Homeಕರ್ನಾಟಕ'ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

‘ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ’: ವರುಣಾದಲ್ಲಿ ಪ್ರಚಾರ ವೇಳೆ ದೇವನೂರ ಮಹಾದೇವ ಮನವಿ

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ ಎಂದು ದೇಮ ಹೇಳಿದ್ದಾರೆ

- Advertisement -
- Advertisement -

“ನಾನು ಅವರು-ಇವರು ಎನ್ನದೆ ಎಲ್ಲರನ್ನು ನನ್ನ ಬಂಧುಗಳೆಂದು ಭಾವಿಸುವುದರಿಂದ ಒಂದು ಮನವಿ ಮಾಡುತ್ತೇನೆ. ದಯವಿಟ್ಟು ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ, ಬಲೆಗೆ ಸಿಲುಕಬೇಡಿ. ಮುಖ ನೋಡಬೇಡಿ, ನಡೆ ನೋಡಿ. ಬಲೆಗೆ ಬಿದ್ದು ಮತ ನೀಡಿದರೆ ನಿಮ್ಮ ಬದುಕು ಇನ್ನಷ್ಟು ನರಕವಾಗುತ್ತದೆ’’ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಮನವಿ ಮಾಡಿದ್ದಾರೆ.

ರಾಜ್ಯದ ಗಮನ ಸೆಳೆದಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚಿಸಿ ಮಾತನಾಡಿರುವ ಅವರು, ‘’ಪೆಟ್ರೊಲ್‌, ಗ್ಯಾಸ್‌, ಕಾಳು, ಎಣ್ಣೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈಗಾಲೇ ಮಹಿಳೆಯರು ಬಲೆ ಏರಿಕೆ ಬವಣೆಯಿಂದ ಶಾಪ ಹಾಕುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಕೋಲಾರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ‘ರಾಜಕೀಯ ಪಕ್ಷಗಳ ಪ್ರಣಾಳಿಕೆ ಎಂದರೆ ಜನತಾ ಜನಾರ್ಧನನಿಗೆ ನೀಡುವ ವಾಗ್ದಾನ. ಅದನ್ನು ಪಕ್ಷ ಈಡೇರಿಸದೇ ಇದ್ದರೆ ಮಹಾಪಾಪ’ ಎಂದು ತುಂಬಾ ಖಚಿತವಾಗಿ ಆತ್ಮವಿಶ್ವಾಸದಿಂದ ನುಡಿದಿದ್ದರು. ಅಧಿಕಾರಕ್ಕೆ ಬರುವವರು ಹೇಗಿರಬೇಕು ಎನ್ನುವಂತೆ ಇವರ ಮಾತಗಳಿದ್ದವು. ಆದರೆ, ಅವರ ಅಧಿಕಾರದಲ್ಲಿ ನಡೆದದ್ದೆಲ್ಲವೂ ಜನ ವಿರೋಧಿ ಕೆಲಸಗಳೇ,” ಎಂದರು.

“ಇರಲಿ, ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂಬ ಮೋದಿಯವರ ಮಾತನ್ನು ನಂಬಿ ಮತ ಕೊಟ್ಟು ಗೆಲ್ಲಿಸಿ ಇದ್ದಬದ್ದ ಉದ್ಯೋಗವನ್ನು ಕಳೆದುಕೊಂಡಿದ್ದೀವಿ. ಉದ್ಯೋಗ ಸೃಷ್ಠಿಸುತ್ತಿದ್ದ ಸಣ್ಣ ಕೈಗಾರಿಕೆ, ಅತೀಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡದೆ ಅವು ಕೋಟಿ ಸಂಖ್ಯೆಯಲ್ಲಿ ಮುಚ್ಚಿ ಹೋಗಿವೆ. ಆದರೆ, ಇನ್ನೊಂದು ಕಡೆ ಮೋದಿ ಅವರ ಪರಮಾಪ್ತ ಅದಾನಿ, ಅಂಬಾನಿ ಮುಂತಾದ ಬಂಡವಾಳಶಾಹಿಗಳ ಸಂಪತ್ತು ದ್ವಿಗುಣ ಆಗಿದೆ. ಇದುವರೆಗೂ ಉಳ್ಳವರ ಸಂಪತ್ತು ಡಬಲ್‌ ಆಗುತ್ತಿದೆ ಬಡವರ ಸಂಖ್ಯೆ ಹೆಚ್ಚುತ್ತಿದೆಯಲ್ಲ? ಮಧ್ಯಮ ವರ್ಗ ಬಡತನ ರೇಖೆ ಕಡೆ ಚಲಿಸುತ್ತಿದೆಯಲ್ಲ” ಎಂದು ವಿಷಾದಿಸಿದರು.

