Homeಮುಖಪುಟ'ಅಪ್ಪ-ಅಮ್ಮ' ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ...

‘ಅಪ್ಪ-ಅಮ್ಮ’ ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ ಸೃಷ್ಟಿ

- Advertisement -
- Advertisement -

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ನಿಮ್ಮ ಹೆತ್ತವರು ತನಗೆ ಮತ ಹಾಕದಿದ್ದರೆ ಎರಡು ದಿನ ಊಟ ಮಾಡಬೇಡಿ ಎಂದು ಮಕ್ಕಳಿಗೆ ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

ಚುನಾವಣಾ ಆಯೋಗವು ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನಗಳನ್ನು ಹೊರಡಿಸಿದ ಒಂದು ವಾರದಲ್ಲೇ ಕಳಮ್ನೂರಿ ಶಾಸಕ ಸಂತೋಷ್ ಬಂಗಾರ್ ಅವರ ಹೇಳಿಕೆಗಳು ಹೊರಬಿದ್ದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಕಂಡು ಬಂದಿದೆ. ಇದರ ಜೊತೆಗೆ ಶಾಲೆಗೆ ತೆರಳಿ ಶಾಸಕ ಚುನಾವಣಾ ಕ್ಯಾಂಪೇನ್‌ ಆರಂಭಿಸಿದ್ದಾರೆ ಎಂಬಂತಹ ಟೀಕೆ ವ್ಯಕ್ತವಾಗಿದೆ.

ಈ ಕುರಿತ ಶಾಸಕ ಸಂತೋಷ್ ಬಂಗಾರ್ ಅವರ ವಿಡಿಯೋ ವೈರಲ್‌ ಆಗಿದ್ದು, ವಿಡಿಯೋದಲ್ಲಿ ಮುಂದಿನ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ, ಎರಡು ದಿನ ಊಟ ಮಾಡಬೇಡಿ ಎಂದು ಬಂಗಾರ್ ಅವರು ಹಿಂಗೋಲಿ ಜಿಲ್ಲೆಯ ಜಿಲ್ಲಾ ಪರಿಷತ್ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಹೇಳಿರುವುದು ಸೆರೆಯಾಗಿದೆ.

ಶಾಸಕ ಬಂಗಾರ್ ಅವರು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ, ಸಂತೋಷ್ ಬಂಗಾರ್ ಅವರಿಗೆ ಮತ ನೀಡಿ, ಆಗ ಮಾತ್ರ ನಾವು ತಿನ್ನುತ್ತೇವೆ ಎಂದು ಅಪ್ಪ-ಅಮ್ಮನಿಗೆ ಉತ್ತರಿಸಬೇಕು ಎಂದು ಹೇಳುತ್ತಿರುವುದು ಕಂಡು ಬರುತ್ತದೆ, ನಂತರ ಶಾಸಕರು ಮುಂದಿನ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂಬುದರ ಕುರಿತು ತಮ್ಮ ಪೋಷಕರ ಮುಂದೆ ಹೇಳುವುದನ್ನು ಪುನರಾವರ್ತಿಸುವಂತೆ ಮಕ್ಕಳಿಗೆ ಹೇಳಿದ್ದಾರೆ.

ಬಂಗಾರ್ ಅವರ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ನಾಯಕರು ವಾಗ್ಧಾಳಿಯನ್ನು ನಡೆಸಿದ್ದಾರೆ. ಎನ್‌ಸಿಪಿ(ಶರದ್‌ ಪವಾರ್‌ ಬಣ) ವಕ್ತಾರ ಕ್ಲೈಡ್ ಕ್ರಾಸ್ಟೊ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಂಗಾರ್ ಶಾಲಾ ಮಕ್ಕಳಿಗೆ ಹೇಳಿರುವುದು ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ, ಆದ್ದರಿಂದ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರು ಬಿಜೆಪಿಯ ಮಿತ್ರರಾಗಿರುವುದರಿಂದ ಆರಾಮವಾಗಿದ್ದಾರೆ. ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ವಿಜಯ್ ವಾಡೆತ್ತಿವಾರ್ ಮಾತನಾಡಿ,  ಬಂಗಾರ್ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ತಮ್ಮ ಪಕ್ಷದ ಶಾಸಕರೊಬ್ಬರು ಶಾಲಾ ಮಕ್ಕಳ ಬಳಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವಾಗ ರಾಜ್ಯದ ಶಿಕ್ಷಣ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಬಂಗಾರ್ ಅವರು ತಮ್ಮ ಆಘಾತಕಾರಿ ಹೇಳಿಕೆಗಳು ಮತ್ತು ಕ್ರಮಗಳಿಗೆ ಹೆಸರುವಾಸಿಯಾಗಿದ್ದಾರೆ, ಅವರು ಈ ಹಿಂದೆ ಕೂಡ ವಿವಾದಕ್ಕೆ ಗುರಿಯಾಗಿದ್ದರು. ಕಳೆದ ತಿಂಗಳು 2024ರ ಲೋಕಸಭೆ ಚುನಾವಣೆಯ ನಂತರ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗದಿದ್ದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಹಬ್ಬದ ರ್ಯಾಲಿಯೊಂದರಲ್ಲಿ ಕತ್ತಿ ಝಳಪಿಸಿದ್ದರು, ಆ ಬಳಿಕ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. 2022ರಲ್ಲಿ ಕೇಟರಿಂಗ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ ವೀಡಿಯೊ ವೈರಲ್ ಆಗಿ ವಿವಾದಕ್ಕೆ ಕಾರಣರಾಗಿದ್ದರು.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...