Homeಕರ್ನಾಟಕ'ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

‘ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ ಎಂದು ದೇಮ ಹೇಳಿದ್ದಾರೆ

- Advertisement -
- Advertisement -

“ನಾನು ಅವರು-ಇವರು ಎನ್ನದೆ ಎಲ್ಲರನ್ನು ನನ್ನ ಬಂಧುಗಳೆಂದು ಭಾವಿಸುವುದರಿಂದ ಒಂದು ಮನವಿ ಮಾಡುತ್ತೇನೆ. ದಯವಿಟ್ಟು ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ, ಬಲೆಗೆ ಸಿಲುಕಬೇಡಿ. ಮುಖ ನೋಡಬೇಡಿ, ನಡೆ ನೋಡಿ. ಬಲೆಗೆ ಬಿದ್ದು ಮತ ನೀಡಿದರೆ ನಿಮ್ಮ ಬದುಕು ಇನ್ನಷ್ಟು ನರಕವಾಗುತ್ತದೆ’’ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಮನವಿ ಮಾಡಿದ್ದಾರೆ.

ರಾಜ್ಯದ ಗಮನ ಸೆಳೆದಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚಿಸಿ ಮಾತನಾಡಿರುವ ಅವರು, ‘’ಪೆಟ್ರೊಲ್‌, ಗ್ಯಾಸ್‌, ಕಾಳು, ಎಣ್ಣೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈಗಾಲೇ ಮಹಿಳೆಯರು ಬಲೆ ಏರಿಕೆ ಬವಣೆಯಿಂದ ಶಾಪ ಹಾಕುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಕೋಲಾರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ‘ರಾಜಕೀಯ ಪಕ್ಷಗಳ ಪ್ರಣಾಳಿಕೆ ಎಂದರೆ ಜನತಾ ಜನಾರ್ಧನನಿಗೆ ನೀಡುವ ವಾಗ್ದಾನ. ಅದನ್ನು ಪಕ್ಷ ಈಡೇರಿಸದೇ ಇದ್ದರೆ ಮಹಾಪಾಪ’ ಎಂದು ತುಂಬಾ ಖಚಿತವಾಗಿ ಆತ್ಮವಿಶ್ವಾಸದಿಂದ ನುಡಿದಿದ್ದರು. ಅಧಿಕಾರಕ್ಕೆ ಬರುವವರು ಹೇಗಿರಬೇಕು ಎನ್ನುವಂತೆ ಇವರ ಮಾತಗಳಿದ್ದವು. ಆದರೆ, ಅವರ ಅಧಿಕಾರದಲ್ಲಿ ನಡೆದದ್ದೆಲ್ಲವೂ ಜನ ವಿರೋಧಿ ಕೆಲಸಗಳೇ,” ಎಂದರು.

“ಇರಲಿ, ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂಬ ಮೋದಿಯವರ ಮಾತನ್ನು ನಂಬಿ ಮತ ಕೊಟ್ಟು ಗೆಲ್ಲಿಸಿ ಇದ್ದಬದ್ದ ಉದ್ಯೋಗವನ್ನು ಕಳೆದುಕೊಂಡಿದ್ದೀವಿ. ಉದ್ಯೋಗ ಸೃಷ್ಠಿಸುತ್ತಿದ್ದ ಸಣ್ಣ ಕೈಗಾರಿಕೆ, ಅತೀಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡದೆ ಅವು ಕೋಟಿ ಸಂಖ್ಯೆಯಲ್ಲಿ ಮುಚ್ಚಿ ಹೋಗಿವೆ. ಆದರೆ, ಇನ್ನೊಂದು ಕಡೆ ಮೋದಿ ಅವರ ಪರಮಾಪ್ತ ಅದಾನಿ, ಅಂಬಾನಿ ಮುಂತಾದ ಬಂಡವಾಳಶಾಹಿಗಳ ಸಂಪತ್ತು ದ್ವಿಗುಣ ಆಗಿದೆ. ಇದುವರೆಗೂ ಉಳ್ಳವರ ಸಂಪತ್ತು ಡಬಲ್‌ ಆಗುತ್ತಿದೆ ಬಡವರ ಸಂಖ್ಯೆ ಹೆಚ್ಚುತ್ತಿದೆಯಲ್ಲ? ಮಧ್ಯಮ ವರ್ಗ ಬಡತನ ರೇಖೆ ಕಡೆ ಚಲಿಸುತ್ತಿದೆಯಲ್ಲ” ಎಂದು ವಿಷಾದಿಸಿದರು.

