Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...