Homeಕರ್ನಾಟಕಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

”ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ, ಅವರು ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ ಈ ಬಗ್ಗೆ ಎಚ್ಚರದಿಂದಿರಿ” ಎಂದು ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

”ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳನ್ನು ಸೃಷ್ಟಿಸಿ, ಅದನ್ನು ಸತ್ಯ ಎನ್ನುವಂತೆ ಬಿಂಬಿಸುತ್ತಾರೆ. ಇದಕ್ಕಾಗಿ ಅವರು ವಿಪರೀತ ಖರ್ಚು ಮಾಡುತ್ತಾರೆ. ಇದನ್ನೆಲ್ಲಾ ನಾವು ಸರಿಯಾಗಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕು” ಎಂದು ತಮ್ಮ ಎಲ್ಲ ಶಾಸಕರಿಗೂ ಸಿದ್ದರಾಮಯ್ಯ ಹೇಳಿದರು.

”ಹೊಸ ಸರ್ಕಾರ ಬಂದ ಬಳಿಕ ನಮ್ಮ ಎದುರಿಗೆ ತಕ್ಷಣಕ್ಕೆ ರಾಜ್ಯದ ಆರ್ಥಿಕತೆಯನ್ನು ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿ ಇತ್ತು. ಜತೆಗೆ ಆಯವ್ಯಯ ರೂಪಿಸುವ ಹೊಣೆಗಾರಿಕೆಯೂ ಇತ್ತು ಹಾಗೂ ಹೊಸ ಸರ್ಕಾರವಾದ್ದರಿಂದ ಜಂಟಿ ಅಧಿವೇಶನವನ್ನೂ ಕರೆಯಬೇಕಿತ್ತು. ಹೊಸ ಶಾಸಕರಿಗೂ ತಮ್ಮ ಅಭಿಪ್ರಾಯ, ನಿಲುವನ್ನು ವ್ಯಕ್ತಪಡಿಸಲು ಅವಕಾಶ ಆಗಬೇಕು ಎನ್ನುವ ಕಾರಣದಿಂದ ಮೂರು ವಾರ ಮೊದಲ ಅಧಿವೇಶನವನ್ನು ನಡೆಸಿದೆವು” ಎಂದರು.

”ಈ ಆಯವ್ಯಯ ಅತ್ಯಂತ ಮಹತ್ವದ್ದಾಗಿತ್ತು. ಐದು ಗ್ಯಾರಂಟಿಗಳನ್ನು ಜಾರಿ ಮಾಡಲು 58 ಸಾವಿರ ಕೋಟಿ ರೂಪಾಯಿ ಬೇಕು ಎಂದು ಅಂದಾಜಿಸಲಾಗಿತ್ತು. ಹೀಗಾಗಿ ಈ ಆಯವ್ಯಯವನ್ನು ಅತ್ಯಂತ ಎಚ್ಚರಿಕೆಯಿಂದ ರೂಪಿಸುವುದಕ್ಕಾಗಿ, ಜತೆಗೆ ಐದು ಗ್ಯಾರಂಟಿಗಳಿಗೆ ಹಣ ಮೀಸಲಿಡುವ ಅಗತ್ಯವೂ ಇತ್ತು. ಆದ್ದರಿಂದ ನಾನೇ ಸ್ವತಃ ಬಜೆಟ್ ಸಿದ್ಧತೆಗೆ ಕೂರುವುದು ಅನಿವಾರ್ಯವಾಗಿತ್ತು. ಈ ಎಲ್ಲಾ ಕಾರಣಗಳಿಂದ ನಾನು ಇತರೆ ಸಂಗತಿಗಳ ಕಡೆಗೆ ಗಮನ ಕೊಡಲು ಸಾಧ್ಯ ಆಗಲಿಲ್ಲ” ಎಂದರು.

”ಅಧಿವೇಶನದ ನಡುವೆ ರಾಷ್ಟ್ರ ಮಟ್ಟದ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ನಡೆಸಿದೆವು. ಈ ಸಭೆ ಮುಗಿಯುತ್ತಿದ್ದಂತೆ ನಮ್ಮ ವರಿಷ್ಠರು ಶಾಸಕರು ಮತ್ತು ಸಚಿವರ ಜತೆ ಸಭೆ ನಡೆಸಲು ತೀರ್ಮಾನಿಸಿದ್ದರು. ಈ ಎರಡೂ ಕಾರಣಗಳಿಂದ ಶಾಸಕಾಂಗ ಸಭೆ ಕರೆಯುವುದು ತಡವಾಗಿದೆ” ಎಂದು ಹೇಳಿದರು.

