Homeಕರ್ನಾಟಕಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

- Advertisement -
- Advertisement -

“ಒಳಮೀಸಲಾತಿ ಜಾರಿಯಾಗಿದೆ ಎಂದು ಸುಳ್ಳು ಜಾಹೀರಾತು ನೀಡದಿರಿ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಮನವಿ ಒತ್ತಾಯಿಸಿದ್ದಾರೆ.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಮಿತಿಯು ಕಳೆದ 111 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಡಲಾಯಿತು. ಸಮಾರೋಪ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾರಪ್ಪನವರು ಮಾತನಾಡಿದರು.

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ. ಇದನ್ನು ಬಗೆಹರಿಸಬೇಕಿದೆ. ಆದರೆ ಒಳ ಮೀಸಲಾತಿ ಈಗಾಗಲೇ ಜಾರಿಯಾಗಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡುವುದು ತಪ್ಪು” ಎಂದು ತಿಳಿಸಿದರು.

“ಒಳಮೀಸಲಾತಿ ಜಾರಿ ಮಾಡಿ ಸಾಮಾಜಿಕ ನ್ಯಾಯ ನೀಡಿದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಹಾಗೂ ಕೇಂದ್ರ ಸಚಿವರಾದ ಶ್ರೀ ಅಮಿತ್‌ ಶಾ ಜೀ ಮತ್ತು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರಿಗೂ ಹಾಗೂ ಸಮುದಾಯದ ಮುಖಂಡರಿಗೂ ಹೃದಯಪೂರ್ವಕ ಧನ್ಯವಾದಗಳು” ಎಂಬ ಒಕ್ಕಣೆಯೊಂದಿಗೆ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಲಾಗುತ್ತಿದೆ. ‘ಮಾದಿಗ ಮಹಾಸಭಾ, ಬೆಂಗಳೂರು’ ಎಂಬ ಹೆಸರಲ್ಲಿ ಜಾಹೀರಾತು ಪ್ರಕಟವಾಗುತ್ತಿದೆ. ಜಾರಿಯೇ ಆಗದಿರುವ ಮೀಸಲಾತಿ ಹೆಚ್ಚಳದಲ್ಲಿ ಮೀಸಲಾತಿ ಹಂಚಿಕೆ ಮಾಡಿರುವುದು ಗೊಂದಲ ಸೃಷ್ಟಿಸಿದೆ. ಹೀಗಿರುವಾಗ ಬಿಜೆಪಿ ನಾಯಕರ ಫೋಟೋಗಳೊಂದಿಗೆ ಜಾಹೀರಾತನ್ನು ನೀಡುತ್ತಿರುವ ಕುರಿತು ವೇದಿಕೆ ಕಳವಳ ವ್ಯಕ್ತಪಡಿಸಿದೆ.

ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿರುವ ಜಾಹೀರಾತು

“ಈ ನಡೆ ತಪ್ಪು. ವಿಜಯೋತ್ಸವ ಆಚರಿಸಿಕೊಳ್ಳುವುದಕ್ಕೆ ತಕರಾರು ಇಲ್ಲ. ಆದರೆ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ವಿಜಯೋತ್ಸವ ಮಾಡಿಕೊಳ್ಳುವ ಸಮಯ ಇದಲ್ಲ. ನಮ್ಮ ಕೆಲಸ ಇನ್ನೂ ಇದೆ. ಏನೇ ಹೇಳಿದರೂ ಜನಾಂಗಕ್ಕೆ ಸತ್ಯವನ್ನೇ ಹೇಳಬೇಕು. ರಾಜಕೀಯ ಮೈಲೇಜ್‌ಗಾಗಿ ಸುಳ್ಳುಗಳನ್ನು ಹೇಳಬಾರದು. ಈಗ ಆಗಿರುವ ಬೆಳವಣಿಗೆಗಳಲ್ಲಿ ವಿಜಯೋತ್ಸವ ಆಚರಿಸಿಕೊಳ್ಳುವಂತಹದ್ದು ಏನೂ ಇಲ್ಲ” ಎಂದು ಮಾರಪ್ಪ ಎಚ್ಚರಿಸಿದರು.

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಮೀಸಲಾತಿ ವರ್ಗೀಕರಣವನ್ನು ಗೊಂದಲದ ಗೂಡಾಗಿಸಲಾಗಿದೆ. ಮೂಲ ಸಮುದಾಯಗಳನ್ನು ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಗುಂಪುಗಳಾಗಿ ವರ್ಗೀಕರಿಸಬೇಕೇ ಹೊರತು, ತಮಗೆ ಬೇಕಾದಂತೆ ಪಲ್ಲಟ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ ಮಾಡಿರುವ ಆದೇಶದಲ್ಲಿ ಆದಿಕರ್ನಾಟಕ (ಎ.ಕೆ.) ಮತ್ತು ಆದಿದ್ರಾವಿಡ (ಎ.ಡಿ.) ವರ್ಗೀಕರಣ ಅವೈಜ್ಞಾನಿಕವಾಗಿದೆ. ನಿರ್ದಿಷ್ಟ ಸಮುದಾಯವೇ ಎ.ಕೆ. ಅಥವಾ ಎ.ಡಿ. ಎಂದು ತಿಳಿಸುವುದಕ್ಕೆ ಇವರೇನು ತಜ್ಞರಾ? ಸರ್ಕಾರ ನೇಮಿಸಿದ ಸಚಿವ ಸಂಪುಟ ಉಪಸಮಿತಿಯಲ್ಲಿ ಯಾರಾದರೂ ತಜ್ಞರು ಇದ್ದರಾ?” ಎಂದು ಪ್ರಶ್ನಿಸಿದರು.

