Homeಕರ್ನಾಟಕ'ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

‘ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ ಎಂದು ದೇಮ ಹೇಳಿದ್ದಾರೆ

- Advertisement -
- Advertisement -

“ನಾನು ಅವರು-ಇವರು ಎನ್ನದೆ ಎಲ್ಲರನ್ನು ನನ್ನ ಬಂಧುಗಳೆಂದು ಭಾವಿಸುವುದರಿಂದ ಒಂದು ಮನವಿ ಮಾಡುತ್ತೇನೆ. ದಯವಿಟ್ಟು ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ, ಬಲೆಗೆ ಸಿಲುಕಬೇಡಿ. ಮುಖ ನೋಡಬೇಡಿ, ನಡೆ ನೋಡಿ. ಬಲೆಗೆ ಬಿದ್ದು ಮತ ನೀಡಿದರೆ ನಿಮ್ಮ ಬದುಕು ಇನ್ನಷ್ಟು ನರಕವಾಗುತ್ತದೆ’’ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಮನವಿ ಮಾಡಿದ್ದಾರೆ.

ರಾಜ್ಯದ ಗಮನ ಸೆಳೆದಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚಿಸಿ ಮಾತನಾಡಿರುವ ಅವರು, ‘’ಪೆಟ್ರೊಲ್‌, ಗ್ಯಾಸ್‌, ಕಾಳು, ಎಣ್ಣೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈಗಾಲೇ ಮಹಿಳೆಯರು ಬಲೆ ಏರಿಕೆ ಬವಣೆಯಿಂದ ಶಾಪ ಹಾಕುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಕೋಲಾರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ‘ರಾಜಕೀಯ ಪಕ್ಷಗಳ ಪ್ರಣಾಳಿಕೆ ಎಂದರೆ ಜನತಾ ಜನಾರ್ಧನನಿಗೆ ನೀಡುವ ವಾಗ್ದಾನ. ಅದನ್ನು ಪಕ್ಷ ಈಡೇರಿಸದೇ ಇದ್ದರೆ ಮಹಾಪಾಪ’ ಎಂದು ತುಂಬಾ ಖಚಿತವಾಗಿ ಆತ್ಮವಿಶ್ವಾಸದಿಂದ ನುಡಿದಿದ್ದರು. ಅಧಿಕಾರಕ್ಕೆ ಬರುವವರು ಹೇಗಿರಬೇಕು ಎನ್ನುವಂತೆ ಇವರ ಮಾತಗಳಿದ್ದವು. ಆದರೆ, ಅವರ ಅಧಿಕಾರದಲ್ಲಿ ನಡೆದದ್ದೆಲ್ಲವೂ ಜನ ವಿರೋಧಿ ಕೆಲಸಗಳೇ,” ಎಂದರು.

“ಇರಲಿ, ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂಬ ಮೋದಿಯವರ ಮಾತನ್ನು ನಂಬಿ ಮತ ಕೊಟ್ಟು ಗೆಲ್ಲಿಸಿ ಇದ್ದಬದ್ದ ಉದ್ಯೋಗವನ್ನು ಕಳೆದುಕೊಂಡಿದ್ದೀವಿ. ಉದ್ಯೋಗ ಸೃಷ್ಠಿಸುತ್ತಿದ್ದ ಸಣ್ಣ ಕೈಗಾರಿಕೆ, ಅತೀಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡದೆ ಅವು ಕೋಟಿ ಸಂಖ್ಯೆಯಲ್ಲಿ ಮುಚ್ಚಿ ಹೋಗಿವೆ. ಆದರೆ, ಇನ್ನೊಂದು ಕಡೆ ಮೋದಿ ಅವರ ಪರಮಾಪ್ತ ಅದಾನಿ, ಅಂಬಾನಿ ಮುಂತಾದ ಬಂಡವಾಳಶಾಹಿಗಳ ಸಂಪತ್ತು ದ್ವಿಗುಣ ಆಗಿದೆ. ಇದುವರೆಗೂ ಉಳ್ಳವರ ಸಂಪತ್ತು ಡಬಲ್‌ ಆಗುತ್ತಿದೆ ಬಡವರ ಸಂಖ್ಯೆ ಹೆಚ್ಚುತ್ತಿದೆಯಲ್ಲ? ಮಧ್ಯಮ ವರ್ಗ ಬಡತನ ರೇಖೆ ಕಡೆ ಚಲಿಸುತ್ತಿದೆಯಲ್ಲ” ಎಂದು ವಿಷಾದಿಸಿದರು.

