Homeಮುಖಪುಟ'ಅಪ್ಪ-ಅಮ್ಮ' ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ...

‘ಅಪ್ಪ-ಅಮ್ಮ’ ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ ಸೃಷ್ಟಿ

- Advertisement -
- Advertisement -

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ನಿಮ್ಮ ಹೆತ್ತವರು ತನಗೆ ಮತ ಹಾಕದಿದ್ದರೆ ಎರಡು ದಿನ ಊಟ ಮಾಡಬೇಡಿ ಎಂದು ಮಕ್ಕಳಿಗೆ ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

ಚುನಾವಣಾ ಆಯೋಗವು ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನಗಳನ್ನು ಹೊರಡಿಸಿದ ಒಂದು ವಾರದಲ್ಲೇ ಕಳಮ್ನೂರಿ ಶಾಸಕ ಸಂತೋಷ್ ಬಂಗಾರ್ ಅವರ ಹೇಳಿಕೆಗಳು ಹೊರಬಿದ್ದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಕಂಡು ಬಂದಿದೆ. ಇದರ ಜೊತೆಗೆ ಶಾಲೆಗೆ ತೆರಳಿ ಶಾಸಕ ಚುನಾವಣಾ ಕ್ಯಾಂಪೇನ್‌ ಆರಂಭಿಸಿದ್ದಾರೆ ಎಂಬಂತಹ ಟೀಕೆ ವ್ಯಕ್ತವಾಗಿದೆ.

ಈ ಕುರಿತ ಶಾಸಕ ಸಂತೋಷ್ ಬಂಗಾರ್ ಅವರ ವಿಡಿಯೋ ವೈರಲ್‌ ಆಗಿದ್ದು, ವಿಡಿಯೋದಲ್ಲಿ ಮುಂದಿನ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ, ಎರಡು ದಿನ ಊಟ ಮಾಡಬೇಡಿ ಎಂದು ಬಂಗಾರ್ ಅವರು ಹಿಂಗೋಲಿ ಜಿಲ್ಲೆಯ ಜಿಲ್ಲಾ ಪರಿಷತ್ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಹೇಳಿರುವುದು ಸೆರೆಯಾಗಿದೆ.

ಶಾಸಕ ಬಂಗಾರ್ ಅವರು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ, ಸಂತೋಷ್ ಬಂಗಾರ್ ಅವರಿಗೆ ಮತ ನೀಡಿ, ಆಗ ಮಾತ್ರ ನಾವು ತಿನ್ನುತ್ತೇವೆ ಎಂದು ಅಪ್ಪ-ಅಮ್ಮನಿಗೆ ಉತ್ತರಿಸಬೇಕು ಎಂದು ಹೇಳುತ್ತಿರುವುದು ಕಂಡು ಬರುತ್ತದೆ, ನಂತರ ಶಾಸಕರು ಮುಂದಿನ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂಬುದರ ಕುರಿತು ತಮ್ಮ ಪೋಷಕರ ಮುಂದೆ ಹೇಳುವುದನ್ನು ಪುನರಾವರ್ತಿಸುವಂತೆ ಮಕ್ಕಳಿಗೆ ಹೇಳಿದ್ದಾರೆ.

ಬಂಗಾರ್ ಅವರ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ನಾಯಕರು ವಾಗ್ಧಾಳಿಯನ್ನು ನಡೆಸಿದ್ದಾರೆ. ಎನ್‌ಸಿಪಿ(ಶರದ್‌ ಪವಾರ್‌ ಬಣ) ವಕ್ತಾರ ಕ್ಲೈಡ್ ಕ್ರಾಸ್ಟೊ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಂಗಾರ್ ಶಾಲಾ ಮಕ್ಕಳಿಗೆ ಹೇಳಿರುವುದು ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ, ಆದ್ದರಿಂದ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರು ಬಿಜೆಪಿಯ ಮಿತ್ರರಾಗಿರುವುದರಿಂದ ಆರಾಮವಾಗಿದ್ದಾರೆ. ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ವಿಜಯ್ ವಾಡೆತ್ತಿವಾರ್ ಮಾತನಾಡಿ,  ಬಂಗಾರ್ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ತಮ್ಮ ಪಕ್ಷದ ಶಾಸಕರೊಬ್ಬರು ಶಾಲಾ ಮಕ್ಕಳ ಬಳಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವಾಗ ರಾಜ್ಯದ ಶಿಕ್ಷಣ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಬಂಗಾರ್ ಅವರು ತಮ್ಮ ಆಘಾತಕಾರಿ ಹೇಳಿಕೆಗಳು ಮತ್ತು ಕ್ರಮಗಳಿಗೆ ಹೆಸರುವಾಸಿಯಾಗಿದ್ದಾರೆ, ಅವರು ಈ ಹಿಂದೆ ಕೂಡ ವಿವಾದಕ್ಕೆ ಗುರಿಯಾಗಿದ್ದರು. ಕಳೆದ ತಿಂಗಳು 2024ರ ಲೋಕಸಭೆ ಚುನಾವಣೆಯ ನಂತರ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗದಿದ್ದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಹಬ್ಬದ ರ್ಯಾಲಿಯೊಂದರಲ್ಲಿ ಕತ್ತಿ ಝಳಪಿಸಿದ್ದರು, ಆ ಬಳಿಕ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. 2022ರಲ್ಲಿ ಕೇಟರಿಂಗ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ ವೀಡಿಯೊ ವೈರಲ್ ಆಗಿ ವಿವಾದಕ್ಕೆ ಕಾರಣರಾಗಿದ್ದರು.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...