Homeಕರ್ನಾಟಕ'ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

‘ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ ಎಂದು ದೇಮ ಹೇಳಿದ್ದಾರೆ

- Advertisement -
- Advertisement -

“ನಾನು ಅವರು-ಇವರು ಎನ್ನದೆ ಎಲ್ಲರನ್ನು ನನ್ನ ಬಂಧುಗಳೆಂದು ಭಾವಿಸುವುದರಿಂದ ಒಂದು ಮನವಿ ಮಾಡುತ್ತೇನೆ. ದಯವಿಟ್ಟು ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ, ಬಲೆಗೆ ಸಿಲುಕಬೇಡಿ. ಮುಖ ನೋಡಬೇಡಿ, ನಡೆ ನೋಡಿ. ಬಲೆಗೆ ಬಿದ್ದು ಮತ ನೀಡಿದರೆ ನಿಮ್ಮ ಬದುಕು ಇನ್ನಷ್ಟು ನರಕವಾಗುತ್ತದೆ’’ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಮನವಿ ಮಾಡಿದ್ದಾರೆ.

ರಾಜ್ಯದ ಗಮನ ಸೆಳೆದಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚಿಸಿ ಮಾತನಾಡಿರುವ ಅವರು, ‘’ಪೆಟ್ರೊಲ್‌, ಗ್ಯಾಸ್‌, ಕಾಳು, ಎಣ್ಣೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈಗಾಲೇ ಮಹಿಳೆಯರು ಬಲೆ ಏರಿಕೆ ಬವಣೆಯಿಂದ ಶಾಪ ಹಾಕುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಕೋಲಾರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ‘ರಾಜಕೀಯ ಪಕ್ಷಗಳ ಪ್ರಣಾಳಿಕೆ ಎಂದರೆ ಜನತಾ ಜನಾರ್ಧನನಿಗೆ ನೀಡುವ ವಾಗ್ದಾನ. ಅದನ್ನು ಪಕ್ಷ ಈಡೇರಿಸದೇ ಇದ್ದರೆ ಮಹಾಪಾಪ’ ಎಂದು ತುಂಬಾ ಖಚಿತವಾಗಿ ಆತ್ಮವಿಶ್ವಾಸದಿಂದ ನುಡಿದಿದ್ದರು. ಅಧಿಕಾರಕ್ಕೆ ಬರುವವರು ಹೇಗಿರಬೇಕು ಎನ್ನುವಂತೆ ಇವರ ಮಾತಗಳಿದ್ದವು. ಆದರೆ, ಅವರ ಅಧಿಕಾರದಲ್ಲಿ ನಡೆದದ್ದೆಲ್ಲವೂ ಜನ ವಿರೋಧಿ ಕೆಲಸಗಳೇ,” ಎಂದರು.

“ಇರಲಿ, ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂಬ ಮೋದಿಯವರ ಮಾತನ್ನು ನಂಬಿ ಮತ ಕೊಟ್ಟು ಗೆಲ್ಲಿಸಿ ಇದ್ದಬದ್ದ ಉದ್ಯೋಗವನ್ನು ಕಳೆದುಕೊಂಡಿದ್ದೀವಿ. ಉದ್ಯೋಗ ಸೃಷ್ಠಿಸುತ್ತಿದ್ದ ಸಣ್ಣ ಕೈಗಾರಿಕೆ, ಅತೀಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡದೆ ಅವು ಕೋಟಿ ಸಂಖ್ಯೆಯಲ್ಲಿ ಮುಚ್ಚಿ ಹೋಗಿವೆ. ಆದರೆ, ಇನ್ನೊಂದು ಕಡೆ ಮೋದಿ ಅವರ ಪರಮಾಪ್ತ ಅದಾನಿ, ಅಂಬಾನಿ ಮುಂತಾದ ಬಂಡವಾಳಶಾಹಿಗಳ ಸಂಪತ್ತು ದ್ವಿಗುಣ ಆಗಿದೆ. ಇದುವರೆಗೂ ಉಳ್ಳವರ ಸಂಪತ್ತು ಡಬಲ್‌ ಆಗುತ್ತಿದೆ ಬಡವರ ಸಂಖ್ಯೆ ಹೆಚ್ಚುತ್ತಿದೆಯಲ್ಲ? ಮಧ್ಯಮ ವರ್ಗ ಬಡತನ ರೇಖೆ ಕಡೆ ಚಲಿಸುತ್ತಿದೆಯಲ್ಲ” ಎಂದು ವಿಷಾದಿಸಿದರು.