“2013-14ನೇ ಸಾಲಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಾಗ ನೀಡಿದ್ದ ಪ್ರಣಾಳಿಕೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಶೇ.50 ರಷ್ಟು ಬೆಂಬಲ ಬೆಲೆ ನೀಡುತ್ತೇವೆ ಎಂದು ಹೇಳಿದ್ದರು. ಅದು ಏನಾಯ್ತು? ಕೃಷಿ ಉತ್ಪನ್ನಗಳಿಗೆ ಕಾಂಗ್ರೆಸ್ ಕಾಲದಲ್ಲಿ ಸಿಗುತ್ತಿದ್ದಕ್ಕಿಂತ ಕಡಿಮೆ ಬೆಲೆ ಸಿಗುತ್ತಿದೆ” ಎಂದು ಹೇಳಿದರು.

ದೇವನೂರ ಮಹಾದೇವ

“ಮೋದಿ ಆಡಿದ ಮಾತುಗಳನ್ನು ಮತದಾರರು ತುಂಬಾ ನಂಬಿದ್ದರು. ಬಹಳ ಬೆಲೆ ಕೊಟ್ಟಿದ್ದರು. ಈಗಲೂ ಒಂದಿಷ್ಟು ಜನ ನಂಬುತ್ತಿದ್ದಾರೆ. ನನ್ನ ಪ್ರಶ್ನೆ ಇಷ್ಟೆ, ಮೋದಿಯವರೇ ನಿಮ್ಮ ಮಾತಿಗೆ ನಮ್ಮ ಜನ ಇಷ್ಟೊಂದು ಬೆಲೆ ಕೊಟ್ಟಿದ್ದಾರೆ, ಇಷ್ಟೊಂದು ಗೌರವ ಕೊಟ್ಟಿದ್ದಾರೆ, ನಂಬಿದ್ದಾರೆ, ಹೀಗಿರುವಾಗ ನಿಮ್ಮ ಮಾತಿನ ಬಗ್ಗೆ ನಿಮಗೆ ಬೆಲೆ ಇಲ್ಲವೆ? ನಿಮ್ಮ ಮಾತನ್ನು ನೀವೇ ನಂಬೋದಿಲ್ಲವೇ” ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್ ಚುಚ್ಚಲಾಗಿದೆ: ದೇಮ

ಬಿಜೆಪಿಯಲ್ಲಾಗಿರುವ ಬದಲಾವಣೆಗಳನ್ನು ಉಲ್ಲೇಖಿಸಿ ಮಾತನಾಡಿರುವ ದೇವನೂರ ಮಹಾದೇವ ಅವರು, “ಇಂದಿನ ರಾಜಕಾರಣದ ಒಳಹೊಕ್ಕು ನೋಡುವುದಾದರೆ ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ. ಇನ್ನೆರಡು ಬಲಿಷ್ಠ ವೃಕ್ಷಗಳಾದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿಯನ್ನು ಬುಡಸಮೇತ ಕತ್ತರಿಸಿ ಎಸೆಯಲಾಗಿದೆ. ಇನ್ನೊಂದು ಸ್ವಲ್ಪ ಗಟ್ಟಿ ಮರ ಅನ್ನಬಹುದಾದ ಸೋಮಣ್ಣನವರಿಗೆ ಫನಿಷ್‌ಮೆಂಟ್‌ ಟ್ರಾನ್ಸ್‌ಫರ್‌ ಮಾಡಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಡಲಾಗಿದೆ. ಮುಂದೆ ತುಂಬಾ ಚೆನ್ನಾಗಿ ಬೆಳೆದುಬಿಡುತ್ತಾರೆ ಎಂಬ ಭರವಸೆ ಹಿಡಿಸಿ ಎಳೆಕರುವನ್ನು ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ” ಎಂದು ಮಾರ್ಮಿಕವಾಗಿ ನುಡಿದರು.

“ಮೇಲೆ ಉಲ್ಲೇಖಿಸಿದ ವ್ಯಕ್ತಿಗಳ ಬಗ್ಗೆ ಆಕ್ಷೇಪಣೆಗಳು ಏನೇ ಇರಲಿ. ಏನಿದರ ಮರ್ಮ? ನನಗೆ ಅನಿಸುವುದು ಇಷ್ಟೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗೆ ಜನನಾಯಕರು, ಸಮುದಾಯದ ನಾಯಕರು ಬೇಕಾಗಿಲ್ಲ. ಅವರಿಗೆ ಛಲವಾದಿ ನಾರಾಯಣಸ್ವಾಮಿ ರೀತಿಯ ಕಾಲಾಳುಗಳು ಮಾತ್ರ ಬೇಕು” ಎಂದು ಟೀಕಿಸಿದ್ದಾರೆ.

