Homeಕರ್ನಾಟಕಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

”ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ, ಅವರು ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ ಈ ಬಗ್ಗೆ ಎಚ್ಚರದಿಂದಿರಿ” ಎಂದು ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

”ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳನ್ನು ಸೃಷ್ಟಿಸಿ, ಅದನ್ನು ಸತ್ಯ ಎನ್ನುವಂತೆ ಬಿಂಬಿಸುತ್ತಾರೆ. ಇದಕ್ಕಾಗಿ ಅವರು ವಿಪರೀತ ಖರ್ಚು ಮಾಡುತ್ತಾರೆ. ಇದನ್ನೆಲ್ಲಾ ನಾವು ಸರಿಯಾಗಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕು” ಎಂದು ತಮ್ಮ ಎಲ್ಲ ಶಾಸಕರಿಗೂ ಸಿದ್ದರಾಮಯ್ಯ ಹೇಳಿದರು.

”ಹೊಸ ಸರ್ಕಾರ ಬಂದ ಬಳಿಕ ನಮ್ಮ ಎದುರಿಗೆ ತಕ್ಷಣಕ್ಕೆ ರಾಜ್ಯದ ಆರ್ಥಿಕತೆಯನ್ನು ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿ ಇತ್ತು. ಜತೆಗೆ ಆಯವ್ಯಯ ರೂಪಿಸುವ ಹೊಣೆಗಾರಿಕೆಯೂ ಇತ್ತು ಹಾಗೂ ಹೊಸ ಸರ್ಕಾರವಾದ್ದರಿಂದ ಜಂಟಿ ಅಧಿವೇಶನವನ್ನೂ ಕರೆಯಬೇಕಿತ್ತು. ಹೊಸ ಶಾಸಕರಿಗೂ ತಮ್ಮ ಅಭಿಪ್ರಾಯ, ನಿಲುವನ್ನು ವ್ಯಕ್ತಪಡಿಸಲು ಅವಕಾಶ ಆಗಬೇಕು ಎನ್ನುವ ಕಾರಣದಿಂದ ಮೂರು ವಾರ ಮೊದಲ ಅಧಿವೇಶನವನ್ನು ನಡೆಸಿದೆವು” ಎಂದರು.

”ಈ ಆಯವ್ಯಯ ಅತ್ಯಂತ ಮಹತ್ವದ್ದಾಗಿತ್ತು. ಐದು ಗ್ಯಾರಂಟಿಗಳನ್ನು ಜಾರಿ ಮಾಡಲು 58 ಸಾವಿರ ಕೋಟಿ ರೂಪಾಯಿ ಬೇಕು ಎಂದು ಅಂದಾಜಿಸಲಾಗಿತ್ತು. ಹೀಗಾಗಿ ಈ ಆಯವ್ಯಯವನ್ನು ಅತ್ಯಂತ ಎಚ್ಚರಿಕೆಯಿಂದ ರೂಪಿಸುವುದಕ್ಕಾಗಿ, ಜತೆಗೆ ಐದು ಗ್ಯಾರಂಟಿಗಳಿಗೆ ಹಣ ಮೀಸಲಿಡುವ ಅಗತ್ಯವೂ ಇತ್ತು. ಆದ್ದರಿಂದ ನಾನೇ ಸ್ವತಃ ಬಜೆಟ್ ಸಿದ್ಧತೆಗೆ ಕೂರುವುದು ಅನಿವಾರ್ಯವಾಗಿತ್ತು. ಈ ಎಲ್ಲಾ ಕಾರಣಗಳಿಂದ ನಾನು ಇತರೆ ಸಂಗತಿಗಳ ಕಡೆಗೆ ಗಮನ ಕೊಡಲು ಸಾಧ್ಯ ಆಗಲಿಲ್ಲ” ಎಂದರು.

”ಅಧಿವೇಶನದ ನಡುವೆ ರಾಷ್ಟ್ರ ಮಟ್ಟದ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ನಡೆಸಿದೆವು. ಈ ಸಭೆ ಮುಗಿಯುತ್ತಿದ್ದಂತೆ ನಮ್ಮ ವರಿಷ್ಠರು ಶಾಸಕರು ಮತ್ತು ಸಚಿವರ ಜತೆ ಸಭೆ ನಡೆಸಲು ತೀರ್ಮಾನಿಸಿದ್ದರು. ಈ ಎರಡೂ ಕಾರಣಗಳಿಂದ ಶಾಸಕಾಂಗ ಸಭೆ ಕರೆಯುವುದು ತಡವಾಗಿದೆ” ಎಂದು ಹೇಳಿದರು.