“2013-14ನೇ ಸಾಲಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಾಗ ನೀಡಿದ್ದ ಪ್ರಣಾಳಿಕೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಶೇ.50 ರಷ್ಟು ಬೆಂಬಲ ಬೆಲೆ ನೀಡುತ್ತೇವೆ ಎಂದು ಹೇಳಿದ್ದರು. ಅದು ಏನಾಯ್ತು? ಕೃಷಿ ಉತ್ಪನ್ನಗಳಿಗೆ ಕಾಂಗ್ರೆಸ್ ಕಾಲದಲ್ಲಿ ಸಿಗುತ್ತಿದ್ದಕ್ಕಿಂತ ಕಡಿಮೆ ಬೆಲೆ ಸಿಗುತ್ತಿದೆ” ಎಂದು ಹೇಳಿದರು.

ದೇವನೂರ ಮಹಾದೇವ

“ಮೋದಿ ಆಡಿದ ಮಾತುಗಳನ್ನು ಮತದಾರರು ತುಂಬಾ ನಂಬಿದ್ದರು. ಬಹಳ ಬೆಲೆ ಕೊಟ್ಟಿದ್ದರು. ಈಗಲೂ ಒಂದಿಷ್ಟು ಜನ ನಂಬುತ್ತಿದ್ದಾರೆ. ನನ್ನ ಪ್ರಶ್ನೆ ಇಷ್ಟೆ, ಮೋದಿಯವರೇ ನಿಮ್ಮ ಮಾತಿಗೆ ನಮ್ಮ ಜನ ಇಷ್ಟೊಂದು ಬೆಲೆ ಕೊಟ್ಟಿದ್ದಾರೆ, ಇಷ್ಟೊಂದು ಗೌರವ ಕೊಟ್ಟಿದ್ದಾರೆ, ನಂಬಿದ್ದಾರೆ, ಹೀಗಿರುವಾಗ ನಿಮ್ಮ ಮಾತಿನ ಬಗ್ಗೆ ನಿಮಗೆ ಬೆಲೆ ಇಲ್ಲವೆ? ನಿಮ್ಮ ಮಾತನ್ನು ನೀವೇ ನಂಬೋದಿಲ್ಲವೇ” ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್ ಚುಚ್ಚಲಾಗಿದೆ: ದೇಮ

ಬಿಜೆಪಿಯಲ್ಲಾಗಿರುವ ಬದಲಾವಣೆಗಳನ್ನು ಉಲ್ಲೇಖಿಸಿ ಮಾತನಾಡಿರುವ ದೇವನೂರ ಮಹಾದೇವ ಅವರು, “ಇಂದಿನ ರಾಜಕಾರಣದ ಒಳಹೊಕ್ಕು ನೋಡುವುದಾದರೆ ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ. ಇನ್ನೆರಡು ಬಲಿಷ್ಠ ವೃಕ್ಷಗಳಾದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿಯನ್ನು ಬುಡಸಮೇತ ಕತ್ತರಿಸಿ ಎಸೆಯಲಾಗಿದೆ. ಇನ್ನೊಂದು ಸ್ವಲ್ಪ ಗಟ್ಟಿ ಮರ ಅನ್ನಬಹುದಾದ ಸೋಮಣ್ಣನವರಿಗೆ ಫನಿಷ್‌ಮೆಂಟ್‌ ಟ್ರಾನ್ಸ್‌ಫರ್‌ ಮಾಡಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಡಲಾಗಿದೆ. ಮುಂದೆ ತುಂಬಾ ಚೆನ್ನಾಗಿ ಬೆಳೆದುಬಿಡುತ್ತಾರೆ ಎಂಬ ಭರವಸೆ ಹಿಡಿಸಿ ಎಳೆಕರುವನ್ನು ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ” ಎಂದು ಮಾರ್ಮಿಕವಾಗಿ ನುಡಿದರು.

“ಮೇಲೆ ಉಲ್ಲೇಖಿಸಿದ ವ್ಯಕ್ತಿಗಳ ಬಗ್ಗೆ ಆಕ್ಷೇಪಣೆಗಳು ಏನೇ ಇರಲಿ. ಏನಿದರ ಮರ್ಮ? ನನಗೆ ಅನಿಸುವುದು ಇಷ್ಟೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗೆ ಜನನಾಯಕರು, ಸಮುದಾಯದ ನಾಯಕರು ಬೇಕಾಗಿಲ್ಲ. ಅವರಿಗೆ ಛಲವಾದಿ ನಾರಾಯಣಸ್ವಾಮಿ ರೀತಿಯ ಕಾಲಾಳುಗಳು ಮಾತ್ರ ಬೇಕು” ಎಂದು ಟೀಕಿಸಿದ್ದಾರೆ.

