Homeಕರ್ನಾಟಕ'ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

‘ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ ಎಂದು ದೇಮ ಹೇಳಿದ್ದಾರೆ

- Advertisement -
- Advertisement -

“ನಾನು ಅವರು-ಇವರು ಎನ್ನದೆ ಎಲ್ಲರನ್ನು ನನ್ನ ಬಂಧುಗಳೆಂದು ಭಾವಿಸುವುದರಿಂದ ಒಂದು ಮನವಿ ಮಾಡುತ್ತೇನೆ. ದಯವಿಟ್ಟು ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ, ಬಲೆಗೆ ಸಿಲುಕಬೇಡಿ. ಮುಖ ನೋಡಬೇಡಿ, ನಡೆ ನೋಡಿ. ಬಲೆಗೆ ಬಿದ್ದು ಮತ ನೀಡಿದರೆ ನಿಮ್ಮ ಬದುಕು ಇನ್ನಷ್ಟು ನರಕವಾಗುತ್ತದೆ’’ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಮನವಿ ಮಾಡಿದ್ದಾರೆ.

ರಾಜ್ಯದ ಗಮನ ಸೆಳೆದಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚಿಸಿ ಮಾತನಾಡಿರುವ ಅವರು, ‘’ಪೆಟ್ರೊಲ್‌, ಗ್ಯಾಸ್‌, ಕಾಳು, ಎಣ್ಣೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈಗಾಲೇ ಮಹಿಳೆಯರು ಬಲೆ ಏರಿಕೆ ಬವಣೆಯಿಂದ ಶಾಪ ಹಾಕುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಕೋಲಾರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ‘ರಾಜಕೀಯ ಪಕ್ಷಗಳ ಪ್ರಣಾಳಿಕೆ ಎಂದರೆ ಜನತಾ ಜನಾರ್ಧನನಿಗೆ ನೀಡುವ ವಾಗ್ದಾನ. ಅದನ್ನು ಪಕ್ಷ ಈಡೇರಿಸದೇ ಇದ್ದರೆ ಮಹಾಪಾಪ’ ಎಂದು ತುಂಬಾ ಖಚಿತವಾಗಿ ಆತ್ಮವಿಶ್ವಾಸದಿಂದ ನುಡಿದಿದ್ದರು. ಅಧಿಕಾರಕ್ಕೆ ಬರುವವರು ಹೇಗಿರಬೇಕು ಎನ್ನುವಂತೆ ಇವರ ಮಾತಗಳಿದ್ದವು. ಆದರೆ, ಅವರ ಅಧಿಕಾರದಲ್ಲಿ ನಡೆದದ್ದೆಲ್ಲವೂ ಜನ ವಿರೋಧಿ ಕೆಲಸಗಳೇ,” ಎಂದರು.

“ಇರಲಿ, ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂಬ ಮೋದಿಯವರ ಮಾತನ್ನು ನಂಬಿ ಮತ ಕೊಟ್ಟು ಗೆಲ್ಲಿಸಿ ಇದ್ದಬದ್ದ ಉದ್ಯೋಗವನ್ನು ಕಳೆದುಕೊಂಡಿದ್ದೀವಿ. ಉದ್ಯೋಗ ಸೃಷ್ಠಿಸುತ್ತಿದ್ದ ಸಣ್ಣ ಕೈಗಾರಿಕೆ, ಅತೀಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡದೆ ಅವು ಕೋಟಿ ಸಂಖ್ಯೆಯಲ್ಲಿ ಮುಚ್ಚಿ ಹೋಗಿವೆ. ಆದರೆ, ಇನ್ನೊಂದು ಕಡೆ ಮೋದಿ ಅವರ ಪರಮಾಪ್ತ ಅದಾನಿ, ಅಂಬಾನಿ ಮುಂತಾದ ಬಂಡವಾಳಶಾಹಿಗಳ ಸಂಪತ್ತು ದ್ವಿಗುಣ ಆಗಿದೆ. ಇದುವರೆಗೂ ಉಳ್ಳವರ ಸಂಪತ್ತು ಡಬಲ್‌ ಆಗುತ್ತಿದೆ ಬಡವರ ಸಂಖ್ಯೆ ಹೆಚ್ಚುತ್ತಿದೆಯಲ್ಲ? ಮಧ್ಯಮ ವರ್ಗ ಬಡತನ ರೇಖೆ ಕಡೆ ಚಲಿಸುತ್ತಿದೆಯಲ್ಲ” ಎಂದು ವಿಷಾದಿಸಿದರು.