“2013-14ನೇ ಸಾಲಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಾಗ ನೀಡಿದ್ದ ಪ್ರಣಾಳಿಕೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಶೇ.50 ರಷ್ಟು ಬೆಂಬಲ ಬೆಲೆ ನೀಡುತ್ತೇವೆ ಎಂದು ಹೇಳಿದ್ದರು. ಅದು ಏನಾಯ್ತು? ಕೃಷಿ ಉತ್ಪನ್ನಗಳಿಗೆ ಕಾಂಗ್ರೆಸ್ ಕಾಲದಲ್ಲಿ ಸಿಗುತ್ತಿದ್ದಕ್ಕಿಂತ ಕಡಿಮೆ ಬೆಲೆ ಸಿಗುತ್ತಿದೆ” ಎಂದು ಹೇಳಿದರು.

ದೇವನೂರ ಮಹಾದೇವ

“ಮೋದಿ ಆಡಿದ ಮಾತುಗಳನ್ನು ಮತದಾರರು ತುಂಬಾ ನಂಬಿದ್ದರು. ಬಹಳ ಬೆಲೆ ಕೊಟ್ಟಿದ್ದರು. ಈಗಲೂ ಒಂದಿಷ್ಟು ಜನ ನಂಬುತ್ತಿದ್ದಾರೆ. ನನ್ನ ಪ್ರಶ್ನೆ ಇಷ್ಟೆ, ಮೋದಿಯವರೇ ನಿಮ್ಮ ಮಾತಿಗೆ ನಮ್ಮ ಜನ ಇಷ್ಟೊಂದು ಬೆಲೆ ಕೊಟ್ಟಿದ್ದಾರೆ, ಇಷ್ಟೊಂದು ಗೌರವ ಕೊಟ್ಟಿದ್ದಾರೆ, ನಂಬಿದ್ದಾರೆ, ಹೀಗಿರುವಾಗ ನಿಮ್ಮ ಮಾತಿನ ಬಗ್ಗೆ ನಿಮಗೆ ಬೆಲೆ ಇಲ್ಲವೆ? ನಿಮ್ಮ ಮಾತನ್ನು ನೀವೇ ನಂಬೋದಿಲ್ಲವೇ” ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್ ಚುಚ್ಚಲಾಗಿದೆ: ದೇಮ

ಬಿಜೆಪಿಯಲ್ಲಾಗಿರುವ ಬದಲಾವಣೆಗಳನ್ನು ಉಲ್ಲೇಖಿಸಿ ಮಾತನಾಡಿರುವ ದೇವನೂರ ಮಹಾದೇವ ಅವರು, “ಇಂದಿನ ರಾಜಕಾರಣದ ಒಳಹೊಕ್ಕು ನೋಡುವುದಾದರೆ ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ. ಇನ್ನೆರಡು ಬಲಿಷ್ಠ ವೃಕ್ಷಗಳಾದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿಯನ್ನು ಬುಡಸಮೇತ ಕತ್ತರಿಸಿ ಎಸೆಯಲಾಗಿದೆ. ಇನ್ನೊಂದು ಸ್ವಲ್ಪ ಗಟ್ಟಿ ಮರ ಅನ್ನಬಹುದಾದ ಸೋಮಣ್ಣನವರಿಗೆ ಫನಿಷ್‌ಮೆಂಟ್‌ ಟ್ರಾನ್ಸ್‌ಫರ್‌ ಮಾಡಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಡಲಾಗಿದೆ. ಮುಂದೆ ತುಂಬಾ ಚೆನ್ನಾಗಿ ಬೆಳೆದುಬಿಡುತ್ತಾರೆ ಎಂಬ ಭರವಸೆ ಹಿಡಿಸಿ ಎಳೆಕರುವನ್ನು ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ” ಎಂದು ಮಾರ್ಮಿಕವಾಗಿ ನುಡಿದರು.

“ಮೇಲೆ ಉಲ್ಲೇಖಿಸಿದ ವ್ಯಕ್ತಿಗಳ ಬಗ್ಗೆ ಆಕ್ಷೇಪಣೆಗಳು ಏನೇ ಇರಲಿ. ಏನಿದರ ಮರ್ಮ? ನನಗೆ ಅನಿಸುವುದು ಇಷ್ಟೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗೆ ಜನನಾಯಕರು, ಸಮುದಾಯದ ನಾಯಕರು ಬೇಕಾಗಿಲ್ಲ. ಅವರಿಗೆ ಛಲವಾದಿ ನಾರಾಯಣಸ್ವಾಮಿ ರೀತಿಯ ಕಾಲಾಳುಗಳು ಮಾತ್ರ ಬೇಕು” ಎಂದು ಟೀಕಿಸಿದ್ದಾರೆ.