“ಮೈಸೂರು ಭಾಗದಲ್ಲಿ ಹೊಲೆಯ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಎ.ಕೆ.ಯಲ್ಲಿದೆ, ಬೆಂಗಳೂರಿನಿಂದ ಕೊಪ್ಪಳದವರೆಗೂ ಮಾದಿಗರು ಎ.ಕೆ.ಯಲ್ಲಿದ್ದಾರೆ. ಒಂದಿಷ್ಟು ಭಾಗದಲ್ಲಿ ಎ.ಡಿ.ಯಲ್ಲಿ ಹೊಲೆಯರಿದ್ದರೆ, ಮತ್ತೊಂದಿಷ್ಟು ಭಾಗದಲ್ಲಿ ಮಾದಿಗರಿದ್ದಾರೆ. ಆದರೆ ಆದಿಕರ್ನಾಟಕದವರೆಲ್ಲ ಹೊಲೆಯರು, ಆದಿ ದ್ರಾವಿಡರೆಲ್ಲ ಮಾದಿಗರು ಎಂದು ಸರ್ಕಾರ ಅವೈಜ್ಞಾನಿಕವಾಗಿ ನಿಲುವು ತಾಳಿದೆ” ಎಂದು ಟೀಕಿಸಿದರು.

“ಅಭಿವೃದ್ಧಿ ಹೊಂದಿದ ಕೆಲವು ಸಮುದಾಯಗಳನ್ನು ಗ್ರೂಪ್‌ 4ರಲ್ಲಿ ಸೇರಿಸಲಾಗಿದೆ. ಅಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿವೆ. ಬಲಾಢ್ಯರೊಂದಿಗೆ ಈ ಅಲೆಮಾರಿಗಳು ಸ್ಪರ್ಧೆ ಮಾಡಲು ಸಾಧ್ಯವೇ? ಈ ರೀತಿಯ ತೊಡಕುಗಳಿವೆ. ಇವು ಆಡಳಿತಾತ್ಮಕವಾಗಿ ಸರಿಪಡಿಸುವುದು ಕಷ್ಟವೇನಲ್ಲ” ಎಂದು ಅಭಿಪ್ರಾಯಪಟ್ಟರು.

“ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿಯಾಗುವವರೆಗೂ, ಲೋಕಸಭಾ ಚುನಾವಣೆಯವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಮ್ಮ ಬೇಡಿಕೆಗಳನ್ನು ಇಡುತ್ತೇವೆ. ಸದ್ಯಕ್ಕೆ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟವನ್ನು ಮೊಟಕುಗೊಳಿಸುತ್ತಿದ್ದೇವೆ, ಆದರೆ ಚುನಾವಣೆ ಮಧ್ಯದಲ್ಲಿ ನಮ್ಮ ಹೋರಾಟ ಆರಂಭಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಶಿವರಾಯ ಅಕ್ಕರಕಿ ಮಾತನಾಡಿ, “ನಮ್ಮ ವೇದಿಕೆಯ ವತಿಯಿಂದ ಯಾವುದೇ ರಾಜಕೀಯ ನಿಲುವುಗಳನ್ನು ತೆಗೆದುಕೊಂಡಿಲ್ಲ. ತಟಸ್ಥ ನೀತಿ ನಮ್ಮದಾಗಿದೆ. ಸಮುದಾಯದ ಜನತೆ ತಮಗೆ ಇಷ್ಟವಾದವರಿಗೆ ಬೆಂಬಲ ನೀಡಲಿದ್ದಾರೆ” ಎಂದು ಹೇಳಿದರು.

 

“ಒಂದು ಕಾಲದಲ್ಲಿ ಮಾದಿಗ ಸಮುದಾಯದ 24 ಶಾಸಕರು ಇದ್ದರು. ಇಂದು ನಮ್ಮ ಸಂಖ್ಯೆ ಕೇವಲ 5ಕ್ಕೆ ಬಂದು ನಿಂತಿದೆ. ರಾಜಕೀಯ ಪ್ರಾತಿನಿಧ್ಯದ ಕೊರತೆ ಆಗಿದೆ. ನಮ್ಮ ಸಮುದಾಯ ಹೆಚ್ಚಿನ ಸಂಖ್ಯೆ ಇರುವಲ್ಲಿ ನಮ್ಮವರನ್ನು ಗೆಲ್ಲಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ. ಜೊತೆಗೆ ಅಸ್ಪೃಶ್ಯ ಜನಾಂಗದ ಹೊಲೆಯ, ತ್ರಿಮಸ್ಥ ಚರ್ಮಕಾರ, ಮಾದಿಗ ಸಂಬಂಧಿತ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ” ಎಂದು ವಿವರಿಸಿದರು.

ಮುಖಂಡರಾದ ಕರಿಯಪ್ಪ ಗುಡಿಮನಿ, ನಂದಕುಮಾರ್‌, ಜೆ.ಡಿ.ರಾಜು, ಹನುಮೇಶ್ ಗುಂಡೂರು, ಪ್ರೊ.ಸಿ.ಕೆ.ಮಹೇಶ್‌, ವೆಂಕಟೇಶ್‌ ದೀಪಾಂಜಲಿನಗರ ಮೊದಲಾದವರು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...