“2013-14ನೇ ಸಾಲಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಾಗ ನೀಡಿದ್ದ ಪ್ರಣಾಳಿಕೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಶೇ.50 ರಷ್ಟು ಬೆಂಬಲ ಬೆಲೆ ನೀಡುತ್ತೇವೆ ಎಂದು ಹೇಳಿದ್ದರು. ಅದು ಏನಾಯ್ತು? ಕೃಷಿ ಉತ್ಪನ್ನಗಳಿಗೆ ಕಾಂಗ್ರೆಸ್ ಕಾಲದಲ್ಲಿ ಸಿಗುತ್ತಿದ್ದಕ್ಕಿಂತ ಕಡಿಮೆ ಬೆಲೆ ಸಿಗುತ್ತಿದೆ” ಎಂದು ಹೇಳಿದರು.

ದೇವನೂರ ಮಹಾದೇವ

“ಮೋದಿ ಆಡಿದ ಮಾತುಗಳನ್ನು ಮತದಾರರು ತುಂಬಾ ನಂಬಿದ್ದರು. ಬಹಳ ಬೆಲೆ ಕೊಟ್ಟಿದ್ದರು. ಈಗಲೂ ಒಂದಿಷ್ಟು ಜನ ನಂಬುತ್ತಿದ್ದಾರೆ. ನನ್ನ ಪ್ರಶ್ನೆ ಇಷ್ಟೆ, ಮೋದಿಯವರೇ ನಿಮ್ಮ ಮಾತಿಗೆ ನಮ್ಮ ಜನ ಇಷ್ಟೊಂದು ಬೆಲೆ ಕೊಟ್ಟಿದ್ದಾರೆ, ಇಷ್ಟೊಂದು ಗೌರವ ಕೊಟ್ಟಿದ್ದಾರೆ, ನಂಬಿದ್ದಾರೆ, ಹೀಗಿರುವಾಗ ನಿಮ್ಮ ಮಾತಿನ ಬಗ್ಗೆ ನಿಮಗೆ ಬೆಲೆ ಇಲ್ಲವೆ? ನಿಮ್ಮ ಮಾತನ್ನು ನೀವೇ ನಂಬೋದಿಲ್ಲವೇ” ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್ ಚುಚ್ಚಲಾಗಿದೆ: ದೇಮ

ಬಿಜೆಪಿಯಲ್ಲಾಗಿರುವ ಬದಲಾವಣೆಗಳನ್ನು ಉಲ್ಲೇಖಿಸಿ ಮಾತನಾಡಿರುವ ದೇವನೂರ ಮಹಾದೇವ ಅವರು, “ಇಂದಿನ ರಾಜಕಾರಣದ ಒಳಹೊಕ್ಕು ನೋಡುವುದಾದರೆ ಯಡಿಯೂರಪ್ಪ ಎಂಬ ಬೃಹತ್‌ ವೃಕ್ಷಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ. ಇನ್ನೆರಡು ಬಲಿಷ್ಠ ವೃಕ್ಷಗಳಾದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿಯನ್ನು ಬುಡಸಮೇತ ಕತ್ತರಿಸಿ ಎಸೆಯಲಾಗಿದೆ. ಇನ್ನೊಂದು ಸ್ವಲ್ಪ ಗಟ್ಟಿ ಮರ ಅನ್ನಬಹುದಾದ ಸೋಮಣ್ಣನವರಿಗೆ ಫನಿಷ್‌ಮೆಂಟ್‌ ಟ್ರಾನ್ಸ್‌ಫರ್‌ ಮಾಡಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಡಲಾಗಿದೆ. ಮುಂದೆ ತುಂಬಾ ಚೆನ್ನಾಗಿ ಬೆಳೆದುಬಿಡುತ್ತಾರೆ ಎಂಬ ಭರವಸೆ ಹಿಡಿಸಿ ಎಳೆಕರುವನ್ನು ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ” ಎಂದು ಮಾರ್ಮಿಕವಾಗಿ ನುಡಿದರು.

“ಮೇಲೆ ಉಲ್ಲೇಖಿಸಿದ ವ್ಯಕ್ತಿಗಳ ಬಗ್ಗೆ ಆಕ್ಷೇಪಣೆಗಳು ಏನೇ ಇರಲಿ. ಏನಿದರ ಮರ್ಮ? ನನಗೆ ಅನಿಸುವುದು ಇಷ್ಟೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗೆ ಜನನಾಯಕರು, ಸಮುದಾಯದ ನಾಯಕರು ಬೇಕಾಗಿಲ್ಲ. ಅವರಿಗೆ ಛಲವಾದಿ ನಾರಾಯಣಸ್ವಾಮಿ ರೀತಿಯ ಕಾಲಾಳುಗಳು ಮಾತ್ರ ಬೇಕು” ಎಂದು ಟೀಕಿಸಿದ್ದಾರೆ.

