರಾರಂಭಿಸಿದರು. ಮಂಗಳೂರಿನ ಬಿಜೈಯಲ್ಲಿ ಲೂರ್ಡ್ಸ್ ಪ್ರೌಢಶಾಲೆ ಸ್ಥಾಪನೆಗೆ ತನು, ಮನ, ಧನದೊಂದಿಗೆ ಶ್ರಮಿಸಿದರು. ವಯಸ್ಕರಿಗಾಗಿ ಅಡ್ಯನಡ್ಕದಲ್ಲಿ ರಾತ್ರಿ ಶಾಲೆ ಪ್ರಾರಂಭಿಸಿದರು. ಶೆಟ್ಟರ ಪಾಠ ಮಾಡುವ ಪ್ರಾಯೋಗಿಕ ಶೈಲಿ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಮೂಡಿಸುತ್ತಿತ್ತು.ನಾನೀಗ ನನ್ನ ಮಗಳಿಗೆ ಅಕ್ಷರ ಬರೆಯಲು ಸುಲಭವಾಗುವಂತೆ  slanting line, standing line, curves  ಹೀಗೆ ಏನೆಲ್ಲಾ ಕಲಿಸುತ್ತೇನೋ ಇದನ್ನೆಲ್ಲಾ ಶೆಟ್ಟರು ಸ್ವಾತಂತ್ರ‍್ಯ ಪೂರ್ವದಲ್ಲೇ ಕನ್ನಡ ಅಕ್ಷರ ಕಲಿಸಲು ಬಳಸುತ್ತಿದ್ದರು. ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಕೆಲವು ಕೈ ಕಸುಬು, ಗುಡಿ ಕೈಗಾರಿಕೆಗಳನ್ನು ಪ್ರಾಯೋಗಿಕವಾಗಿ ಮಾಡಿ ತೋರಿಸುತ್ತಿದ್ದರು.

ಶೆಟ್ಟರ ಕಲಿಕೆಯ ತುಡಿತ ಅದೆಷ್ಟು ಅದಮ್ಯವಾಗಿತ್ತೆಂದರೆ ಮಧ್ಯವಯಸ್ಸಿನಲ್ಲಿ ಮಗಳೊಂದಿಗೆ SSಐಅ ಪರೀಕ್ಷೆ ಬರೆದು ಅನುತ್ತೀರ್ಣರಾದರು. ಆ ಕಾಲದಲ್ಲೇ ತನ್ನ ಹತ್ತು ಮಂದಿ ಮಕ್ಕಳಲ್ಲಿ ಏಳು ಮಂದಿಯನ್ನು ಪದವೀಧರರನ್ನಾಗಿಸಿದರು. ತನ್ನ 14ರ ಹರೆಯದಿಂದ ೫೮ರ ವರೆಗೆ (1908-1952) ಮಾದರಿ ಶಿಕ್ಷಕರಾಗಿ ಕಾರ್ಯನಿರ್ವಹಿಸುವುದರ ಜೊತೆಜೊತೆಗೆ ಸ್ವಾತಂತ್ರ‍್ಯ ಆಂದೋಲನದಲ್ಲೂ ಭಾಗಿಯಾಗಿದ್ದರು.
ಗಾಂಧೀ ತತ್ವ ಪ್ರಣಾಳಿಕೆಯ ಪ್ರತಿಪಾದಕರಾಗಿ ದ.ಕ ಜಿಲ್ಲೆಯಾದ್ಯಂತ ಸಂಚರಿಸಿ ಹರಿಜನೋದ್ಧಾರ, ಖಾದಿಯ ಮಹತ್ವ, ಮದ್ಯಪಾನ ನಿಷೇಧದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸಿದರು.

“ಅಮಲ್ ದೆಪ್ಪಡೇ…!ಓ..!
ಅಕಲ್ ತಪ್ಪಡೇ…!!”
ಪರಡೆ ಕಲಿ ಗಂಗಸರೊ.. (ಕುಡಿಯಬೇಡಿರೋ…ಶೇಂದಿ…ಶರಾಬು) ಇತ್ಯಾದಿ ಸ್ವರಚಿತ ಕವನಗಳ ಮೂಲಕ ದ.ಕ.ಜಿಲ್ಲೆಯ ಜನರನ್ನು ತಲುಪಿದರು. ತನ್ನ ಕೊನೆಯುಸಿರಿರುವವರೆಗೂ ಗಾಂಧಿವಾದಿಯಾಗಿಯೇ ಬದುಕಿದರು. ಅವರು ಕನ್ನಡವಲ್ಲದೇ ತುಳು, ಹವ್ಯಕ ಭಾಷೆಗಳಲ್ಲೂ ಸಾಹಿತ್ಯ ಕೃಷಿ ಮಾಡಿದ್ದರು. ತುಳುನಾಡು, ನುಡಿ, ಸಂಸ್ಕೃತಿ, ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಬಾಲಸಾಹಿತ್ಯದಲ್ಲೂ ಪಳಗಿದ ಶೆಟ್ಟರ “ಸುಂದರಿಯ ಚಂದ” ಎಂಬ ಮಕ್ಕಳ ಕತೆಯು ಬಡಗಿಯೊಬ್ಬನು ಕೆತ್ತಿದ ಸುಂದರಿ ಎಂಬ ಬೊಂಬೆಯ ಚಿತ್ರಣವಾಗಿದೆ. ಅಡ್ಯನಡ್ಕ ಶಾಲೆಯ ಅಧ್ಯಾಪಕರಾಗಿದ್ದಾಗ “ಶಿಶು ಜೀವಾಳ” ಎಂಬ ವಿದ್ಯಾರ್ಥಿ ಹಸ್ತಪತ್ರಿಕೆಯನ್ನು ಪ್ರಾರಂಭಿಸಿದರು. ೧೯೨೯ರಲ್ಲಿ ತುಳುವಿನಲ್ಲಿ ರಚಿಸಿದ ‘ಪೊರ್ಲಕಂಟ್’ ಮತ್ತು ‘ಅಮಲ್ ದೆಪ್ಪಡೆ’ ಎಂಬ ಕವನ ಸಂಕಲನಗಳಲ್ಲಿನ ತುಳು ಪದಗಳ ವೈಶಿಷ್ಟ್ಯ ಮತ್ತು ಭಾರ ನೋಡಿದರೆ ಈ ಕಾಲದ ಸಾಹಿತಿಗಳಿಗೆ ಅಚ್ಚರಿಯಾಗಬಹುದು. ತುಳು ಶಬ್ದಗಳ ಹುಟ್ಟು ಮತ್ತು ವಿಕಾಸದ ಬಗ್ಗೆಯೂ ಸಾಕಷ್ಟು ಬರೆದಿರುವ ಇವರು ತುಳು ಭಾಷಾತಜ್ಞನೂ ಹೌದು. ತುಳು ಸ್ಥಳನಾಮಗಳ ಬಗ್ಗೆಯೂ ಸಂಶೋಧನೆಗೈದಿದ್ದಾರೆ.