”ಬಿಜೆಪಿಯ ದುರಾಡಳಿತ, ಬೆಲೆ ಏರಿಕೆ, ಹಣದುಬ್ಬರದಿಂದ ನಾಡಿನ ಜನತೆ ಹೈರಾಣಾಗಿ ಅವರ ಬದುಕು ದುಸ್ತರವಾಗಿತ್ತು. ಹೀಗಾಗಿ ಐದು ಗ್ಯಾರಂಟಿಗಳ ಮೂಲಕ ನಾಡಿನ ಜನತೆಯ ಸಂಕಷ್ಟಗಳಿಗೆ ಸ್ಪಂದಿಸಲು ನಾವು ಮುಂದಾದೆವು. ಇಡಿ ದೇಶದಲ್ಲಿ ಇಷ್ಟೊಂದು ದೊಡ್ಡ ಮಟ್ಟದ , ದೊಡ್ಡ ಮೊತ್ತದ ಜನ ಸ್ಪಂದನೆಯ ಯೋಜನೆಗಳನ್ನು ಜಾರಿಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ” ಎಂದರು.

”ನಮ್ಮ ಗ್ಯಾರಂಟಿ ಯೋಜನೆಗಳನ್ನು ನಮ್ಮ ನಾಡಿನ ಶೇ. 97ಕ್ಕೂ ಹೆಚ್ಚು ಜನ ಸ್ವಾಗತಿಸಿ, ಸಂಭ್ರಮಿಸಿದ್ದಾರೆ. ಸಮಾಧಾನ ಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲೆಲ್ಲಾ ವರದಿ ಮಾಡಿವೆ. ಇದು ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಎದೆ ಎತ್ತಿ ಹೆಮ್ಮೆ ಪಡುವ ಸಂದರ್ಭ” ಎಂದು ಸಂತಸ ವ್ಯಕ್ತಪಡಿಸಿದರು.

”ನಮ್ಮ ಐದು ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗಗಳ ಬದುಕಿಗೂ ಸ್ಪಂದಿಸಿವೆ. ಇದು ಬಿಜೆಪಿ ಪರಿವಾರಕ್ಕೆ ನಡುಕ ಹುಟ್ಟಿಸಿದೆ. ಹೀಗಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ವಿಪರೀತ ಸುಳ್ಳುಗಳನ್ನು, ನಕಲಿ ವಿಡಿಯೊಗಳನ್ನು ಸೃಷ್ಟಿಸುತ್ತಾರೆ. ಶಾಸಕರೊಬ್ಬರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ, ಸುದ್ದಿ ಮಾಡಿಸಿದ್ದು ಈ ಕುತಂತ್ರದ ಭಾಗವೇ ಆಗಿದೆ’ ಎಂದರು.

”ಈಗ ಶಾಸಕರೇ ಆ ಪತ್ರ ತಮ್ಮದಲ್ಲ ಎಂದು ಸ್ಪಷ್ಟನೆ ನೀಡಿದ್ದಾಗಿದೆ. ವಿಪರ್ಯಾಸ ಅಂದರೆ ಸತ್ಯ ಏನು ಎಂದು ಗೊತ್ತಾಗುವುದರೊಳಗೆ ಅವರು ಸುಳ್ಳನ್ನು ವ್ಯಾಪಕವಾಗಿ ಹರಡಿದ್ದಾರೆ” ಎಂದು ಹೇಳಿದರು.

”ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡಿ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ‌ ಸರಮಾಲೆಗಳ ಮೂಲಕ ಅವರು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿದ್ದು ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ” ಎಂದು ಎಚ್ಚರಿಸಿದರು.

”ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ” ಎಂದು ಸಿಎಂ ಸಿದ್ದರಾಮಯ್ಯ ತಿಳಿಹೇಳಿದರು.

ಇದನ್ನೂ ಓದಿ: ಲಲಿತ ಮೋದಿ, ನೀರವ್ ಮೋದಿಯನ್ನು ನಿಮ್ಮೊಂದಿಗೆ ಹೋಲಿಸಬಹುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...