Homeಕರ್ನಾಟಕಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

- Advertisement -
- Advertisement -

“ಒಳಮೀಸಲಾತಿ ಜಾರಿಯಾಗಿದೆ ಎಂದು ಸುಳ್ಳು ಜಾಹೀರಾತು ನೀಡದಿರಿ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಮನವಿ ಒತ್ತಾಯಿಸಿದ್ದಾರೆ.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಮಿತಿಯು ಕಳೆದ 111 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಡಲಾಯಿತು. ಸಮಾರೋಪ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾರಪ್ಪನವರು ಮಾತನಾಡಿದರು.

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ. ಇದನ್ನು ಬಗೆಹರಿಸಬೇಕಿದೆ. ಆದರೆ ಒಳ ಮೀಸಲಾತಿ ಈಗಾಗಲೇ ಜಾರಿಯಾಗಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡುವುದು ತಪ್ಪು” ಎಂದು ತಿಳಿಸಿದರು.

“ಒಳಮೀಸಲಾತಿ ಜಾರಿ ಮಾಡಿ ಸಾಮಾಜಿಕ ನ್ಯಾಯ ನೀಡಿದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಹಾಗೂ ಕೇಂದ್ರ ಸಚಿವರಾದ ಶ್ರೀ ಅಮಿತ್‌ ಶಾ ಜೀ ಮತ್ತು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರಿಗೂ ಹಾಗೂ ಸಮುದಾಯದ ಮುಖಂಡರಿಗೂ ಹೃದಯಪೂರ್ವಕ ಧನ್ಯವಾದಗಳು” ಎಂಬ ಒಕ್ಕಣೆಯೊಂದಿಗೆ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಲಾಗುತ್ತಿದೆ. ‘ಮಾದಿಗ ಮಹಾಸಭಾ, ಬೆಂಗಳೂರು’ ಎಂಬ ಹೆಸರಲ್ಲಿ ಜಾಹೀರಾತು ಪ್ರಕಟವಾಗುತ್ತಿದೆ. ಜಾರಿಯೇ ಆಗದಿರುವ ಮೀಸಲಾತಿ ಹೆಚ್ಚಳದಲ್ಲಿ ಮೀಸಲಾತಿ ಹಂಚಿಕೆ ಮಾಡಿರುವುದು ಗೊಂದಲ ಸೃಷ್ಟಿಸಿದೆ. ಹೀಗಿರುವಾಗ ಬಿಜೆಪಿ ನಾಯಕರ ಫೋಟೋಗಳೊಂದಿಗೆ ಜಾಹೀರಾತನ್ನು ನೀಡುತ್ತಿರುವ ಕುರಿತು ವೇದಿಕೆ ಕಳವಳ ವ್ಯಕ್ತಪಡಿಸಿದೆ.

ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿರುವ ಜಾಹೀರಾತು

“ಈ ನಡೆ ತಪ್ಪು. ವಿಜಯೋತ್ಸವ ಆಚರಿಸಿಕೊಳ್ಳುವುದಕ್ಕೆ ತಕರಾರು ಇಲ್ಲ. ಆದರೆ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ವಿಜಯೋತ್ಸವ ಮಾಡಿಕೊಳ್ಳುವ ಸಮಯ ಇದಲ್ಲ. ನಮ್ಮ ಕೆಲಸ ಇನ್ನೂ ಇದೆ. ಏನೇ ಹೇಳಿದರೂ ಜನಾಂಗಕ್ಕೆ ಸತ್ಯವನ್ನೇ ಹೇಳಬೇಕು. ರಾಜಕೀಯ ಮೈಲೇಜ್‌ಗಾಗಿ ಸುಳ್ಳುಗಳನ್ನು ಹೇಳಬಾರದು. ಈಗ ಆಗಿರುವ ಬೆಳವಣಿಗೆಗಳಲ್ಲಿ ವಿಜಯೋತ್ಸವ ಆಚರಿಸಿಕೊಳ್ಳುವಂತಹದ್ದು ಏನೂ ಇಲ್ಲ” ಎಂದು ಮಾರಪ್ಪ ಎಚ್ಚರಿಸಿದರು.

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಮೀಸಲಾತಿ ವರ್ಗೀಕರಣವನ್ನು ಗೊಂದಲದ ಗೂಡಾಗಿಸಲಾಗಿದೆ. ಮೂಲ ಸಮುದಾಯಗಳನ್ನು ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಗುಂಪುಗಳಾಗಿ ವರ್ಗೀಕರಿಸಬೇಕೇ ಹೊರತು, ತಮಗೆ ಬೇಕಾದಂತೆ ಪಲ್ಲಟ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ ಮಾಡಿರುವ ಆದೇಶದಲ್ಲಿ ಆದಿಕರ್ನಾಟಕ (ಎ.ಕೆ.) ಮತ್ತು ಆದಿದ್ರಾವಿಡ (ಎ.ಡಿ.) ವರ್ಗೀಕರಣ ಅವೈಜ್ಞಾನಿಕವಾಗಿದೆ. ನಿರ್ದಿಷ್ಟ ಸಮುದಾಯವೇ ಎ.ಕೆ. ಅಥವಾ ಎ.ಡಿ. ಎಂದು ತಿಳಿಸುವುದಕ್ಕೆ ಇವರೇನು ತಜ್ಞರಾ? ಸರ್ಕಾರ ನೇಮಿಸಿದ ಸಚಿವ ಸಂಪುಟ ಉಪಸಮಿತಿಯಲ್ಲಿ ಯಾರಾದರೂ ತಜ್ಞರು ಇದ್ದರಾ?” ಎಂದು ಪ್ರಶ್ನಿಸಿದರು.