”ಬಿಜೆಪಿಯ ದುರಾಡಳಿತ, ಬೆಲೆ ಏರಿಕೆ, ಹಣದುಬ್ಬರದಿಂದ ನಾಡಿನ ಜನತೆ ಹೈರಾಣಾಗಿ ಅವರ ಬದುಕು ದುಸ್ತರವಾಗಿತ್ತು. ಹೀಗಾಗಿ ಐದು ಗ್ಯಾರಂಟಿಗಳ ಮೂಲಕ ನಾಡಿನ ಜನತೆಯ ಸಂಕಷ್ಟಗಳಿಗೆ ಸ್ಪಂದಿಸಲು ನಾವು ಮುಂದಾದೆವು. ಇಡಿ ದೇಶದಲ್ಲಿ ಇಷ್ಟೊಂದು ದೊಡ್ಡ ಮಟ್ಟದ , ದೊಡ್ಡ ಮೊತ್ತದ ಜನ ಸ್ಪಂದನೆಯ ಯೋಜನೆಗಳನ್ನು ಜಾರಿಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ” ಎಂದರು.

”ನಮ್ಮ ಗ್ಯಾರಂಟಿ ಯೋಜನೆಗಳನ್ನು ನಮ್ಮ ನಾಡಿನ ಶೇ. 97ಕ್ಕೂ ಹೆಚ್ಚು ಜನ ಸ್ವಾಗತಿಸಿ, ಸಂಭ್ರಮಿಸಿದ್ದಾರೆ. ಸಮಾಧಾನ ಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲೆಲ್ಲಾ ವರದಿ ಮಾಡಿವೆ. ಇದು ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಎದೆ ಎತ್ತಿ ಹೆಮ್ಮೆ ಪಡುವ ಸಂದರ್ಭ” ಎಂದು ಸಂತಸ ವ್ಯಕ್ತಪಡಿಸಿದರು.

”ನಮ್ಮ ಐದು ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗಗಳ ಬದುಕಿಗೂ ಸ್ಪಂದಿಸಿವೆ. ಇದು ಬಿಜೆಪಿ ಪರಿವಾರಕ್ಕೆ ನಡುಕ ಹುಟ್ಟಿಸಿದೆ. ಹೀಗಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ವಿಪರೀತ ಸುಳ್ಳುಗಳನ್ನು, ನಕಲಿ ವಿಡಿಯೊಗಳನ್ನು ಸೃಷ್ಟಿಸುತ್ತಾರೆ. ಶಾಸಕರೊಬ್ಬರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ, ಸುದ್ದಿ ಮಾಡಿಸಿದ್ದು ಈ ಕುತಂತ್ರದ ಭಾಗವೇ ಆಗಿದೆ’ ಎಂದರು.

”ಈಗ ಶಾಸಕರೇ ಆ ಪತ್ರ ತಮ್ಮದಲ್ಲ ಎಂದು ಸ್ಪಷ್ಟನೆ ನೀಡಿದ್ದಾಗಿದೆ. ವಿಪರ್ಯಾಸ ಅಂದರೆ ಸತ್ಯ ಏನು ಎಂದು ಗೊತ್ತಾಗುವುದರೊಳಗೆ ಅವರು ಸುಳ್ಳನ್ನು ವ್ಯಾಪಕವಾಗಿ ಹರಡಿದ್ದಾರೆ” ಎಂದು ಹೇಳಿದರು.

”ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡಿ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ‌ ಸರಮಾಲೆಗಳ ಮೂಲಕ ಅವರು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿದ್ದು ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ” ಎಂದು ಎಚ್ಚರಿಸಿದರು.

”ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ” ಎಂದು ಸಿಎಂ ಸಿದ್ದರಾಮಯ್ಯ ತಿಳಿಹೇಳಿದರು.

ಇದನ್ನೂ ಓದಿ: ಲಲಿತ ಮೋದಿ, ನೀರವ್ ಮೋದಿಯನ್ನು ನಿಮ್ಮೊಂದಿಗೆ ಹೋಲಿಸಬಹುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....