“ಈಗ ಲಿಂಗಾಯತ ಆಯಿತು, ಮುಂದೆ ಒಕ್ಕಲಿಗ ನಾಯಕರಿಗೆ ಸರದಿ ಕಾದಿದೆ. ರಾಜ್ಯದಲ್ಲಿ ಪ್ರಲ್ಹಾದ್‌ ಜೋಶಿ, ಸಂತೋಷ್‌ ಮತ್ತೊಬ್ಬರಿಗಷ್ಟೇ ಅವಕಾಶ. ಇದು ಬಿಜೆಪಿಯ ಗರ್ಭಗುಡಿ ಆರ್‌ಎಸ್‌ಎಸ್‌ನ ಫರ್ಮಾನ್‌. ಇದು ಎಲ್ಲಿಗೆ ಕೆರೆದುಕೊಂಡು ಹೋಗುತ್ತದೆ ಎಂದರೆ, ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‌ ಮತ್ತು ಇಟಲಿಯ ಮುಸಲೋನಿಯ ಮಿಶ್ರ ಆಳ್ವಿಕೆ ಕಡೆಗೆ ಕೊಂಡೊಯ್ಯುತ್ತದೆ” ಎಂದು ಎಚ್ಚರಿಸಿದರು.

“ಬಿಜೆಪಿ ಕಾಲಾಳು ಪಕ್ಷ ಮಾಡುತ್ತಿರುವುದು, ಯಾಕೆಂದರೆ ಅದು ಸಂವಿಧಾನವನ್ನು ಬದಲಾಯಿಸಬೇಕು. ಚಾತುರ್ವರ್ಣದ ಮನುಧರ್ಮಶಾಸ್ತ್ರವನ್ನು ಭಾರತದ ಸಂವಿಧಾನವನ್ನಾಗಿಸಬೇಕು. ಇದು ಅವರ ಹಿಂದೂ ರಾಷ್ಟ್ರ ಎನ್ನುವುದು ಆರ್‌ಎಸ್‌ಎಸ್‌ ಗರ್ಭಗುಡಿಯ ಕಟ್ಟಪ್ಪಣೆ” ಎಂದು ಭವಿಷ್ಯ ನುಡಿದರು.

“ಕೊನೆಯದಾಗಿ ಒಂದು ಮಾತು, ಇಡೀ ವರುಣಾ ಕ್ಷೇತ್ರ ತುಂಬಾ ಎಚ್ಚರಿಕೆಯಿಂದ ಇರಬೇಕು. ಒಳಗೆ ಕಲ್ಲಿಟ್ಟು ಅದರ ಸುತ್ತ ಹೂವು ಸುತ್ತಿ ಡಾ. ಜಿ ಪರಮೇಶ್ವರ್‌ ಅವರ ತಲೆಗೆ ಎಸೆದು ರಕ್ತ ಬರಿಸಿದ್ದಾರೆ. ಇಲ್ಲೂ ಆಗಬಹುದು. ಹೂವು ಸುತ್ತಿ ಕಲ್ಲು ಎಸೆಯುವುದು ಸಂಘ ಪರಿವಾರದ ರಾಜಕಾರಣದ ವೈಖರಿ” ಎಂದು ಆತಂಕ ವ್ಯಕ್ತಪಡಿಸಿದರು.

“ನೆನಪಿಡಿ ರಾಜ್ಯದ ಬಿಜೆಪಿಯ ನಾಯಕರೊಬ್ಬರು ಕ್ಷೇತ್ರದಲ್ಲಿ ಒಂದು ಹೆಣ ಬೀಳಿಸಿದರೆ ಎರಡು ಕ್ಷೇತ್ರ ಗೆದ್ದಂತೆ ಎಂದು ಹೇಳಿದ್ದು ಸುದ್ದಿಯಾಗಿತ್ತು. ಪ್ರಿಯಾಂಕ್‌ ಖರ್ಗೆ ವಿರುದ್ಧ ರೌಡಿಶೀಟರ್‌, ಗಡಿಪಾರು ಆಗಿದ್ದ ವ್ಯಕ್ತಿಯನ್ನು ಬಿಜೆಪಿ ನಿಲ್ಲಿಸಿದೆ. ಇಂತಹ ಭೂಗತ ರಾಜಕಾರಣ ಇಂದು ನಡೆಯುತ್ತಿದೆ. ದಯವಿಟ್ಟು ಎಚ್ಚರವಿರಿ. ಈ ರೀತಿ ಹೊಡಿಬಡಿ ರಕ್ತಪಾತದ ರಾಜಕಾರಣ ಆಗದಂತೆ ಎಚ್ಚರ ವಹಿಸುವುದು ನಮ್ಮ ಪೊಲೀಸ್‌ ಕರ್ತವ್ಯ” ಎಂದರು.

ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಮಾಜಿ ಅಡ್ವೋಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಲೇಖಕಿ ಪ್ರೊ. ಸುಮಿತ್ರಾ ಬಾಯಿ, ದಸಂಸ ಸಂಚಾಲಕರಾದ ಆಲಗೂಡು ಶಿವಕುಮಾರ್ ಮತ್ತಿತರರು ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...