“ಮೈಸೂರು ಭಾಗದಲ್ಲಿ ಹೊಲೆಯ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಎ.ಕೆ.ಯಲ್ಲಿದೆ, ಬೆಂಗಳೂರಿನಿಂದ ಕೊಪ್ಪಳದವರೆಗೂ ಮಾದಿಗರು ಎ.ಕೆ.ಯಲ್ಲಿದ್ದಾರೆ. ಒಂದಿಷ್ಟು ಭಾಗದಲ್ಲಿ ಎ.ಡಿ.ಯಲ್ಲಿ ಹೊಲೆಯರಿದ್ದರೆ, ಮತ್ತೊಂದಿಷ್ಟು ಭಾಗದಲ್ಲಿ ಮಾದಿಗರಿದ್ದಾರೆ. ಆದರೆ ಆದಿಕರ್ನಾಟಕದವರೆಲ್ಲ ಹೊಲೆಯರು, ಆದಿ ದ್ರಾವಿಡರೆಲ್ಲ ಮಾದಿಗರು ಎಂದು ಸರ್ಕಾರ ಅವೈಜ್ಞಾನಿಕವಾಗಿ ನಿಲುವು ತಾಳಿದೆ” ಎಂದು ಟೀಕಿಸಿದರು.

“ಅಭಿವೃದ್ಧಿ ಹೊಂದಿದ ಕೆಲವು ಸಮುದಾಯಗಳನ್ನು ಗ್ರೂಪ್‌ 4ರಲ್ಲಿ ಸೇರಿಸಲಾಗಿದೆ. ಅಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿವೆ. ಬಲಾಢ್ಯರೊಂದಿಗೆ ಈ ಅಲೆಮಾರಿಗಳು ಸ್ಪರ್ಧೆ ಮಾಡಲು ಸಾಧ್ಯವೇ? ಈ ರೀತಿಯ ತೊಡಕುಗಳಿವೆ. ಇವು ಆಡಳಿತಾತ್ಮಕವಾಗಿ ಸರಿಪಡಿಸುವುದು ಕಷ್ಟವೇನಲ್ಲ” ಎಂದು ಅಭಿಪ್ರಾಯಪಟ್ಟರು.

“ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿಯಾಗುವವರೆಗೂ, ಲೋಕಸಭಾ ಚುನಾವಣೆಯವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಮ್ಮ ಬೇಡಿಕೆಗಳನ್ನು ಇಡುತ್ತೇವೆ. ಸದ್ಯಕ್ಕೆ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟವನ್ನು ಮೊಟಕುಗೊಳಿಸುತ್ತಿದ್ದೇವೆ, ಆದರೆ ಚುನಾವಣೆ ಮಧ್ಯದಲ್ಲಿ ನಮ್ಮ ಹೋರಾಟ ಆರಂಭಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಶಿವರಾಯ ಅಕ್ಕರಕಿ ಮಾತನಾಡಿ, “ನಮ್ಮ ವೇದಿಕೆಯ ವತಿಯಿಂದ ಯಾವುದೇ ರಾಜಕೀಯ ನಿಲುವುಗಳನ್ನು ತೆಗೆದುಕೊಂಡಿಲ್ಲ. ತಟಸ್ಥ ನೀತಿ ನಮ್ಮದಾಗಿದೆ. ಸಮುದಾಯದ ಜನತೆ ತಮಗೆ ಇಷ್ಟವಾದವರಿಗೆ ಬೆಂಬಲ ನೀಡಲಿದ್ದಾರೆ” ಎಂದು ಹೇಳಿದರು.

 

“ಒಂದು ಕಾಲದಲ್ಲಿ ಮಾದಿಗ ಸಮುದಾಯದ 24 ಶಾಸಕರು ಇದ್ದರು. ಇಂದು ನಮ್ಮ ಸಂಖ್ಯೆ ಕೇವಲ 5ಕ್ಕೆ ಬಂದು ನಿಂತಿದೆ. ರಾಜಕೀಯ ಪ್ರಾತಿನಿಧ್ಯದ ಕೊರತೆ ಆಗಿದೆ. ನಮ್ಮ ಸಮುದಾಯ ಹೆಚ್ಚಿನ ಸಂಖ್ಯೆ ಇರುವಲ್ಲಿ ನಮ್ಮವರನ್ನು ಗೆಲ್ಲಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ. ಜೊತೆಗೆ ಅಸ್ಪೃಶ್ಯ ಜನಾಂಗದ ಹೊಲೆಯ, ತ್ರಿಮಸ್ಥ ಚರ್ಮಕಾರ, ಮಾದಿಗ ಸಂಬಂಧಿತ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ” ಎಂದು ವಿವರಿಸಿದರು.

ಮುಖಂಡರಾದ ಕರಿಯಪ್ಪ ಗುಡಿಮನಿ, ನಂದಕುಮಾರ್‌, ಜೆ.ಡಿ.ರಾಜು, ಹನುಮೇಶ್ ಗುಂಡೂರು, ಪ್ರೊ.ಸಿ.ಕೆ.ಮಹೇಶ್‌, ವೆಂಕಟೇಶ್‌ ದೀಪಾಂಜಲಿನಗರ ಮೊದಲಾದವರು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...