“ಈಗ ಲಿಂಗಾಯತ ಆಯಿತು, ಮುಂದೆ ಒಕ್ಕಲಿಗ ನಾಯಕರಿಗೆ ಸರದಿ ಕಾದಿದೆ. ರಾಜ್ಯದಲ್ಲಿ ಪ್ರಲ್ಹಾದ್‌ ಜೋಶಿ, ಸಂತೋಷ್‌ ಮತ್ತೊಬ್ಬರಿಗಷ್ಟೇ ಅವಕಾಶ. ಇದು ಬಿಜೆಪಿಯ ಗರ್ಭಗುಡಿ ಆರ್‌ಎಸ್‌ಎಸ್‌ನ ಫರ್ಮಾನ್‌. ಇದು ಎಲ್ಲಿಗೆ ಕೆರೆದುಕೊಂಡು ಹೋಗುತ್ತದೆ ಎಂದರೆ, ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‌ ಮತ್ತು ಇಟಲಿಯ ಮುಸಲೋನಿಯ ಮಿಶ್ರ ಆಳ್ವಿಕೆ ಕಡೆಗೆ ಕೊಂಡೊಯ್ಯುತ್ತದೆ” ಎಂದು ಎಚ್ಚರಿಸಿದರು.

“ಬಿಜೆಪಿ ಕಾಲಾಳು ಪಕ್ಷ ಮಾಡುತ್ತಿರುವುದು, ಯಾಕೆಂದರೆ ಅದು ಸಂವಿಧಾನವನ್ನು ಬದಲಾಯಿಸಬೇಕು. ಚಾತುರ್ವರ್ಣದ ಮನುಧರ್ಮಶಾಸ್ತ್ರವನ್ನು ಭಾರತದ ಸಂವಿಧಾನವನ್ನಾಗಿಸಬೇಕು. ಇದು ಅವರ ಹಿಂದೂ ರಾಷ್ಟ್ರ ಎನ್ನುವುದು ಆರ್‌ಎಸ್‌ಎಸ್‌ ಗರ್ಭಗುಡಿಯ ಕಟ್ಟಪ್ಪಣೆ” ಎಂದು ಭವಿಷ್ಯ ನುಡಿದರು.

“ಕೊನೆಯದಾಗಿ ಒಂದು ಮಾತು, ಇಡೀ ವರುಣಾ ಕ್ಷೇತ್ರ ತುಂಬಾ ಎಚ್ಚರಿಕೆಯಿಂದ ಇರಬೇಕು. ಒಳಗೆ ಕಲ್ಲಿಟ್ಟು ಅದರ ಸುತ್ತ ಹೂವು ಸುತ್ತಿ ಡಾ. ಜಿ ಪರಮೇಶ್ವರ್‌ ಅವರ ತಲೆಗೆ ಎಸೆದು ರಕ್ತ ಬರಿಸಿದ್ದಾರೆ. ಇಲ್ಲೂ ಆಗಬಹುದು. ಹೂವು ಸುತ್ತಿ ಕಲ್ಲು ಎಸೆಯುವುದು ಸಂಘ ಪರಿವಾರದ ರಾಜಕಾರಣದ ವೈಖರಿ” ಎಂದು ಆತಂಕ ವ್ಯಕ್ತಪಡಿಸಿದರು.

“ನೆನಪಿಡಿ ರಾಜ್ಯದ ಬಿಜೆಪಿಯ ನಾಯಕರೊಬ್ಬರು ಕ್ಷೇತ್ರದಲ್ಲಿ ಒಂದು ಹೆಣ ಬೀಳಿಸಿದರೆ ಎರಡು ಕ್ಷೇತ್ರ ಗೆದ್ದಂತೆ ಎಂದು ಹೇಳಿದ್ದು ಸುದ್ದಿಯಾಗಿತ್ತು. ಪ್ರಿಯಾಂಕ್‌ ಖರ್ಗೆ ವಿರುದ್ಧ ರೌಡಿಶೀಟರ್‌, ಗಡಿಪಾರು ಆಗಿದ್ದ ವ್ಯಕ್ತಿಯನ್ನು ಬಿಜೆಪಿ ನಿಲ್ಲಿಸಿದೆ. ಇಂತಹ ಭೂಗತ ರಾಜಕಾರಣ ಇಂದು ನಡೆಯುತ್ತಿದೆ. ದಯವಿಟ್ಟು ಎಚ್ಚರವಿರಿ. ಈ ರೀತಿ ಹೊಡಿಬಡಿ ರಕ್ತಪಾತದ ರಾಜಕಾರಣ ಆಗದಂತೆ ಎಚ್ಚರ ವಹಿಸುವುದು ನಮ್ಮ ಪೊಲೀಸ್‌ ಕರ್ತವ್ಯ” ಎಂದರು.

ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಮಾಜಿ ಅಡ್ವೋಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಲೇಖಕಿ ಪ್ರೊ. ಸುಮಿತ್ರಾ ಬಾಯಿ, ದಸಂಸ ಸಂಚಾಲಕರಾದ ಆಲಗೂಡು ಶಿವಕುಮಾರ್ ಮತ್ತಿತರರು ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...