Homeಕರ್ನಾಟಕಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

”ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ, ಅವರು ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ ಈ ಬಗ್ಗೆ ಎಚ್ಚರದಿಂದಿರಿ” ಎಂದು ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

”ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳನ್ನು ಸೃಷ್ಟಿಸಿ, ಅದನ್ನು ಸತ್ಯ ಎನ್ನುವಂತೆ ಬಿಂಬಿಸುತ್ತಾರೆ. ಇದಕ್ಕಾಗಿ ಅವರು ವಿಪರೀತ ಖರ್ಚು ಮಾಡುತ್ತಾರೆ. ಇದನ್ನೆಲ್ಲಾ ನಾವು ಸರಿಯಾಗಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕು” ಎಂದು ತಮ್ಮ ಎಲ್ಲ ಶಾಸಕರಿಗೂ ಸಿದ್ದರಾಮಯ್ಯ ಹೇಳಿದರು.

”ಹೊಸ ಸರ್ಕಾರ ಬಂದ ಬಳಿಕ ನಮ್ಮ ಎದುರಿಗೆ ತಕ್ಷಣಕ್ಕೆ ರಾಜ್ಯದ ಆರ್ಥಿಕತೆಯನ್ನು ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿ ಇತ್ತು. ಜತೆಗೆ ಆಯವ್ಯಯ ರೂಪಿಸುವ ಹೊಣೆಗಾರಿಕೆಯೂ ಇತ್ತು ಹಾಗೂ ಹೊಸ ಸರ್ಕಾರವಾದ್ದರಿಂದ ಜಂಟಿ ಅಧಿವೇಶನವನ್ನೂ ಕರೆಯಬೇಕಿತ್ತು. ಹೊಸ ಶಾಸಕರಿಗೂ ತಮ್ಮ ಅಭಿಪ್ರಾಯ, ನಿಲುವನ್ನು ವ್ಯಕ್ತಪಡಿಸಲು ಅವಕಾಶ ಆಗಬೇಕು ಎನ್ನುವ ಕಾರಣದಿಂದ ಮೂರು ವಾರ ಮೊದಲ ಅಧಿವೇಶನವನ್ನು ನಡೆಸಿದೆವು” ಎಂದರು.

”ಈ ಆಯವ್ಯಯ ಅತ್ಯಂತ ಮಹತ್ವದ್ದಾಗಿತ್ತು. ಐದು ಗ್ಯಾರಂಟಿಗಳನ್ನು ಜಾರಿ ಮಾಡಲು 58 ಸಾವಿರ ಕೋಟಿ ರೂಪಾಯಿ ಬೇಕು ಎಂದು ಅಂದಾಜಿಸಲಾಗಿತ್ತು. ಹೀಗಾಗಿ ಈ ಆಯವ್ಯಯವನ್ನು ಅತ್ಯಂತ ಎಚ್ಚರಿಕೆಯಿಂದ ರೂಪಿಸುವುದಕ್ಕಾಗಿ, ಜತೆಗೆ ಐದು ಗ್ಯಾರಂಟಿಗಳಿಗೆ ಹಣ ಮೀಸಲಿಡುವ ಅಗತ್ಯವೂ ಇತ್ತು. ಆದ್ದರಿಂದ ನಾನೇ ಸ್ವತಃ ಬಜೆಟ್ ಸಿದ್ಧತೆಗೆ ಕೂರುವುದು ಅನಿವಾರ್ಯವಾಗಿತ್ತು. ಈ ಎಲ್ಲಾ ಕಾರಣಗಳಿಂದ ನಾನು ಇತರೆ ಸಂಗತಿಗಳ ಕಡೆಗೆ ಗಮನ ಕೊಡಲು ಸಾಧ್ಯ ಆಗಲಿಲ್ಲ” ಎಂದರು.

”ಅಧಿವೇಶನದ ನಡುವೆ ರಾಷ್ಟ್ರ ಮಟ್ಟದ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ನಡೆಸಿದೆವು. ಈ ಸಭೆ ಮುಗಿಯುತ್ತಿದ್ದಂತೆ ನಮ್ಮ ವರಿಷ್ಠರು ಶಾಸಕರು ಮತ್ತು ಸಚಿವರ ಜತೆ ಸಭೆ ನಡೆಸಲು ತೀರ್ಮಾನಿಸಿದ್ದರು. ಈ ಎರಡೂ ಕಾರಣಗಳಿಂದ ಶಾಸಕಾಂಗ ಸಭೆ ಕರೆಯುವುದು ತಡವಾಗಿದೆ” ಎಂದು ಹೇಳಿದರು.