“2013-14ನೇ ಸಾಲಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಾಗ ನೀಡಿದ್ದ ಪ್ರಣಾಳಿಕೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಶೇ.50 ರಷ್ಟು ಬೆಂಬಲ ಬೆಲೆ ನೀಡುತ್ತೇವೆ ಎಂದು ಹೇಳಿದ್ದರು. ಅದು ಏನಾಯ್ತು? ಕೃಷಿ ಉತ್ಪನ್ನಗಳಿಗೆ ಕಾಂಗ್ರೆಸ್ ಕಾಲದಲ್ಲಿ ಸಿಗುತ್ತಿದ್ದಕ್ಕಿಂತ ಕಡಿಮೆ ಬೆಲೆ ಸಿಗುತ್ತಿದೆ” ಎಂದು ಹೇಳಿದರು.

ದೇವನೂರ ಮಹಾದೇವ

“ಮೋದಿ ಆಡಿದ ಮಾತುಗಳನ್ನು ಮತದಾರರು ತುಂಬಾ ನಂಬಿದ್ದರು. ಬಹಳ ಬೆಲೆ ಕೊಟ್ಟಿದ್ದರು. ಈಗಲೂ ಒಂದಿಷ್ಟು ಜನ ನಂಬುತ್ತಿದ್ದಾರೆ. ನನ್ನ ಪ್ರಶ್ನೆ ಇಷ್ಟೆ, ಮೋದಿಯವರೇ ನಿಮ್ಮ ಮಾತಿಗೆ ನಮ್ಮ ಜನ ಇಷ್ಟೊಂದು ಬೆಲೆ ಕೊಟ್ಟಿದ್ದಾರೆ, ಇಷ್ಟೊಂದು ಗೌರವ ಕೊಟ್ಟಿದ್ದಾರೆ, ನಂಬಿದ್ದಾರೆ, ಹೀಗಿರುವಾಗ ನಿಮ್ಮ ಮಾತಿನ ಬಗ್ಗೆ ನಿಮಗೆ ಬೆಲೆ ಇಲ್ಲವೆ? ನಿಮ್ಮ ಮಾತನ್ನು ನೀವೇ ನಂಬೋದಿಲ್ಲವೇ” ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್ ಚುಚ್ಚಲಾಗಿದೆ: ದೇಮ

ಬಿಜೆಪಿಯಲ್ಲಾಗಿರುವ ಬದಲಾವಣೆಗಳನ್ನು ಉಲ್ಲೇಖಿಸಿ ಮಾತನಾಡಿರುವ ದೇವನೂರ ಮಹಾದೇವ ಅವರು, “ಇಂದಿನ ರಾಜಕಾರಣದ ಒಳಹೊಕ್ಕು ನೋಡುವುದಾದರೆ ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ. ಇನ್ನೆರಡು ಬಲಿಷ್ಠ ವೃಕ್ಷಗಳಾದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿಯನ್ನು ಬುಡಸಮೇತ ಕತ್ತರಿಸಿ ಎಸೆಯಲಾಗಿದೆ. ಇನ್ನೊಂದು ಸ್ವಲ್ಪ ಗಟ್ಟಿ ಮರ ಅನ್ನಬಹುದಾದ ಸೋಮಣ್ಣನವರಿಗೆ ಫನಿಷ್‌ಮೆಂಟ್‌ ಟ್ರಾನ್ಸ್‌ಫರ್‌ ಮಾಡಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಡಲಾಗಿದೆ. ಮುಂದೆ ತುಂಬಾ ಚೆನ್ನಾಗಿ ಬೆಳೆದುಬಿಡುತ್ತಾರೆ ಎಂಬ ಭರವಸೆ ಹಿಡಿಸಿ ಎಳೆಕರುವನ್ನು ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ” ಎಂದು ಮಾರ್ಮಿಕವಾಗಿ ನುಡಿದರು.

“ಮೇಲೆ ಉಲ್ಲೇಖಿಸಿದ ವ್ಯಕ್ತಿಗಳ ಬಗ್ಗೆ ಆಕ್ಷೇಪಣೆಗಳು ಏನೇ ಇರಲಿ. ಏನಿದರ ಮರ್ಮ? ನನಗೆ ಅನಿಸುವುದು ಇಷ್ಟೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗೆ ಜನನಾಯಕರು, ಸಮುದಾಯದ ನಾಯಕರು ಬೇಕಾಗಿಲ್ಲ. ಅವರಿಗೆ ಛಲವಾದಿ ನಾರಾಯಣಸ್ವಾಮಿ ರೀತಿಯ ಕಾಲಾಳುಗಳು ಮಾತ್ರ ಬೇಕು” ಎಂದು ಟೀಕಿಸಿದ್ದಾರೆ.