ಕನ್ನಡದಲ್ಲಿ ‘ಮಂಜಟ್ಟಿ ಕೋಣ’, ಜಾತಿ ಮತ್ತು ವರ್ಣ ಬೇಧ ನೀತಿಯನ್ನು ವಿರೋಧಿಸುವ
`ಕರಿ-ಬಿಳಿ ಕಾಳಗ’, ‘ಕಾಸರಗೋಡು ಕನ್ನಡಿಗರ ಗೋಳಿನ ಕತೆ’ ಇತ್ಯಾದಿ ಕವನಗಳ ಜೊತೆಗೆ ಭಾಮಿನಿ ಹಾಗೂ ವಾರ್ಧಕ ಷಟ್ಪದಿಯಲ್ಲೂ ಬರೆದಿದ್ದಾರೆ. ಚೀನಾ ಆಕ್ರಮಣದ ಸಂದರ್ಭದಲ್ಲಿ ವಾರ್ಧಕ ಷಟ್ಪದಿಯಲ್ಲಿ “ಭಾರತೀಯರೊಂದಾಗಿ” ಎಂಬ ದೇಶಪ್ರೇಮವನ್ನು ಸಾರುವ ಕವನವನ್ನು ಬರೆದು ಆ ಮೂಲಕ ಜಾಗೃತಿ ಮೂಡಿಸಿದ್ದರು. ಯಕ್ಷಗಾನ ಅರ್ಥದಾರಿಯಾಗಿದ್ದ ಶೆಟ್ಟರು “ದಂಡಯಾತ್ರೆ” ಎಂಬ ಯಕ್ಷಗಾನ ಪ್ರಸಂಗವೊಂದನ್ನು ರಚಿಸಿದ್ದರು. ‘ಕೂಸಕ್ಕನ ಮದುವೆ’ ಎಂಬ ನಾಟಕ ಹವ್ಯಕ ಭಾಷಾ ಸಾಹಿತ್ಯಕ್ಕೆ ಶೆಟ್ಟರ ವಿಶೇಷ ಕೊಡುಗೆ. ಸಂಧಿ, ಸಮಾಸ, ಷಟ್ಪದಿಗಳಲ್ಲಿ ಅಪಾರ ಪಾಂಡಿತ್ಯ ಗಳಿಸಿದ್ದ ಶೆಟ್ಟರು “ಗುರುಮಿತ್ರ” ಎಂಬ ಅಧ್ಯಾಪಕರ ಸಂಘದ ಹಸ್ತಪತ್ರಿಕೆಯ ಸಂಪಾದಕರಾಗಿದ್ದರು. ನಿನ್ನೆ ಮೊನ್ನೆಯಷ್ಟೇ ಮೂಲಸ್ವರೂಪವನ್ನು ಉಳಿಸುತ್ತಲೇ ಆಧುನಿಕತೆಯತ್ತ ಮುಖಮಾಡಿರುವ ನನ್ನೂರಿನಲ್ಲಿ ಆ ಕಾಲದಲ್ಲಿ ಓರ್ವ ಅಧ್ಯಾಪಕನಾಗಿ, ಸಾಹಿತಿಯಾಗಿ, ಸ್ವಾತಂತ್ರ‍್ಯ ಹೋರಾಟಗಾರನಾಗಿ ಒಂದು ಅರ್ಥಪೂರ್ಣ ಬದುಕು ಸವೆಸಿದ ನರ್ಕಳ ಮಾರಪ್ಪ ಶೆಟ್ಟರನ್ನು ನನ್ನೂರು ಮರೆತಿರುವುದು ವಿಷಾದನೀಯ…

  • ಮಿಸ್ರಿಯಾ ಐ ಪಜೀರ್, ಯುವ ಬರಹಗಾರ್ತಿ.

ನಾ ಹ್ಯಾಂಗ ಮರೆಯಲಿ ನಿನ್ನ ಗಾಂಧಿ ತಾತ… : ಮಿಸ್ರಿಯಾ ಐ. ಪಜೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...