“ಈಗ ಲಿಂಗಾಯತ ಆಯಿತು, ಮುಂದೆ ಒಕ್ಕಲಿಗ ನಾಯಕರಿಗೆ ಸರದಿ ಕಾದಿದೆ. ರಾಜ್ಯದಲ್ಲಿ ಪ್ರಲ್ಹಾದ್‌ ಜೋಶಿ, ಸಂತೋಷ್‌ ಮತ್ತೊಬ್ಬರಿಗಷ್ಟೇ ಅವಕಾಶ. ಇದು ಬಿಜೆಪಿಯ ಗರ್ಭಗುಡಿ ಆರ್‌ಎಸ್‌ಎಸ್‌ನ ಫರ್ಮಾನ್‌. ಇದು ಎಲ್ಲಿಗೆ ಕೆರೆದುಕೊಂಡು ಹೋಗುತ್ತದೆ ಎಂದರೆ, ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‌ ಮತ್ತು ಇಟಲಿಯ ಮುಸಲೋನಿಯ ಮಿಶ್ರ ಆಳ್ವಿಕೆ ಕಡೆಗೆ ಕೊಂಡೊಯ್ಯುತ್ತದೆ” ಎಂದು ಎಚ್ಚರಿಸಿದರು.

“ಬಿಜೆಪಿ ಕಾಲಾಳು ಪಕ್ಷ ಮಾಡುತ್ತಿರುವುದು, ಯಾಕೆಂದರೆ ಅದು ಸಂವಿಧಾನವನ್ನು ಬದಲಾಯಿಸಬೇಕು. ಚಾತುರ್ವರ್ಣದ ಮನುಧರ್ಮಶಾಸ್ತ್ರವನ್ನು ಭಾರತದ ಸಂವಿಧಾನವನ್ನಾಗಿಸಬೇಕು. ಇದು ಅವರ ಹಿಂದೂ ರಾಷ್ಟ್ರ ಎನ್ನುವುದು ಆರ್‌ಎಸ್‌ಎಸ್‌ ಗರ್ಭಗುಡಿಯ ಕಟ್ಟಪ್ಪಣೆ” ಎಂದು ಭವಿಷ್ಯ ನುಡಿದರು.

“ಕೊನೆಯದಾಗಿ ಒಂದು ಮಾತು, ಇಡೀ ವರುಣಾ ಕ್ಷೇತ್ರ ತುಂಬಾ ಎಚ್ಚರಿಕೆಯಿಂದ ಇರಬೇಕು. ಒಳಗೆ ಕಲ್ಲಿಟ್ಟು ಅದರ ಸುತ್ತ ಹೂವು ಸುತ್ತಿ ಡಾ. ಜಿ ಪರಮೇಶ್ವರ್‌ ಅವರ ತಲೆಗೆ ಎಸೆದು ರಕ್ತ ಬರಿಸಿದ್ದಾರೆ. ಇಲ್ಲೂ ಆಗಬಹುದು. ಹೂವು ಸುತ್ತಿ ಕಲ್ಲು ಎಸೆಯುವುದು ಸಂಘ ಪರಿವಾರದ ರಾಜಕಾರಣದ ವೈಖರಿ” ಎಂದು ಆತಂಕ ವ್ಯಕ್ತಪಡಿಸಿದರು.

“ನೆನಪಿಡಿ ರಾಜ್ಯದ ಬಿಜೆಪಿಯ ನಾಯಕರೊಬ್ಬರು ಕ್ಷೇತ್ರದಲ್ಲಿ ಒಂದು ಹೆಣ ಬೀಳಿಸಿದರೆ ಎರಡು ಕ್ಷೇತ್ರ ಗೆದ್ದಂತೆ ಎಂದು ಹೇಳಿದ್ದು ಸುದ್ದಿಯಾಗಿತ್ತು. ಪ್ರಿಯಾಂಕ್‌ ಖರ್ಗೆ ವಿರುದ್ಧ ರೌಡಿಶೀಟರ್‌, ಗಡಿಪಾರು ಆಗಿದ್ದ ವ್ಯಕ್ತಿಯನ್ನು ಬಿಜೆಪಿ ನಿಲ್ಲಿಸಿದೆ. ಇಂತಹ ಭೂಗತ ರಾಜಕಾರಣ ಇಂದು ನಡೆಯುತ್ತಿದೆ. ದಯವಿಟ್ಟು ಎಚ್ಚರವಿರಿ. ಈ ರೀತಿ ಹೊಡಿಬಡಿ ರಕ್ತಪಾತದ ರಾಜಕಾರಣ ಆಗದಂತೆ ಎಚ್ಚರ ವಹಿಸುವುದು ನಮ್ಮ ಪೊಲೀಸ್‌ ಕರ್ತವ್ಯ” ಎಂದರು.

ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಮಾಜಿ ಅಡ್ವೋಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಲೇಖಕಿ ಪ್ರೊ. ಸುಮಿತ್ರಾ ಬಾಯಿ, ದಸಂಸ ಸಂಚಾಲಕರಾದ ಆಲಗೂಡು ಶಿವಕುಮಾರ್ ಮತ್ತಿತರರು ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...