“ಈಗ ಲಿಂಗಾಯತ ಆಯಿತು, ಮುಂದೆ ಒಕ್ಕಲಿಗ ನಾಯಕರಿಗೆ ಸರದಿ ಕಾದಿದೆ. ರಾಜ್ಯದಲ್ಲಿ ಪ್ರಲ್ಹಾದ್‌ ಜೋಶಿ, ಸಂತೋಷ್‌ ಮತ್ತೊಬ್ಬರಿಗಷ್ಟೇ ಅವಕಾಶ. ಇದು ಬಿಜೆಪಿಯ ಗರ್ಭಗುಡಿ ಆರ್‌ಎಸ್‌ಎಸ್‌ನ ಫರ್ಮಾನ್‌. ಇದು ಎಲ್ಲಿಗೆ ಕೆರೆದುಕೊಂಡು ಹೋಗುತ್ತದೆ ಎಂದರೆ, ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‌ ಮತ್ತು ಇಟಲಿಯ ಮುಸಲೋನಿಯ ಮಿಶ್ರ ಆಳ್ವಿಕೆ ಕಡೆಗೆ ಕೊಂಡೊಯ್ಯುತ್ತದೆ” ಎಂದು ಎಚ್ಚರಿಸಿದರು.

“ಬಿಜೆಪಿ ಕಾಲಾಳು ಪಕ್ಷ ಮಾಡುತ್ತಿರುವುದು, ಯಾಕೆಂದರೆ ಅದು ಸಂವಿಧಾನವನ್ನು ಬದಲಾಯಿಸಬೇಕು. ಚಾತುರ್ವರ್ಣದ ಮನುಧರ್ಮಶಾಸ್ತ್ರವನ್ನು ಭಾರತದ ಸಂವಿಧಾನವನ್ನಾಗಿಸಬೇಕು. ಇದು ಅವರ ಹಿಂದೂ ರಾಷ್ಟ್ರ ಎನ್ನುವುದು ಆರ್‌ಎಸ್‌ಎಸ್‌ ಗರ್ಭಗುಡಿಯ ಕಟ್ಟಪ್ಪಣೆ” ಎಂದು ಭವಿಷ್ಯ ನುಡಿದರು.

“ಕೊನೆಯದಾಗಿ ಒಂದು ಮಾತು, ಇಡೀ ವರುಣಾ ಕ್ಷೇತ್ರ ತುಂಬಾ ಎಚ್ಚರಿಕೆಯಿಂದ ಇರಬೇಕು. ಒಳಗೆ ಕಲ್ಲಿಟ್ಟು ಅದರ ಸುತ್ತ ಹೂವು ಸುತ್ತಿ ಡಾ. ಜಿ ಪರಮೇಶ್ವರ್‌ ಅವರ ತಲೆಗೆ ಎಸೆದು ರಕ್ತ ಬರಿಸಿದ್ದಾರೆ. ಇಲ್ಲೂ ಆಗಬಹುದು. ಹೂವು ಸುತ್ತಿ ಕಲ್ಲು ಎಸೆಯುವುದು ಸಂಘ ಪರಿವಾರದ ರಾಜಕಾರಣದ ವೈಖರಿ” ಎಂದು ಆತಂಕ ವ್ಯಕ್ತಪಡಿಸಿದರು.

“ನೆನಪಿಡಿ ರಾಜ್ಯದ ಬಿಜೆಪಿಯ ನಾಯಕರೊಬ್ಬರು ಕ್ಷೇತ್ರದಲ್ಲಿ ಒಂದು ಹೆಣ ಬೀಳಿಸಿದರೆ ಎರಡು ಕ್ಷೇತ್ರ ಗೆದ್ದಂತೆ ಎಂದು ಹೇಳಿದ್ದು ಸುದ್ದಿಯಾಗಿತ್ತು. ಪ್ರಿಯಾಂಕ್‌ ಖರ್ಗೆ ವಿರುದ್ಧ ರೌಡಿಶೀಟರ್‌, ಗಡಿಪಾರು ಆಗಿದ್ದ ವ್ಯಕ್ತಿಯನ್ನು ಬಿಜೆಪಿ ನಿಲ್ಲಿಸಿದೆ. ಇಂತಹ ಭೂಗತ ರಾಜಕಾರಣ ಇಂದು ನಡೆಯುತ್ತಿದೆ. ದಯವಿಟ್ಟು ಎಚ್ಚರವಿರಿ. ಈ ರೀತಿ ಹೊಡಿಬಡಿ ರಕ್ತಪಾತದ ರಾಜಕಾರಣ ಆಗದಂತೆ ಎಚ್ಚರ ವಹಿಸುವುದು ನಮ್ಮ ಪೊಲೀಸ್‌ ಕರ್ತವ್ಯ” ಎಂದರು.

ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಮಾಜಿ ಅಡ್ವೋಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಲೇಖಕಿ ಪ್ರೊ. ಸುಮಿತ್ರಾ ಬಾಯಿ, ದಸಂಸ ಸಂಚಾಲಕರಾದ ಆಲಗೂಡು ಶಿವಕುಮಾರ್ ಮತ್ತಿತರರು ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...