”ಬಿಜೆಪಿಯ ದುರಾಡಳಿತ, ಬೆಲೆ ಏರಿಕೆ, ಹಣದುಬ್ಬರದಿಂದ ನಾಡಿನ ಜನತೆ ಹೈರಾಣಾಗಿ ಅವರ ಬದುಕು ದುಸ್ತರವಾಗಿತ್ತು. ಹೀಗಾಗಿ ಐದು ಗ್ಯಾರಂಟಿಗಳ ಮೂಲಕ ನಾಡಿನ ಜನತೆಯ ಸಂಕಷ್ಟಗಳಿಗೆ ಸ್ಪಂದಿಸಲು ನಾವು ಮುಂದಾದೆವು. ಇಡಿ ದೇಶದಲ್ಲಿ ಇಷ್ಟೊಂದು ದೊಡ್ಡ ಮಟ್ಟದ , ದೊಡ್ಡ ಮೊತ್ತದ ಜನ ಸ್ಪಂದನೆಯ ಯೋಜನೆಗಳನ್ನು ಜಾರಿಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ” ಎಂದರು.

”ನಮ್ಮ ಗ್ಯಾರಂಟಿ ಯೋಜನೆಗಳನ್ನು ನಮ್ಮ ನಾಡಿನ ಶೇ. 97ಕ್ಕೂ ಹೆಚ್ಚು ಜನ ಸ್ವಾಗತಿಸಿ, ಸಂಭ್ರಮಿಸಿದ್ದಾರೆ. ಸಮಾಧಾನ ಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲೆಲ್ಲಾ ವರದಿ ಮಾಡಿವೆ. ಇದು ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಎದೆ ಎತ್ತಿ ಹೆಮ್ಮೆ ಪಡುವ ಸಂದರ್ಭ” ಎಂದು ಸಂತಸ ವ್ಯಕ್ತಪಡಿಸಿದರು.

”ನಮ್ಮ ಐದು ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗಗಳ ಬದುಕಿಗೂ ಸ್ಪಂದಿಸಿವೆ. ಇದು ಬಿಜೆಪಿ ಪರಿವಾರಕ್ಕೆ ನಡುಕ ಹುಟ್ಟಿಸಿದೆ. ಹೀಗಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ವಿಪರೀತ ಸುಳ್ಳುಗಳನ್ನು, ನಕಲಿ ವಿಡಿಯೊಗಳನ್ನು ಸೃಷ್ಟಿಸುತ್ತಾರೆ. ಶಾಸಕರೊಬ್ಬರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ, ಸುದ್ದಿ ಮಾಡಿಸಿದ್ದು ಈ ಕುತಂತ್ರದ ಭಾಗವೇ ಆಗಿದೆ’ ಎಂದರು.

”ಈಗ ಶಾಸಕರೇ ಆ ಪತ್ರ ತಮ್ಮದಲ್ಲ ಎಂದು ಸ್ಪಷ್ಟನೆ ನೀಡಿದ್ದಾಗಿದೆ. ವಿಪರ್ಯಾಸ ಅಂದರೆ ಸತ್ಯ ಏನು ಎಂದು ಗೊತ್ತಾಗುವುದರೊಳಗೆ ಅವರು ಸುಳ್ಳನ್ನು ವ್ಯಾಪಕವಾಗಿ ಹರಡಿದ್ದಾರೆ” ಎಂದು ಹೇಳಿದರು.

”ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡಿ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ‌ ಸರಮಾಲೆಗಳ ಮೂಲಕ ಅವರು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿದ್ದು ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ” ಎಂದು ಎಚ್ಚರಿಸಿದರು.

”ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ” ಎಂದು ಸಿಎಂ ಸಿದ್ದರಾಮಯ್ಯ ತಿಳಿಹೇಳಿದರು.

ಇದನ್ನೂ ಓದಿ: ಲಲಿತ ಮೋದಿ, ನೀರವ್ ಮೋದಿಯನ್ನು ನಿಮ್ಮೊಂದಿಗೆ ಹೋಲಿಸಬಹುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...