“ಈಗ ಲಿಂಗಾಯತ ಆಯಿತು, ಮುಂದೆ ಒಕ್ಕಲಿಗ ನಾಯಕರಿಗೆ ಸರದಿ ಕಾದಿದೆ. ರಾಜ್ಯದಲ್ಲಿ ಪ್ರಲ್ಹಾದ್‌ ಜೋಶಿ, ಸಂತೋಷ್‌ ಮತ್ತೊಬ್ಬರಿಗಷ್ಟೇ ಅವಕಾಶ. ಇದು ಬಿಜೆಪಿಯ ಗರ್ಭಗುಡಿ ಆರ್‌ಎಸ್‌ಎಸ್‌ನ ಫರ್ಮಾನ್‌. ಇದು ಎಲ್ಲಿಗೆ ಕೆರೆದುಕೊಂಡು ಹೋಗುತ್ತದೆ ಎಂದರೆ, ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‌ ಮತ್ತು ಇಟಲಿಯ ಮುಸಲೋನಿಯ ಮಿಶ್ರ ಆಳ್ವಿಕೆ ಕಡೆಗೆ ಕೊಂಡೊಯ್ಯುತ್ತದೆ” ಎಂದು ಎಚ್ಚರಿಸಿದರು.

“ಬಿಜೆಪಿ ಕಾಲಾಳು ಪಕ್ಷ ಮಾಡುತ್ತಿರುವುದು, ಯಾಕೆಂದರೆ ಅದು ಸಂವಿಧಾನವನ್ನು ಬದಲಾಯಿಸಬೇಕು. ಚಾತುರ್ವರ್ಣದ ಮನುಧರ್ಮಶಾಸ್ತ್ರವನ್ನು ಭಾರತದ ಸಂವಿಧಾನವನ್ನಾಗಿಸಬೇಕು. ಇದು ಅವರ ಹಿಂದೂ ರಾಷ್ಟ್ರ ಎನ್ನುವುದು ಆರ್‌ಎಸ್‌ಎಸ್‌ ಗರ್ಭಗುಡಿಯ ಕಟ್ಟಪ್ಪಣೆ” ಎಂದು ಭವಿಷ್ಯ ನುಡಿದರು.

“ಕೊನೆಯದಾಗಿ ಒಂದು ಮಾತು, ಇಡೀ ವರುಣಾ ಕ್ಷೇತ್ರ ತುಂಬಾ ಎಚ್ಚರಿಕೆಯಿಂದ ಇರಬೇಕು. ಒಳಗೆ ಕಲ್ಲಿಟ್ಟು ಅದರ ಸುತ್ತ ಹೂವು ಸುತ್ತಿ ಡಾ. ಜಿ ಪರಮೇಶ್ವರ್‌ ಅವರ ತಲೆಗೆ ಎಸೆದು ರಕ್ತ ಬರಿಸಿದ್ದಾರೆ. ಇಲ್ಲೂ ಆಗಬಹುದು. ಹೂವು ಸುತ್ತಿ ಕಲ್ಲು ಎಸೆಯುವುದು ಸಂಘ ಪರಿವಾರದ ರಾಜಕಾರಣದ ವೈಖರಿ” ಎಂದು ಆತಂಕ ವ್ಯಕ್ತಪಡಿಸಿದರು.

“ನೆನಪಿಡಿ ರಾಜ್ಯದ ಬಿಜೆಪಿಯ ನಾಯಕರೊಬ್ಬರು ಕ್ಷೇತ್ರದಲ್ಲಿ ಒಂದು ಹೆಣ ಬೀಳಿಸಿದರೆ ಎರಡು ಕ್ಷೇತ್ರ ಗೆದ್ದಂತೆ ಎಂದು ಹೇಳಿದ್ದು ಸುದ್ದಿಯಾಗಿತ್ತು. ಪ್ರಿಯಾಂಕ್‌ ಖರ್ಗೆ ವಿರುದ್ಧ ರೌಡಿಶೀಟರ್‌, ಗಡಿಪಾರು ಆಗಿದ್ದ ವ್ಯಕ್ತಿಯನ್ನು ಬಿಜೆಪಿ ನಿಲ್ಲಿಸಿದೆ. ಇಂತಹ ಭೂಗತ ರಾಜಕಾರಣ ಇಂದು ನಡೆಯುತ್ತಿದೆ. ದಯವಿಟ್ಟು ಎಚ್ಚರವಿರಿ. ಈ ರೀತಿ ಹೊಡಿಬಡಿ ರಕ್ತಪಾತದ ರಾಜಕಾರಣ ಆಗದಂತೆ ಎಚ್ಚರ ವಹಿಸುವುದು ನಮ್ಮ ಪೊಲೀಸ್‌ ಕರ್ತವ್ಯ” ಎಂದರು.

ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಮಾಜಿ ಅಡ್ವೋಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಲೇಖಕಿ ಪ್ರೊ. ಸುಮಿತ್ರಾ ಬಾಯಿ, ದಸಂಸ ಸಂಚಾಲಕರಾದ ಆಲಗೂಡು ಶಿವಕುಮಾರ್ ಮತ್ತಿತರರು ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....